AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದವ ಅರೆಸ್ಟ್​; ಏಪ್ರಿಲ್​ 16ರಂದು ಭಾರತಕ್ಕೆ ತಲುಪಲಿದೆ ಕಾರ್ತೀಕ್​ ಮೃತದೇಹ

ಕಾರ್ತೀಕ್​ ವಾಸುದೇವ್​ ಜನವರಿಯಲ್ಲಿ ಕೆನಡಾಕ್ಕೆ ಹೋಗಿದ್ದರು. ಸೆನೆಕಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಉದ್ಯಮ ವಿಷಯದಲ್ಲಿ ಎಂಬಿಎ ಓದುತ್ತಿದ್ದರು.  ಹಾಗೇ, ಮೆಕ್ಸಿಕನ್​ ರೆಸ್ಟೋರೆಂಟ್​ನಲ್ಲಿ ಪಾರ್ಟ್​ಟೈಂ ಕೆಲಸವನ್ನೂ ಮಾಡುತ್ತಿದ್ದರು.

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದವ ಅರೆಸ್ಟ್​; ಏಪ್ರಿಲ್​ 16ರಂದು ಭಾರತಕ್ಕೆ ತಲುಪಲಿದೆ ಕಾರ್ತೀಕ್​ ಮೃತದೇಹ
ಕಾರ್ತೀಕ್ ವಾಸುದೇವ್​
TV9 Web
| Edited By: |

Updated on: Apr 15, 2022 | 7:07 PM

Share

ಕೆನಡಾದಲ್ಲಿ ಹತ್ಯೆಯಾಗಿರುವ ಭಾರತ ಮೂಲದ ವಿದ್ಯಾರ್ಥಿಯ ಮೃತದೇಹ ನಾಳೆ ಸ್ವದೇಶಕ್ಕೆ ತಲುಪಲಿದೆ. ಕಾರ್ತೀಕ್ ವಾಸುದೇವ್ ಉತ್ತರ ಪ್ರದೇಶದ ಘಾಜಿಯಾಬಾದ್​ನವನಾಗಿದ್ದು, ಏಪ್ರಿಲ್ 9ರಂದು ಟೊರಂಟೋದ ಗ್ಲೆನ್​ ರಸ್ತೆಯಲ್ಲಿರುವ ಶೆಬೋರ್ನ್​ ಸಬ್​ವೇ (ಸುರಂಗಮಾರ್ಗ) ಸ್ಟೇಶನ್​​ನ ಪ್ರವೇಶದ್ವಾರದಲ್ಲಿ ಹತ್ಯೆಗೀಡಾಗಿದ್ದಾರೆ. ಕಾರ್ತೀಕ್ ಮೃತದೇಹ ಏಪ್ರಿಲ್​ 16ರಂದು ದೆಹಲಿಗೆ ತಲುಪಲಿದೆ ಎಂದು ತಿಳಿಸಿದ್ದಾಗಿ ಕುಟುಂಬದವರು ಹೇಳಿದ್ದಾರೆ. ಅಂದಹಾಗೇ, ವಿದ್ಯಾರ್ಥಿಗೆ ಗುಂಡು ಹೊಡೆದ ಆರೋಪಿಯನ್ನು ಟೊರಂಟೊ ಪೊಲೀಸರು ಬಂಧಿಸಿದ್ದು, ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಒಂದು ಸಲ ವಿಚಾರಣೆಯೂ ನಡೆದಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್​ 20ಕ್ಕೆ ಮುಂದೂಡಲಾಗಿದೆ ಎಂದು ಕಾರ್ತಿಕ್​ ವಾಸುದೇವ್​ ತಂದೆ ಹಿತೇಶ್ ವಾಸುದೇವ್ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. 

ಕಾರ್ತೀಕ್​ ವಾಸುದೇವ್​ ಜನವರಿಯಲ್ಲಿ ಕೆನಡಾಕ್ಕೆ ಹೋಗಿದ್ದರು. ಸೆನೆಕಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಉದ್ಯಮ ವಿಷಯದಲ್ಲಿ ಎಂಬಿಎ ಓದುತ್ತಿದ್ದರು.  ಹಾಗೇ, ಮೆಕ್ಸಿಕನ್​ ರೆಸ್ಟೋರೆಂಟ್​ನಲ್ಲಿ ಪಾರ್ಟ್​ಟೈಂ ಕೆಲಸವನ್ನೂ ಮಾಡುತ್ತಿದ್ದರು. ಏಪ್ರಿಲ್​ 9ರಂದು ಕೆಲಸಕ್ಕೆ ತೆರಳುತ್ತಿದ್ದಾಗ ಹತ್ಯೆಗೀಡಾಗಿದ್ದಾರೆ. ಇವರನ್ನು ಕೊಂದ ಆರೋಪಿಯನ್ನು 39ವರ್ಷದ ರಿಚರ್ಡ್​ ಜೊನಾಥನ್​ ಎಡ್ವಿನ್​ ಎಂದು ಗುರುತಿಸಲಾಗಿದೆ. ಈತ ಏಪ್ರಿಲ್​ 5ಂದು ಇನ್ನೊಬ್ಬ ವ್ಯಕ್ತಿಯನ್ನು ಕೊಂದಿರುವ ಶಂಕೆಯೂ ವ್ಯಕ್ತವಾಗಿದೆ ಎಂದು ಟೊರಂಟೊ ಪೊಲೀಸರು ತಿಳಿಸಿದ್ದಾರೆ.

ಕಾರ್ತೀಕ್​ ವಾಸುದೇವ್ ಸಾವಿಗೆ ಟೊರಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಟ್ವೀಟ್ ಮಾಡಿ, ಸಂತಾಪ ಸೂಚಿಸಿತ್ತು. ನಾವು ಕಾರ್ತೀಕ್ ವಾಸುದೇವ್​ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಕಾರ್ತೀಕ್​ ಶವವನ್ನು ಭಾರತಕ್ಕೆ ಕಳಿಸುವ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದ್ದೇವೆ. ಕುಟುಂಬಕ್ಕೆ ಸಮಾಧಾನ ಹೇಳಿದ್ದೇವೆ ಎಂದು ತಿಳಿಸಿತ್ತು. ರಾಯಭಾರಿ ಕಚೇರಿ ಮಾಡಿರುವ ಟ್ವೀಟ್​ನ್ನು ರೀಟ್ವೀಟ್ ಮಾಡಿಕೊಂಡಿದ್ದ ಎಸ್​.ಜೈಶಂಕರ್​, ಕಾರ್ತೀಕ್​ ಸಾವಿನ ದುರಂತದಿಂದ ನಿಜಕ್ಕೂ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದಿದ್ದರು.

ಇದನ್ನೂ ಓದಿ: Rain Updates: ದಕ್ಷಿಣ ಭಾರತ ಸೇರಿ ಈ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ