AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಣರಾಜ್ಯೋತ್ಸವ ಆಚರಣೆ ಮುಗಿಯುತ್ತಿದ್ದಂತೆ ವಿರಾಟ್​ ನಿವೃತ್ತಿ, ಮೈ ಸವರಿ ಮುದ್ದಿಸಿ ಬೀಳ್ಕೊಟ್ಟ ಪ್ರಧಾನಿ ಮೋದಿ; ಯಾರು ಈ ವಿರಾಟ್​?

ಜನವರಿ 15ರ ಸೇನಾ ದಿನ (Army Day)ದಂದು ಈ ಕುದುರೆಗೆ ಸೇನಾ ಮುಖ್ಯಸ್ಥರ ಶ್ಲಾಘನೆ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಈ ಪುರಸ್ಕಾರ ಪಡೆದ ಮೊದಲ ಕುದುರೆ ಎಂಬ ಹೆಗ್ಗಳಿಕೆ ವಿರಾಟ್​ಗೆ ಸಲ್ಲುತ್ತದೆ.

Video: ಗಣರಾಜ್ಯೋತ್ಸವ ಆಚರಣೆ ಮುಗಿಯುತ್ತಿದ್ದಂತೆ ವಿರಾಟ್​ ನಿವೃತ್ತಿ, ಮೈ ಸವರಿ ಮುದ್ದಿಸಿ ಬೀಳ್ಕೊಟ್ಟ ಪ್ರಧಾನಿ ಮೋದಿ; ಯಾರು ಈ ವಿರಾಟ್​?
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿರಾಟ್​
TV9 Web
| Edited By: |

Updated on:Jan 26, 2022 | 3:57 PM

Share

73ನೇ ಗಣರಾಜ್ಯೋತ್ಸವದ ಕಾರ್ಯಕ್ರಮಗಳು ರಾಜಪಥ್ (Republic 2022) ​​ನಲ್ಲಿ ಮುಕ್ತಾಯಗೊಂಡ ಬೆನ್ನಲ್ಲೇ, ರಾಷ್ಟ್ರಪತಿ ರಾಮನಾಥ ಕೋವಿಂದ್​ ಅಂಗರಕ್ಷಕ ದಳದಲ್ಲಿದ್ದ ಕುದುರೆ ವಿರಾಟ್ (Virat Horse Retires) ಇಂದು ನಿವೃತ್ತಿ ಹೊಂದಿತು. ರಾಜಪಥ್​​ನಲ್ಲಿ ರಾಷ್ಟ್ರ ಧ್ವಜಾರೋಹಣ, ಪರೇಡ್​ ಮುಕ್ತಾಯವಾದ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ್​ ರಾಷ್ಟ್ರಪತಿ ಭವನಕ್ಕೆ ತೆರಳಿದರು. ಅವರ ಬೆಂಗಾವಲು ಪಡೆಯಲ್ಲಿ ಒಂದಾದ ಈ ಅಂಗರಕ್ಷಕ ಕುದುರೆಯೂ ಅವರ ಹಿಂದೆ ಧಾವಿಸಿತು. ಅಲ್ಲಿಗೆ ತನ್ನ ಸೇವೆಯನ್ನು ಪೂರ್ಣಗೊಳಿಸಿ, ನಿವೃತ್ತಿಪಡೆದಿದೆ.  ಪ್ರಧಾನಮಂತ್ರಿ ಮೋದಿ ಇಂದು ವಿರಾಟ್​ ಕುದುರೆಯ ಮೈದಡವಿ, ಮುದ್ದಿಸಿ ಬೀಳ್ಕೊಡುಗೆ ನೀಡಿದರು. ರಾಜನಾಥ್ ಸಿಂಗ್​ ಅವರೂ ಸಹ ಕುದುರೆಯ ಮುಖವನ್ನು ಪ್ರೀತಿಯಿಂದ ಸವರಿದ್ದಾರೆ. ಈ ವೇಳೆ ರಾಮನಾಥ ಕೋವಿಂದ್​ ಪತ್ನಿ ಸವಿತಾ ಕೋವಿಂದ್, ಗೃಹ ಸಚಿವ ಅಮಿತ್ ಶಾ ಇತರರೂ ಇದ್ದು ಕುದುರೆಗೆ ಭಾವಪೂರ್ಣ ಬೀಳ್ಕೊಡುಗೆ ನೀಡಿದ್ದಾರೆ.

ಈ ವಿರಾಟ್​ ಕುದುರೆ 2003ನೇ ಇಸ್ವಿಯಿಂದಲೂ ರಾಷ್ಟ್ರಪತಿ ಅಂಗರಕ್ಷಕ ದಳದಲ್ಲಿ ಇತ್ತು. ಜನವರಿ 15ರ ಸೇನಾ ದಿನ (Army Day)ದಂದು ಈ ಕುದುರೆಗೆ ಸೇನಾ ಮುಖ್ಯಸ್ಥರ ಶ್ಲಾಘನೆ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಈ ಪುರಸ್ಕಾರ ಪಡೆದ ಮೊದಲ ಕುದುರೆ ಎಂಬ ಹೆಗ್ಗಳಿಕೆ ವಿರಾಟ್​ಗೆ ಸಲ್ಲುತ್ತದೆ.  2003ರಿಂದ ಇಲ್ಲಿಯವರೆಗೆ ವಿರಾಟ್​ ಕುದುರೆ ಒಟ್ಟು 13 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದೆ. ಅಂದರೆ ಹಿಂದಿನ ರಾಷ್ಟ್ರಪತಿಗಳಿಂದ ಹಿಡಿದು ಇಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರ ವಿದ್ಯುಕ್ತ ಮೆರವಣಿಗೆಗಳಲ್ಲಿ ಅತ್ಯಂತ ಘನತೆಯಿಂದ ಪಾಲ್ಗೊಂಡಿತ್ತು. ಪರೇಡ್​ನಲ್ಲಿ ಭಾಗವಹಿಸಬಹುದಾದ ಅತ್ಯಂತ ನಂಬಿಗಸ್ಥ ಕುದುರೆ ಎಂದೂ ಪರಿಗಣಿಸಲಾಗಿತ್ತು.

ವಿರಾಟ್​ ತನ್ನ ಶಿಸ್ತು ಮತ್ತು ಗಾತ್ರದಿಂದ ಹೆಸರುವಾಸಿಯಾಗಿದ್ದ. ಈಗೀಗ ವಯಸ್ಸು ಜಾಸ್ತಿಯಾಗಿದ್ದರೂ ತುಂಬ ಉತ್ಸಾಹದಿಂದ ಗಣರಾಜ್ಯೋತ್ಸವ ಪರೇಡ್​ಗಳಲ್ಲಿ ಪಾಲ್ಗೊಳ್ಳುತ್ತಿದ್ದ. ಅದರಲ್ಲೂ 2021ರ ಗಣರಾಜ್ಯೋತ್ಸವ ಸಮಾರಂಭದ ಪರೇಡ್ ಮತ್ತು ಬೀಟಿಂಗ್​ ದಿ ರಿಟ್ರೀಟ್ ಸಮಾರಂಭದಲ್ಲಿ ಅತ್ಯುತ್ತಮವಾಗಿ ಹೆಜ್ಜೆ ಹಾಕಿದ್ದ ಎಂದು ಹಿಂದೂಸ್ತಾನ್ ಟೈಮ್ಸ್​ ವರದಿ ಮಾಡಿದೆ. ಭಾರತದಲ್ಲಿ ರಾಷ್ಟ್ರಪತಿ ಅಂಗರಕ್ಷಕರೆಂದರೆ ಅತ್ಯಂತ ಉನ್ನತ ಮಟ್ಟದ ರೆಜಿಮೆಂಟ್​ ಆಗಿದೆ. ಅದರಲ್ಲಿ ಸ್ಥಾನಪಡೆದು, 19 ವರ್ಷಗಳಷ್ಟು ಕಾಲ ಇದ್ದಿದ್ದು ವಿರಾಟ್ ಹೆಗ್ಗಳಿಕೆಯೇ ಸರಿ.

ಇದನ್ನೂ ಓದಿ: Hardik Pandya: ಅಜ್ಜಿ ಜತೆ ಶ್ರೀವಲ್ಲಿ ಹಾಡಿಗೆ ಮಸ್ತ್ ಹೆಜ್ಜೆ ಹಾಕಿದ ಹಾರ್ದಿಕ್ ಪಾಂಡ್ಯ; ಫ್ಯಾನ್ಸ್ ಮನಗೆದ್ದ ವಿಡಿಯೋ ಇಲ್ಲಿದೆ

Published On - 3:37 pm, Wed, 26 January 22

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು