AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ ಸಂಭವಿಸಿ 9 ದಿನಗಳ ಬಳಿಕ ನದಿಯಲ್ಲಿ ತಮಿಳುನಾಡು ಮಾಜಿ ಮೇಯರ್ ಪುತ್ರನ ಶವ ಪತ್ತೆ

ತಮಿಳು ಚಲನಚಿತ್ರ ನಿರ್ದೇಶಕ ಮತ್ತು ಚೆನ್ನೈನ ಮಾಜಿ ಮೇಯರ್ ಪುತ್ರ ವೆಟ್ರಿ ದುರೈಸಾಮಿ ಅವರು ಶಿಮ್ಲಾದಿಂದ ಸ್ಪಿತಿಗೆ ಪ್ರಯಾಣಿಸುತ್ತಿದ್ದ ಕಾರು ನದಿಯಲ್ಲಿ ಬಿದ್ದ ಒಂಬತ್ತು ದಿನಗಳ ನಂತರ ಮೃತದೇಹ ಪತ್ತೆಯಾಗಿದೆ. ಶಿಮ್ಲಾದಿಂದ ಸ್ಪಿತಿಗೆ ಪ್ರಯಾಣಿಸುತ್ತಿದ್ದಾಗ ಫೆಬ್ರವರಿ 4 ರಂದು ಅವರ ವಾಹನ ಅಪಘಾತಕ್ಕೀಡಾಗಿತ್ತು.

ಅಪಘಾತ ಸಂಭವಿಸಿ 9 ದಿನಗಳ ಬಳಿಕ ನದಿಯಲ್ಲಿ ತಮಿಳುನಾಡು ಮಾಜಿ ಮೇಯರ್ ಪುತ್ರನ ಶವ ಪತ್ತೆ
Image Credit source: India Today
ನಯನಾ ರಾಜೀವ್
|

Updated on: Feb 13, 2024 | 8:37 AM

Share

ಅಪಘಾತ ಸಂಭವಿಸಿ 9 ದಿನಗಳ ಬಳಿಕ ತಮಿಳುನಾಡು ಮಾಜಿ ಮೇಯರ್ ಸೈದೈ ದುರೈಸಾಮಿ(Saidai Duraisamy) ಅವರ ಪುತ್ರನ ಶವ ನದಿಯಲ್ಲಿ ಪತ್ತೆಯಾಗಿದೆ. ಕಳೆದ 9 ದಿನಗಳ ಹಿಂದೆ ಹಿಮಾಚಲ ಪ್ರದೇಶದಲ್ಲಿ ಅಪಘಾತವೊಂದು ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಿನ್ನೌರ್ ಜಿಲ್ಲೆಯಲ್ಲಿ ನದಿಗೆ ಉರುಳಿತ್ತು. ವೆಟ್ರಿ ದುರೈಸಾಮಿ ಅವರು ಶಿಮ್ಲಾದಿಂದ ವಾಪಸಾಗುತ್ತಿದ್ದಾಗ ಫೆಬ್ರವರಿ 4 ರಂದು ಅಪಘಾತ ಸಂಭವಿಸಿತ್ತು.

ಸಹ-ಪ್ರಯಾಣಿಕ ಗೋಪಿನಾಥ್ ಅವರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು, ಕಾರು ಚಾಲಕ ತೇಂಜಿನ್ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, 45 ವರ್ಷದ ವೆಟ್ರಿ ಎಲ್ಲಿದ್ದಾರೆ ಎಂಬುದು ತಿಳಿದುಬಂದಿರಲಿಲ್ಲ. ಭಾನುವಾರ (ಫೆಬ್ರವರಿ 4) ಈ ಘಟನೆ ನಡೆದಿದ್ದು, ವೆಟ್ರಿ ದುರೈಸಾಮಿ (45) ಅವರು ತಮ್ಮ ಸಹ ಪ್ರಯಾಣಿಕ ಗೋಪಿನಾಥ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಘಟನೆಯ ವೇಳೆ ಹಿಮಾಚಲ ಪ್ರದೇಶದ ಟಬೋ ನಿವಾಸಿ ತೆಂಜಿನ್ ಎಂಬಾತ ವಾಹನ ಚಲಾಯಿಸುತ್ತಿದ್ದರು. ದುರೈಸ್ವಾಮಿ ಮತ್ತು ಗೋಪಿನಾಥ್ ಸ್ಪಿತಿ ಕಣಿವೆಯಿಂದ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದಿದೆ. ಹಿಮಾಚಲ ಪೊಲೀಸರಿಂದ ಪಡೆದ ಮಾಹಿತಿಯ ಪ್ರಕಾರ, ಇನ್ನೋವಾ ಕಾರು HP01AA-1111 NH-05 ನಲ್ಲಿ ಕಶಾಂಗ್ ಡ್ರೈನ್ ಬಳಿ ಸಟ್ಲೆಜ್ ನದಿಗೆ ಪಲ್ಟಿಯಾಗಿದೆ.

ಮತ್ತಷ್ಟು ಓದಿ: ಹಿಮಾಚಲದಲ್ಲಿ ನಿಯಂತ್ರಣ ತಪ್ಪಿ ನದಿಗೆ ಹಾರಿದ ಕಾರು, ಚೆನ್ನೈನ ಮಾಜಿ ಮೇಯರ್ ಪುತ್ರ ನಾಪತ್ತೆ

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಿರುಪುರ ಮೂಲದ ಗೋಪಿನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೇಯರ್ ದುರೈಸಾಮಿ ಅವರ ಪುತ್ರ ವೆಟ್ರಿ ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸೈದೈ ದುರೈಸಾಮಿ ಅವರು ತಮ್ಮ ಕುಟುಂಬದೊಂದಿಗೆ ಹಿಮಾಚಲಕ್ಕೆ ತೆರಳಿದ್ದಾರೆ.

ವೆಟ್ರಿ ದುರೈಸಾಮಿ ಛಾಯಾಗ್ರಾಹಕ ಮತ್ತು ಚಲನಚಿತ್ರ ನಿರ್ದೇಶಕ. ಕಾರಿನ ಚಾಲಕನನ್ನು ಹಿಮಾಚಲ ಪ್ರದೇಶದ ಥಾಬೋ ಜಿಲ್ಲೆಯ ಲಾಹೌಲ್-ಸ್ಪಿಟಿ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ