AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ

ಬೋಟ್ ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 15, 2021 | 6:18 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬೋಟ್ ಮುಳುಗಿ 9 ಮೀನುಗಾರರು ಸಾವನ್ನಪ್ಪಿದ್ದಾರೆ. ಬೋಟ್​ನಲ್ಲಿದ್ದ ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬಂಗಾಳಕೊಲ್ಲಿ (Bay of Bengal) ಸಮುದ್ರದಲ್ಲಿ ಬುಧವಾರ ಮುಂಜಾನೆ ಈ ದುರಂತ ಸಂಭವಿಸಿದೆ. ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿದ್ದ ಬೋಟ್ ಇದ್ದಕ್ಕಿದ್ದಂತೆ ಮುಳುಗಿದೆ.

ಈಗಾಗಲೇ 9 ಮೀನುಗಾರರ ಶವಗಳನ್ನು ದಡಕ್ಕೆ ತರಲಾಗಿದೆ. ಇನ್ನೊಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಕೋಸ್ಟಲ್ ಗಾರ್ಡ್​ಗಳ ಸಹಾಯದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಕಾಕ್​ದ್ವೀಪ್ ಎಸ್​ಡಿಪಿಓ ಅನಿಲ್ ಕುಮಾರ್ ರಾಯ್ ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ 12 ಜನರು ಬಕ್ಕಾಲಿ-ಫ್ರಾಜರ್​ಗಂಜ್ ಕರಾವಳಿ ಪ್ರದೇಶದಿಂದ 25ರಿಂದ 30 ಕಿ.ಮೀ ದೂರ ಚಲಿಸುತ್ತಿದ್ದಂತೆ ಬೋಟ್ ಮುಳುಗಿತ್ತು. ಬೋಟ್ ಮುಳುಗಲು ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ. ನಾಪತ್ತೆಯಾಗಿರುವ ಇನ್ನೋರ್ವ ಕೂಡ ಬದುಕಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಹೈಮಾಬತಿ ಎಂಬ ಹಡಗು ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಹಿಂದೆ ಬರುತ್ತಿದ್ದ ಇನ್ನೊಂದು ಬೋಟ್​ನವರು ಆ ಇಬ್ಬರನ್ನು ಎಳೆದುಕೊಂಡು ರಕ್ಷಿಸಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ. ಅವರಲ್ಲಿ 9 ಜನರು ಮೃತದೇಹಗಳು ಪತ್ತೆಯಾಗಿದ್ದು, ಇನ್ನೊಬ್ಬರ ಶವ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Rudraksh Varanasi: ಶಿವಲಿಂಗದ ಆಕಾರದಲ್ಲಿ ವಾರಾಣಸಿಯಲ್ಲಿ ಎದ್ದು ನಿಂತಿದೆ ರುದ್ರಾಕ್ಷ ಸೆಂಟರ್; ಈ ಭವ್ಯ ಕಟ್ಟಡದ ವಿಶೇಷತೆಯೇನು ಗೊತ್ತಾ?

ಇದನ್ನೂ ಓದಿ: ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ

Published On - 6:17 pm, Thu, 15 July 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​