AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ ಸಂಭವಿಸಿ 9 ದಿನಗಳ ಬಳಿಕ ನದಿಯಲ್ಲಿ ತಮಿಳುನಾಡು ಮಾಜಿ ಮೇಯರ್ ಪುತ್ರನ ಶವ ಪತ್ತೆ

ತಮಿಳು ಚಲನಚಿತ್ರ ನಿರ್ದೇಶಕ ಮತ್ತು ಚೆನ್ನೈನ ಮಾಜಿ ಮೇಯರ್ ಪುತ್ರ ವೆಟ್ರಿ ದುರೈಸಾಮಿ ಅವರು ಶಿಮ್ಲಾದಿಂದ ಸ್ಪಿತಿಗೆ ಪ್ರಯಾಣಿಸುತ್ತಿದ್ದ ಕಾರು ನದಿಯಲ್ಲಿ ಬಿದ್ದ ಒಂಬತ್ತು ದಿನಗಳ ನಂತರ ಮೃತದೇಹ ಪತ್ತೆಯಾಗಿದೆ. ಶಿಮ್ಲಾದಿಂದ ಸ್ಪಿತಿಗೆ ಪ್ರಯಾಣಿಸುತ್ತಿದ್ದಾಗ ಫೆಬ್ರವರಿ 4 ರಂದು ಅವರ ವಾಹನ ಅಪಘಾತಕ್ಕೀಡಾಗಿತ್ತು.

ಅಪಘಾತ ಸಂಭವಿಸಿ 9 ದಿನಗಳ ಬಳಿಕ ನದಿಯಲ್ಲಿ ತಮಿಳುನಾಡು ಮಾಜಿ ಮೇಯರ್ ಪುತ್ರನ ಶವ ಪತ್ತೆ
Image Credit source: India Today
ನಯನಾ ರಾಜೀವ್
|

Updated on: Feb 13, 2024 | 8:37 AM

Share

ಅಪಘಾತ ಸಂಭವಿಸಿ 9 ದಿನಗಳ ಬಳಿಕ ತಮಿಳುನಾಡು ಮಾಜಿ ಮೇಯರ್ ಸೈದೈ ದುರೈಸಾಮಿ(Saidai Duraisamy) ಅವರ ಪುತ್ರನ ಶವ ನದಿಯಲ್ಲಿ ಪತ್ತೆಯಾಗಿದೆ. ಕಳೆದ 9 ದಿನಗಳ ಹಿಂದೆ ಹಿಮಾಚಲ ಪ್ರದೇಶದಲ್ಲಿ ಅಪಘಾತವೊಂದು ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಿನ್ನೌರ್ ಜಿಲ್ಲೆಯಲ್ಲಿ ನದಿಗೆ ಉರುಳಿತ್ತು. ವೆಟ್ರಿ ದುರೈಸಾಮಿ ಅವರು ಶಿಮ್ಲಾದಿಂದ ವಾಪಸಾಗುತ್ತಿದ್ದಾಗ ಫೆಬ್ರವರಿ 4 ರಂದು ಅಪಘಾತ ಸಂಭವಿಸಿತ್ತು.

ಸಹ-ಪ್ರಯಾಣಿಕ ಗೋಪಿನಾಥ್ ಅವರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು, ಕಾರು ಚಾಲಕ ತೇಂಜಿನ್ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, 45 ವರ್ಷದ ವೆಟ್ರಿ ಎಲ್ಲಿದ್ದಾರೆ ಎಂಬುದು ತಿಳಿದುಬಂದಿರಲಿಲ್ಲ. ಭಾನುವಾರ (ಫೆಬ್ರವರಿ 4) ಈ ಘಟನೆ ನಡೆದಿದ್ದು, ವೆಟ್ರಿ ದುರೈಸಾಮಿ (45) ಅವರು ತಮ್ಮ ಸಹ ಪ್ರಯಾಣಿಕ ಗೋಪಿನಾಥ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಘಟನೆಯ ವೇಳೆ ಹಿಮಾಚಲ ಪ್ರದೇಶದ ಟಬೋ ನಿವಾಸಿ ತೆಂಜಿನ್ ಎಂಬಾತ ವಾಹನ ಚಲಾಯಿಸುತ್ತಿದ್ದರು. ದುರೈಸ್ವಾಮಿ ಮತ್ತು ಗೋಪಿನಾಥ್ ಸ್ಪಿತಿ ಕಣಿವೆಯಿಂದ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದಿದೆ. ಹಿಮಾಚಲ ಪೊಲೀಸರಿಂದ ಪಡೆದ ಮಾಹಿತಿಯ ಪ್ರಕಾರ, ಇನ್ನೋವಾ ಕಾರು HP01AA-1111 NH-05 ನಲ್ಲಿ ಕಶಾಂಗ್ ಡ್ರೈನ್ ಬಳಿ ಸಟ್ಲೆಜ್ ನದಿಗೆ ಪಲ್ಟಿಯಾಗಿದೆ.

ಮತ್ತಷ್ಟು ಓದಿ: ಹಿಮಾಚಲದಲ್ಲಿ ನಿಯಂತ್ರಣ ತಪ್ಪಿ ನದಿಗೆ ಹಾರಿದ ಕಾರು, ಚೆನ್ನೈನ ಮಾಜಿ ಮೇಯರ್ ಪುತ್ರ ನಾಪತ್ತೆ

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಿರುಪುರ ಮೂಲದ ಗೋಪಿನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೇಯರ್ ದುರೈಸಾಮಿ ಅವರ ಪುತ್ರ ವೆಟ್ರಿ ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸೈದೈ ದುರೈಸಾಮಿ ಅವರು ತಮ್ಮ ಕುಟುಂಬದೊಂದಿಗೆ ಹಿಮಾಚಲಕ್ಕೆ ತೆರಳಿದ್ದಾರೆ.

ವೆಟ್ರಿ ದುರೈಸಾಮಿ ಛಾಯಾಗ್ರಾಹಕ ಮತ್ತು ಚಲನಚಿತ್ರ ನಿರ್ದೇಶಕ. ಕಾರಿನ ಚಾಲಕನನ್ನು ಹಿಮಾಚಲ ಪ್ರದೇಶದ ಥಾಬೋ ಜಿಲ್ಲೆಯ ಲಾಹೌಲ್-ಸ್ಪಿಟಿ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ