AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು

ಪೈಗಂಬರ್ ಶೇಖ್, ಅಹ್ಮದ್ ಅಲಿ ಮತ್ತು ನೂರ್ ಆಲಂ ಮೊಮಿನ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಈ ಪ್ರಕರಣವು ಬೋಧಗಯಾ ದೇವಾಲಯದ ಆವರಣದಲ್ಲಿ ಮತ್ತು ಸುತ್ತಮುತ್ತ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಕ್ಕೆ ಸಂಬಂಧಿಸಿದೆ...

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 17, 2021 | 7:43 PM

Share

ದೆಹಲಿ: 2018 ರಲ್ಲಿ ಬೋಧಗಯಾದ (Bodh Gaya)ಮಹಾಬೋಧಿ ದೇವಾಲಯದ ಸಂಕೀರ್ಣದಲ್ಲಿ ಸ್ಫೋಟಕಗಳನ್ನಿರಿಸಿದ್ದಕ್ಕಾಗಿ (IEDs) ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಭಯೋತ್ಪಾದಕ ಗುಂಪಿಗೆ ಸೇರಿದ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು 5 ಮಂದಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ಎಐಎ ವಿಶೇಷ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ. ಪೈಗಂಬರ್ ಶೇಖ್, ಅಹ್ಮದ್ ಅಲಿ, ನೂರ್ ಆಲಂ ಮೊಮಿನ್, ಆದಿಲ್ ಶೇಖ್, ದಿಲ್ವಾರ್ ಹುಸೇನ್, ಅಬ್ದುಲ್ ಕರೀಂ, ಮುಸ್ತಾಫಿಜುರ್ ರೆಹಮಾನ್ ಮತ್ತು ಆರಿಫ್ ಹುಸೇನ್ ಅವರನ್ನು ಶುಕ್ರವಾರ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (Unlawful Activities (Prevention) Act )ಮತ್ತು ಸ್ಫೋಟಕ ವಸ್ತು ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ಪೈಗಂಬರ್ ಶೇಖ್, ಅಹ್ಮದ್ ಅಲಿ ಮತ್ತು ನೂರ್ ಆಲಂ ಮೊಮಿನ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಈ ಪ್ರಕರಣವು ಬೋಧಗಯಾ ದೇವಾಲಯದ ಆವರಣದಲ್ಲಿ ಮತ್ತು ಸುತ್ತಮುತ್ತ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಕ್ಕೆ ಸಂಬಂಧಿಸಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿ ತಿಳಿಸಿದ್ದಾರೆ. ಕಲ್ಚಕ್ರ ಮೈದಾನದ ಗೇಟ್ ಸಂಖ್ಯೆ 5 ರಲ್ಲಿ ಪತ್ತೆಯಾದ ಮೊದಲ ಐಇಡಿ, ಅದನ್ನು ಇಡುವ ಹೊತ್ತಲ್ಲಿ ಸ್ಫೋಟಗೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶ್ರೀಲಂಕಾ ಮಠದ ಬಳಿ ಮತ್ತು ಮಹಾಬೋಧಿ ದೇವಸ್ಥಾನದ ಗೇಟ್ ಸಂಖ್ಯೆ 4 ರ ಮೆಟ್ಟಿಲುಗಳಲ್ಲಿ ಇನ್ನೂ ಎರಡು ಸಜೀವ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಲೈಲಾಮಾ ಮತ್ತು ಬಿಹಾರದ ರಾಜ್ಯಪಾಲರ ಭೇಟಿಯ ಸಂದರ್ಭದಲ್ಲಿ ಅಪರಾಧಿಗಳು ದೇವಾಲಯದ ಸಂಕೀರ್ಣದಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಇರಿಸುವ ಮೂಲಕ ಸಂಚು ರೂಪಿಸಿದ್ದಾರೆ ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಅವರು ಪರಸ್ಪರ ಸಂಪರ್ಕಿಸಿದರು, ಒಟ್ಟಿಗೆ ಪ್ರಯಾಣಿಸಿದರು, ಸಂಚು ರೂಪಿಸಿದರು ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿದರು. ಜನವರಿ 19, 2018 ರಂದು ದೇವಾಲಯದ ಸಂಕೀರ್ಣದಲ್ಲಿ ಈ ಮೂರು ಐಇಡಿಗಳನ್ನು ತಯಾರಿಸಿ ಅಲ್ಲಿರಿಸಿದರು ಎಂದು ಅಧಿಕಾರಿ ಹೇಳಿದರು. ಪ್ರಕರಣದ ಚಾರ್ಜ್ ಶೀಟ್ ಅನ್ನು ಸೆಪ್ಟೆಂಬರ್, 2018 ರಲ್ಲಿ ಸಲ್ಲಿಸಲಾಯಿತು.ನಂತರ ಪೂರಕ ಚಾರ್ಜ್ ಶೀಟ್ ಅನ್ನು ಜನವರಿ 2019 ರಲ್ಲಿ ಸಲ್ಲಿಸಲಾಯಿತು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:  ವಾಯು ಮಾಲಿನ್ಯ: ಹಂತ ಹಂತವಾಗಿ ದೆಹಲಿ-ಎನ್‌ಸಿಆರ್ ಶಾಲೆಗಳ ಪುನಾರಂಭಕ್ಕೆ ಅನುಮತಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್