AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು

ಪೈಗಂಬರ್ ಶೇಖ್, ಅಹ್ಮದ್ ಅಲಿ ಮತ್ತು ನೂರ್ ಆಲಂ ಮೊಮಿನ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಈ ಪ್ರಕರಣವು ಬೋಧಗಯಾ ದೇವಾಲಯದ ಆವರಣದಲ್ಲಿ ಮತ್ತು ಸುತ್ತಮುತ್ತ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಕ್ಕೆ ಸಂಬಂಧಿಸಿದೆ...

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 17, 2021 | 7:43 PM

Share

ದೆಹಲಿ: 2018 ರಲ್ಲಿ ಬೋಧಗಯಾದ (Bodh Gaya)ಮಹಾಬೋಧಿ ದೇವಾಲಯದ ಸಂಕೀರ್ಣದಲ್ಲಿ ಸ್ಫೋಟಕಗಳನ್ನಿರಿಸಿದ್ದಕ್ಕಾಗಿ (IEDs) ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಭಯೋತ್ಪಾದಕ ಗುಂಪಿಗೆ ಸೇರಿದ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು 5 ಮಂದಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ಎಐಎ ವಿಶೇಷ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ. ಪೈಗಂಬರ್ ಶೇಖ್, ಅಹ್ಮದ್ ಅಲಿ, ನೂರ್ ಆಲಂ ಮೊಮಿನ್, ಆದಿಲ್ ಶೇಖ್, ದಿಲ್ವಾರ್ ಹುಸೇನ್, ಅಬ್ದುಲ್ ಕರೀಂ, ಮುಸ್ತಾಫಿಜುರ್ ರೆಹಮಾನ್ ಮತ್ತು ಆರಿಫ್ ಹುಸೇನ್ ಅವರನ್ನು ಶುಕ್ರವಾರ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (Unlawful Activities (Prevention) Act )ಮತ್ತು ಸ್ಫೋಟಕ ವಸ್ತು ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ಪೈಗಂಬರ್ ಶೇಖ್, ಅಹ್ಮದ್ ಅಲಿ ಮತ್ತು ನೂರ್ ಆಲಂ ಮೊಮಿನ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಈ ಪ್ರಕರಣವು ಬೋಧಗಯಾ ದೇವಾಲಯದ ಆವರಣದಲ್ಲಿ ಮತ್ತು ಸುತ್ತಮುತ್ತ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಕ್ಕೆ ಸಂಬಂಧಿಸಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿ ತಿಳಿಸಿದ್ದಾರೆ. ಕಲ್ಚಕ್ರ ಮೈದಾನದ ಗೇಟ್ ಸಂಖ್ಯೆ 5 ರಲ್ಲಿ ಪತ್ತೆಯಾದ ಮೊದಲ ಐಇಡಿ, ಅದನ್ನು ಇಡುವ ಹೊತ್ತಲ್ಲಿ ಸ್ಫೋಟಗೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶ್ರೀಲಂಕಾ ಮಠದ ಬಳಿ ಮತ್ತು ಮಹಾಬೋಧಿ ದೇವಸ್ಥಾನದ ಗೇಟ್ ಸಂಖ್ಯೆ 4 ರ ಮೆಟ್ಟಿಲುಗಳಲ್ಲಿ ಇನ್ನೂ ಎರಡು ಸಜೀವ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಲೈಲಾಮಾ ಮತ್ತು ಬಿಹಾರದ ರಾಜ್ಯಪಾಲರ ಭೇಟಿಯ ಸಂದರ್ಭದಲ್ಲಿ ಅಪರಾಧಿಗಳು ದೇವಾಲಯದ ಸಂಕೀರ್ಣದಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಇರಿಸುವ ಮೂಲಕ ಸಂಚು ರೂಪಿಸಿದ್ದಾರೆ ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಅವರು ಪರಸ್ಪರ ಸಂಪರ್ಕಿಸಿದರು, ಒಟ್ಟಿಗೆ ಪ್ರಯಾಣಿಸಿದರು, ಸಂಚು ರೂಪಿಸಿದರು ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿದರು. ಜನವರಿ 19, 2018 ರಂದು ದೇವಾಲಯದ ಸಂಕೀರ್ಣದಲ್ಲಿ ಈ ಮೂರು ಐಇಡಿಗಳನ್ನು ತಯಾರಿಸಿ ಅಲ್ಲಿರಿಸಿದರು ಎಂದು ಅಧಿಕಾರಿ ಹೇಳಿದರು. ಪ್ರಕರಣದ ಚಾರ್ಜ್ ಶೀಟ್ ಅನ್ನು ಸೆಪ್ಟೆಂಬರ್, 2018 ರಲ್ಲಿ ಸಲ್ಲಿಸಲಾಯಿತು.ನಂತರ ಪೂರಕ ಚಾರ್ಜ್ ಶೀಟ್ ಅನ್ನು ಜನವರಿ 2019 ರಲ್ಲಿ ಸಲ್ಲಿಸಲಾಯಿತು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:  ವಾಯು ಮಾಲಿನ್ಯ: ಹಂತ ಹಂತವಾಗಿ ದೆಹಲಿ-ಎನ್‌ಸಿಆರ್ ಶಾಲೆಗಳ ಪುನಾರಂಭಕ್ಕೆ ಅನುಮತಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್