AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು

ಪೈಗಂಬರ್ ಶೇಖ್, ಅಹ್ಮದ್ ಅಲಿ ಮತ್ತು ನೂರ್ ಆಲಂ ಮೊಮಿನ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಈ ಪ್ರಕರಣವು ಬೋಧಗಯಾ ದೇವಾಲಯದ ಆವರಣದಲ್ಲಿ ಮತ್ತು ಸುತ್ತಮುತ್ತ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಕ್ಕೆ ಸಂಬಂಧಿಸಿದೆ...

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 17, 2021 | 7:43 PM

Share

ದೆಹಲಿ: 2018 ರಲ್ಲಿ ಬೋಧಗಯಾದ (Bodh Gaya)ಮಹಾಬೋಧಿ ದೇವಾಲಯದ ಸಂಕೀರ್ಣದಲ್ಲಿ ಸ್ಫೋಟಕಗಳನ್ನಿರಿಸಿದ್ದಕ್ಕಾಗಿ (IEDs) ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಭಯೋತ್ಪಾದಕ ಗುಂಪಿಗೆ ಸೇರಿದ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು 5 ಮಂದಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ಎಐಎ ವಿಶೇಷ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ. ಪೈಗಂಬರ್ ಶೇಖ್, ಅಹ್ಮದ್ ಅಲಿ, ನೂರ್ ಆಲಂ ಮೊಮಿನ್, ಆದಿಲ್ ಶೇಖ್, ದಿಲ್ವಾರ್ ಹುಸೇನ್, ಅಬ್ದುಲ್ ಕರೀಂ, ಮುಸ್ತಾಫಿಜುರ್ ರೆಹಮಾನ್ ಮತ್ತು ಆರಿಫ್ ಹುಸೇನ್ ಅವರನ್ನು ಶುಕ್ರವಾರ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (Unlawful Activities (Prevention) Act )ಮತ್ತು ಸ್ಫೋಟಕ ವಸ್ತು ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ಪೈಗಂಬರ್ ಶೇಖ್, ಅಹ್ಮದ್ ಅಲಿ ಮತ್ತು ನೂರ್ ಆಲಂ ಮೊಮಿನ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಈ ಪ್ರಕರಣವು ಬೋಧಗಯಾ ದೇವಾಲಯದ ಆವರಣದಲ್ಲಿ ಮತ್ತು ಸುತ್ತಮುತ್ತ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಇರಿಸಿರುವುದಕ್ಕೆ ಸಂಬಂಧಿಸಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿ ತಿಳಿಸಿದ್ದಾರೆ. ಕಲ್ಚಕ್ರ ಮೈದಾನದ ಗೇಟ್ ಸಂಖ್ಯೆ 5 ರಲ್ಲಿ ಪತ್ತೆಯಾದ ಮೊದಲ ಐಇಡಿ, ಅದನ್ನು ಇಡುವ ಹೊತ್ತಲ್ಲಿ ಸ್ಫೋಟಗೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶ್ರೀಲಂಕಾ ಮಠದ ಬಳಿ ಮತ್ತು ಮಹಾಬೋಧಿ ದೇವಸ್ಥಾನದ ಗೇಟ್ ಸಂಖ್ಯೆ 4 ರ ಮೆಟ್ಟಿಲುಗಳಲ್ಲಿ ಇನ್ನೂ ಎರಡು ಸಜೀವ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಲೈಲಾಮಾ ಮತ್ತು ಬಿಹಾರದ ರಾಜ್ಯಪಾಲರ ಭೇಟಿಯ ಸಂದರ್ಭದಲ್ಲಿ ಅಪರಾಧಿಗಳು ದೇವಾಲಯದ ಸಂಕೀರ್ಣದಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಇರಿಸುವ ಮೂಲಕ ಸಂಚು ರೂಪಿಸಿದ್ದಾರೆ ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಅವರು ಪರಸ್ಪರ ಸಂಪರ್ಕಿಸಿದರು, ಒಟ್ಟಿಗೆ ಪ್ರಯಾಣಿಸಿದರು, ಸಂಚು ರೂಪಿಸಿದರು ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿದರು. ಜನವರಿ 19, 2018 ರಂದು ದೇವಾಲಯದ ಸಂಕೀರ್ಣದಲ್ಲಿ ಈ ಮೂರು ಐಇಡಿಗಳನ್ನು ತಯಾರಿಸಿ ಅಲ್ಲಿರಿಸಿದರು ಎಂದು ಅಧಿಕಾರಿ ಹೇಳಿದರು. ಪ್ರಕರಣದ ಚಾರ್ಜ್ ಶೀಟ್ ಅನ್ನು ಸೆಪ್ಟೆಂಬರ್, 2018 ರಲ್ಲಿ ಸಲ್ಲಿಸಲಾಯಿತು.ನಂತರ ಪೂರಕ ಚಾರ್ಜ್ ಶೀಟ್ ಅನ್ನು ಜನವರಿ 2019 ರಲ್ಲಿ ಸಲ್ಲಿಸಲಾಯಿತು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:  ವಾಯು ಮಾಲಿನ್ಯ: ಹಂತ ಹಂತವಾಗಿ ದೆಹಲಿ-ಎನ್‌ಸಿಆರ್ ಶಾಲೆಗಳ ಪುನಾರಂಭಕ್ಕೆ ಅನುಮತಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ