AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಣರಾಜ್ಯೋತ್ಸವ ಆಚರಣೆ ಮುಗಿಯುತ್ತಿದ್ದಂತೆ ವಿರಾಟ್​ ನಿವೃತ್ತಿ, ಮೈ ಸವರಿ ಮುದ್ದಿಸಿ ಬೀಳ್ಕೊಟ್ಟ ಪ್ರಧಾನಿ ಮೋದಿ; ಯಾರು ಈ ವಿರಾಟ್​?

ಜನವರಿ 15ರ ಸೇನಾ ದಿನ (Army Day)ದಂದು ಈ ಕುದುರೆಗೆ ಸೇನಾ ಮುಖ್ಯಸ್ಥರ ಶ್ಲಾಘನೆ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಈ ಪುರಸ್ಕಾರ ಪಡೆದ ಮೊದಲ ಕುದುರೆ ಎಂಬ ಹೆಗ್ಗಳಿಕೆ ವಿರಾಟ್​ಗೆ ಸಲ್ಲುತ್ತದೆ.

Video: ಗಣರಾಜ್ಯೋತ್ಸವ ಆಚರಣೆ ಮುಗಿಯುತ್ತಿದ್ದಂತೆ ವಿರಾಟ್​ ನಿವೃತ್ತಿ, ಮೈ ಸವರಿ ಮುದ್ದಿಸಿ ಬೀಳ್ಕೊಟ್ಟ ಪ್ರಧಾನಿ ಮೋದಿ; ಯಾರು ಈ ವಿರಾಟ್​?
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿರಾಟ್​
TV9 Web
| Edited By: |

Updated on:Jan 26, 2022 | 3:57 PM

Share

73ನೇ ಗಣರಾಜ್ಯೋತ್ಸವದ ಕಾರ್ಯಕ್ರಮಗಳು ರಾಜಪಥ್ (Republic 2022) ​​ನಲ್ಲಿ ಮುಕ್ತಾಯಗೊಂಡ ಬೆನ್ನಲ್ಲೇ, ರಾಷ್ಟ್ರಪತಿ ರಾಮನಾಥ ಕೋವಿಂದ್​ ಅಂಗರಕ್ಷಕ ದಳದಲ್ಲಿದ್ದ ಕುದುರೆ ವಿರಾಟ್ (Virat Horse Retires) ಇಂದು ನಿವೃತ್ತಿ ಹೊಂದಿತು. ರಾಜಪಥ್​​ನಲ್ಲಿ ರಾಷ್ಟ್ರ ಧ್ವಜಾರೋಹಣ, ಪರೇಡ್​ ಮುಕ್ತಾಯವಾದ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ್​ ರಾಷ್ಟ್ರಪತಿ ಭವನಕ್ಕೆ ತೆರಳಿದರು. ಅವರ ಬೆಂಗಾವಲು ಪಡೆಯಲ್ಲಿ ಒಂದಾದ ಈ ಅಂಗರಕ್ಷಕ ಕುದುರೆಯೂ ಅವರ ಹಿಂದೆ ಧಾವಿಸಿತು. ಅಲ್ಲಿಗೆ ತನ್ನ ಸೇವೆಯನ್ನು ಪೂರ್ಣಗೊಳಿಸಿ, ನಿವೃತ್ತಿಪಡೆದಿದೆ.  ಪ್ರಧಾನಮಂತ್ರಿ ಮೋದಿ ಇಂದು ವಿರಾಟ್​ ಕುದುರೆಯ ಮೈದಡವಿ, ಮುದ್ದಿಸಿ ಬೀಳ್ಕೊಡುಗೆ ನೀಡಿದರು. ರಾಜನಾಥ್ ಸಿಂಗ್​ ಅವರೂ ಸಹ ಕುದುರೆಯ ಮುಖವನ್ನು ಪ್ರೀತಿಯಿಂದ ಸವರಿದ್ದಾರೆ. ಈ ವೇಳೆ ರಾಮನಾಥ ಕೋವಿಂದ್​ ಪತ್ನಿ ಸವಿತಾ ಕೋವಿಂದ್, ಗೃಹ ಸಚಿವ ಅಮಿತ್ ಶಾ ಇತರರೂ ಇದ್ದು ಕುದುರೆಗೆ ಭಾವಪೂರ್ಣ ಬೀಳ್ಕೊಡುಗೆ ನೀಡಿದ್ದಾರೆ.

ಈ ವಿರಾಟ್​ ಕುದುರೆ 2003ನೇ ಇಸ್ವಿಯಿಂದಲೂ ರಾಷ್ಟ್ರಪತಿ ಅಂಗರಕ್ಷಕ ದಳದಲ್ಲಿ ಇತ್ತು. ಜನವರಿ 15ರ ಸೇನಾ ದಿನ (Army Day)ದಂದು ಈ ಕುದುರೆಗೆ ಸೇನಾ ಮುಖ್ಯಸ್ಥರ ಶ್ಲಾಘನೆ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಈ ಪುರಸ್ಕಾರ ಪಡೆದ ಮೊದಲ ಕುದುರೆ ಎಂಬ ಹೆಗ್ಗಳಿಕೆ ವಿರಾಟ್​ಗೆ ಸಲ್ಲುತ್ತದೆ.  2003ರಿಂದ ಇಲ್ಲಿಯವರೆಗೆ ವಿರಾಟ್​ ಕುದುರೆ ಒಟ್ಟು 13 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದೆ. ಅಂದರೆ ಹಿಂದಿನ ರಾಷ್ಟ್ರಪತಿಗಳಿಂದ ಹಿಡಿದು ಇಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರ ವಿದ್ಯುಕ್ತ ಮೆರವಣಿಗೆಗಳಲ್ಲಿ ಅತ್ಯಂತ ಘನತೆಯಿಂದ ಪಾಲ್ಗೊಂಡಿತ್ತು. ಪರೇಡ್​ನಲ್ಲಿ ಭಾಗವಹಿಸಬಹುದಾದ ಅತ್ಯಂತ ನಂಬಿಗಸ್ಥ ಕುದುರೆ ಎಂದೂ ಪರಿಗಣಿಸಲಾಗಿತ್ತು.

ವಿರಾಟ್​ ತನ್ನ ಶಿಸ್ತು ಮತ್ತು ಗಾತ್ರದಿಂದ ಹೆಸರುವಾಸಿಯಾಗಿದ್ದ. ಈಗೀಗ ವಯಸ್ಸು ಜಾಸ್ತಿಯಾಗಿದ್ದರೂ ತುಂಬ ಉತ್ಸಾಹದಿಂದ ಗಣರಾಜ್ಯೋತ್ಸವ ಪರೇಡ್​ಗಳಲ್ಲಿ ಪಾಲ್ಗೊಳ್ಳುತ್ತಿದ್ದ. ಅದರಲ್ಲೂ 2021ರ ಗಣರಾಜ್ಯೋತ್ಸವ ಸಮಾರಂಭದ ಪರೇಡ್ ಮತ್ತು ಬೀಟಿಂಗ್​ ದಿ ರಿಟ್ರೀಟ್ ಸಮಾರಂಭದಲ್ಲಿ ಅತ್ಯುತ್ತಮವಾಗಿ ಹೆಜ್ಜೆ ಹಾಕಿದ್ದ ಎಂದು ಹಿಂದೂಸ್ತಾನ್ ಟೈಮ್ಸ್​ ವರದಿ ಮಾಡಿದೆ. ಭಾರತದಲ್ಲಿ ರಾಷ್ಟ್ರಪತಿ ಅಂಗರಕ್ಷಕರೆಂದರೆ ಅತ್ಯಂತ ಉನ್ನತ ಮಟ್ಟದ ರೆಜಿಮೆಂಟ್​ ಆಗಿದೆ. ಅದರಲ್ಲಿ ಸ್ಥಾನಪಡೆದು, 19 ವರ್ಷಗಳಷ್ಟು ಕಾಲ ಇದ್ದಿದ್ದು ವಿರಾಟ್ ಹೆಗ್ಗಳಿಕೆಯೇ ಸರಿ.

ಇದನ್ನೂ ಓದಿ: Hardik Pandya: ಅಜ್ಜಿ ಜತೆ ಶ್ರೀವಲ್ಲಿ ಹಾಡಿಗೆ ಮಸ್ತ್ ಹೆಜ್ಜೆ ಹಾಕಿದ ಹಾರ್ದಿಕ್ ಪಾಂಡ್ಯ; ಫ್ಯಾನ್ಸ್ ಮನಗೆದ್ದ ವಿಡಿಯೋ ಇಲ್ಲಿದೆ

Published On - 3:37 pm, Wed, 26 January 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್