AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್ಸ್ ಲಾಕರ್ ರೂಮ್ ಬಟಾಬಯಲು ಮಾಡಿದ್ದ ಯುವತಿಗೆ ಜೀವಬೆದರಿಕೆ, FIR ದಾಖಲು!

ಇಡೀ ದೇಶದ ಗಮನವನ್ನು ಸೆಳೆದಿದ್ದ ಬಾಯ್ಸ್ ಲಾಕರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಮತ್ತೊಂದು ದೂರನ್ನು ದಾಖಲಿಸಿಕೊಂಡಿದ್ದಾರೆ. ಯುವತಿಯರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಚ್ಯಾಟ್ ಗಳನ್ನು ಮಾಡುತ್ತಿದ್ದ ಯುವಕರ ತಂಡವೊಂದರ ದುಷ್ಕೃತ್ಯವನ್ನು ಬಯಲಿಗೆಳೆದಿದ್ದ ಯುವತಿ ನೀಡಿರುವ ದೂರಿನನ್ವಯ ದೆಹಲಿ ಪೊಲೀಸರ ಸೈಬರ್ ಸೆಲ್ ವಿಭಾಗವು ಎಫ್ಐಆರ್ ದಾಖಲಿಸಿಕೊಂಡಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪರಿಚಿತರಿಂದ ತನಗೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಎಲ್ಲರ ಗಮನ ಸೆಳೆದಿದ್ದ ಈ ಪ್ರಕರಣವು ಬಾಯ್ಸ್ ಲಾಕರ್ […]

ಬಾಯ್ಸ್ ಲಾಕರ್ ರೂಮ್ ಬಟಾಬಯಲು ಮಾಡಿದ್ದ ಯುವತಿಗೆ ಜೀವಬೆದರಿಕೆ, FIR ದಾಖಲು!
ಸಾಧು ಶ್ರೀನಾಥ್​
|

Updated on:Jun 08, 2020 | 6:11 PM

Share

ಇಡೀ ದೇಶದ ಗಮನವನ್ನು ಸೆಳೆದಿದ್ದ ಬಾಯ್ಸ್ ಲಾಕರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಮತ್ತೊಂದು ದೂರನ್ನು ದಾಖಲಿಸಿಕೊಂಡಿದ್ದಾರೆ. ಯುವತಿಯರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಚ್ಯಾಟ್ ಗಳನ್ನು ಮಾಡುತ್ತಿದ್ದ ಯುವಕರ ತಂಡವೊಂದರ ದುಷ್ಕೃತ್ಯವನ್ನು ಬಯಲಿಗೆಳೆದಿದ್ದ ಯುವತಿ ನೀಡಿರುವ ದೂರಿನನ್ವಯ ದೆಹಲಿ ಪೊಲೀಸರ ಸೈಬರ್ ಸೆಲ್ ವಿಭಾಗವು ಎಫ್ಐಆರ್ ದಾಖಲಿಸಿಕೊಂಡಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪರಿಚಿತರಿಂದ ತನಗೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ಎಲ್ಲರ ಗಮನ ಸೆಳೆದಿದ್ದ ಈ ಪ್ರಕರಣವು ಬಾಯ್ಸ್ ಲಾಕರ್ ಪ್ರಕರಣವೆಂದೇ ಕುಖ್ಯಾತಿ ಪಡೆದಿತ್ತು. ಸೋಷಿಯಲ್ ಮೀಡಿಯಾದ ಇನ್ಸ್ಟಾಗ್ರಾಮ್ನ ಚ್ಯಾಟ್ ಗ್ರೂಪ್ವೊಂದಾಗಿದ್ದ ಬಾಯ್ಸ್ ಲಾಕರ್ನಲ್ಲಿ ಹುಡುಗಿಯರ ಬಗ್ಗೆ ಅಶ್ಲೀಲ ಚರ್ಚೆಗಳನ್ನು ನಡೆಸುವುದಲ್ಲದೆ ಚ್ಯಾಟ್ ಗ್ರೂಪ್ನ ಇತರೆ ಸದಸ್ಯರಿಗೆ ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸುವಂತೆ ಪ್ರಚೋದನೆ ಸಹ ನೀಡಲಾಗುತ್ತಿತ್ತು. 17ರಿಂದ 19ರ ಹರೆಯದ ಹುಡುಗರಿದ್ದ ಈ ಚ್ಯಾಟ್ ಗ್ರೂಪ್ನಲ್ಲಿ ಯುವತಿಯರ ಅಶ್ಲೀಲ ಫೋಟೋಗಳನ್ನು ಸಹ ಪೋಸ್ಟ್ ಮಾಡಲಾಗುತ್ತಿತ್ತು.

ಮೇ ತಿಂಗಳಲ್ಲಿ ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ದೆಹಲಿ ಪೊಲೀಸರ ಸೈಬರ್ ಸೆಲ್ ವಿಭಾಗ ಮೊದಲನೇ ದೂರು ದಾಖಲಿಸಿಕೊಂಡು ಚ್ಯಾಟ್ ಗ್ರೂಪ್ನ ಅಡ್ಮಿನಿಸ್ಟ್ರೇಟರ್ನನ್ನು ಬಂಧಿಸಿತ್ತು. ಜೊತೆಗೆ ಗುಂಪಿನ ಇತರೆ ಯುವಕರನ್ನು ಸಹ ವಿಚಾರಣೆಗೆ ಒಳಪಡಿಸಿತ್ತು. ಈ ಮಧ್ಯೆ ಗ್ರೂಪ್​ನ ಸದಸ್ಯನೊಬ್ಬ ಹದಿಹರೆಯದ ಯುವಕ ಅಪಾರ್ಟ್​ಮೆಂಟ್​ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮಧ್ಯೆ, ದೆಹಲಿಯ ಮಹಿಳಾ ಆಯೋಗವು ಕೂಡ ಇನ್ಸ್ಟಾಗ್ರಾಮ್ ಸಂಸ್ಥೆ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಸಹ ನೀಡಿತ್ತು. ಜೊತೆಗೆ, ದೆಹಲಿ ಹೈ ಕೋರ್ಟ್ ಸಹ ಈ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಪೊಲೀಸರಿಗೆ ತಾಕೀತು ಮಾಡಿತ್ತು.

ಇದೀಗ ಪ್ರಕರಣವನ್ನು ಬಯಲಿಗೆಳೆದ ಯುವತಿಗೆ ಬೆದರಿಕೆ ಸಂದೇಶಗಳು ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮವನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ. ತನಿಖೆ ಚುರುಕುಗೊಳಿಸಿ ಇಂಥ ಕಿಡಿಗೇಡಿಗಳನ್ನು ಮಟ್ಟಹಾಕಬೇಕಿದೆ.

Published On - 5:12 pm, Mon, 8 June 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ