Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದವ ಅರೆಸ್ಟ್​; ಏಪ್ರಿಲ್​ 16ರಂದು ಭಾರತಕ್ಕೆ ತಲುಪಲಿದೆ ಕಾರ್ತೀಕ್​ ಮೃತದೇಹ

ಕಾರ್ತೀಕ್​ ವಾಸುದೇವ್​ ಜನವರಿಯಲ್ಲಿ ಕೆನಡಾಕ್ಕೆ ಹೋಗಿದ್ದರು. ಸೆನೆಕಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಉದ್ಯಮ ವಿಷಯದಲ್ಲಿ ಎಂಬಿಎ ಓದುತ್ತಿದ್ದರು.  ಹಾಗೇ, ಮೆಕ್ಸಿಕನ್​ ರೆಸ್ಟೋರೆಂಟ್​ನಲ್ಲಿ ಪಾರ್ಟ್​ಟೈಂ ಕೆಲಸವನ್ನೂ ಮಾಡುತ್ತಿದ್ದರು.

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದವ ಅರೆಸ್ಟ್​; ಏಪ್ರಿಲ್​ 16ರಂದು ಭಾರತಕ್ಕೆ ತಲುಪಲಿದೆ ಕಾರ್ತೀಕ್​ ಮೃತದೇಹ
ಕಾರ್ತೀಕ್ ವಾಸುದೇವ್​
Follow us
TV9 Web
| Updated By: Lakshmi Hegde

Updated on: Apr 15, 2022 | 7:07 PM

ಕೆನಡಾದಲ್ಲಿ ಹತ್ಯೆಯಾಗಿರುವ ಭಾರತ ಮೂಲದ ವಿದ್ಯಾರ್ಥಿಯ ಮೃತದೇಹ ನಾಳೆ ಸ್ವದೇಶಕ್ಕೆ ತಲುಪಲಿದೆ. ಕಾರ್ತೀಕ್ ವಾಸುದೇವ್ ಉತ್ತರ ಪ್ರದೇಶದ ಘಾಜಿಯಾಬಾದ್​ನವನಾಗಿದ್ದು, ಏಪ್ರಿಲ್ 9ರಂದು ಟೊರಂಟೋದ ಗ್ಲೆನ್​ ರಸ್ತೆಯಲ್ಲಿರುವ ಶೆಬೋರ್ನ್​ ಸಬ್​ವೇ (ಸುರಂಗಮಾರ್ಗ) ಸ್ಟೇಶನ್​​ನ ಪ್ರವೇಶದ್ವಾರದಲ್ಲಿ ಹತ್ಯೆಗೀಡಾಗಿದ್ದಾರೆ. ಕಾರ್ತೀಕ್ ಮೃತದೇಹ ಏಪ್ರಿಲ್​ 16ರಂದು ದೆಹಲಿಗೆ ತಲುಪಲಿದೆ ಎಂದು ತಿಳಿಸಿದ್ದಾಗಿ ಕುಟುಂಬದವರು ಹೇಳಿದ್ದಾರೆ. ಅಂದಹಾಗೇ, ವಿದ್ಯಾರ್ಥಿಗೆ ಗುಂಡು ಹೊಡೆದ ಆರೋಪಿಯನ್ನು ಟೊರಂಟೊ ಪೊಲೀಸರು ಬಂಧಿಸಿದ್ದು, ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಒಂದು ಸಲ ವಿಚಾರಣೆಯೂ ನಡೆದಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್​ 20ಕ್ಕೆ ಮುಂದೂಡಲಾಗಿದೆ ಎಂದು ಕಾರ್ತಿಕ್​ ವಾಸುದೇವ್​ ತಂದೆ ಹಿತೇಶ್ ವಾಸುದೇವ್ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. 

ಕಾರ್ತೀಕ್​ ವಾಸುದೇವ್​ ಜನವರಿಯಲ್ಲಿ ಕೆನಡಾಕ್ಕೆ ಹೋಗಿದ್ದರು. ಸೆನೆಕಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಉದ್ಯಮ ವಿಷಯದಲ್ಲಿ ಎಂಬಿಎ ಓದುತ್ತಿದ್ದರು.  ಹಾಗೇ, ಮೆಕ್ಸಿಕನ್​ ರೆಸ್ಟೋರೆಂಟ್​ನಲ್ಲಿ ಪಾರ್ಟ್​ಟೈಂ ಕೆಲಸವನ್ನೂ ಮಾಡುತ್ತಿದ್ದರು. ಏಪ್ರಿಲ್​ 9ರಂದು ಕೆಲಸಕ್ಕೆ ತೆರಳುತ್ತಿದ್ದಾಗ ಹತ್ಯೆಗೀಡಾಗಿದ್ದಾರೆ. ಇವರನ್ನು ಕೊಂದ ಆರೋಪಿಯನ್ನು 39ವರ್ಷದ ರಿಚರ್ಡ್​ ಜೊನಾಥನ್​ ಎಡ್ವಿನ್​ ಎಂದು ಗುರುತಿಸಲಾಗಿದೆ. ಈತ ಏಪ್ರಿಲ್​ 5ಂದು ಇನ್ನೊಬ್ಬ ವ್ಯಕ್ತಿಯನ್ನು ಕೊಂದಿರುವ ಶಂಕೆಯೂ ವ್ಯಕ್ತವಾಗಿದೆ ಎಂದು ಟೊರಂಟೊ ಪೊಲೀಸರು ತಿಳಿಸಿದ್ದಾರೆ.

ಕಾರ್ತೀಕ್​ ವಾಸುದೇವ್ ಸಾವಿಗೆ ಟೊರಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವೀಟ್ ಮಾಡಿ, ಸಂತಾಪ ಸೂಚಿಸಿತ್ತು. ನಾವು ಕಾರ್ತೀಕ್ ವಾಸುದೇವ್​ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಕಾರ್ತೀಕ್​ ಶವವನ್ನು ಭಾರತಕ್ಕೆ ಕಳಿಸುವ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದ್ದೇವೆ. ಕುಟುಂಬಕ್ಕೆ ಸಮಾಧಾನ ಹೇಳಿದ್ದೇವೆ ಎಂದು ತಿಳಿಸಿತ್ತು. ರಾಯಭಾರಿ ಕಚೇರಿ ಮಾಡಿರುವ ಟ್ವೀಟ್​ನ್ನು ರೀಟ್ವೀಟ್ ಮಾಡಿಕೊಂಡಿದ್ದ ಎಸ್​.ಜೈಶಂಕರ್​, ಕಾರ್ತೀಕ್​ ಸಾವಿನ ದುರಂತದಿಂದ ನಿಜಕ್ಕೂ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದಿದ್ದರು.

ಇದನ್ನೂ ಓದಿ: Rain Updates: ದಕ್ಷಿಣ ಭಾರತ ಸೇರಿ ಈ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ