AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಅನುಪಮ್​ ಖೇರ್​
TV9 Web
| Edited By: |

Updated on:Apr 24, 2022 | 1:11 PM

Share

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್​ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ರುದ್ರಾಕ್ಷಿ ಹಾರವನ್ನು ನೀಡಿದ್ದಾರೆ. ಈ ರುದ್ರಾಕ್ಷಿ  ಹಾರವನ್ನು ಅನುಪಮ್ ಖೇರ್​ ತಾಯಿ ಪ್ರಧಾನಿ ಮೋದಿಯವರಿಗಾಗಿ ಕಳಿಸಿಕೊಟ್ಟಿದ್ದಾರೆ. ಅನುಪಮ್​ ಖೇರ್​ ಶನಿವಾರ ಸಂಜೆಯ ಹೊತ್ತಿಗೆ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಟ್ವೀಟ್​ ಮಾಡಿ ಫೋಟೋ ಹಂಚಿಕೊಂಡ ಅವರು,  ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಂಬ ಸಂತೋಷವಾಯಿತು. ಈ ದೇಶಕ್ಕಾಗಿ, ದೇಶದ ಜನರಿಗಾಗಿ ನೀವು ಹಗಲಿರುಳು ಶ್ರಮಿಸುತ್ತಿದ್ದೀರಿ. ನಿಮ್ಮ ರಕ್ಷಣೆಗೆ ಇರಲಿ ಎಂದು ನನ್ನ ತಾಯಿ ಈ ರುದ್ರಾಕ್ಷಿ ಹಾರವನ್ನು ಕಳಿಸಿಕೊಟ್ಟಿದ್ದರು. ಅದನ್ನು ನೀವು ಸ್ವೀಕರಿಸಿದ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ. ಜೈ ಹೋ, ಜೈ ಹಿಂದ್​ ಎಂದು ಬರೆದಿದ್ದಾರೆ. 

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು. ಈ ದೇಶಕ್ಕೆ ನಿರಂತರವಾಗಿ ಸೇವೆ ಸಲ್ಲಿಸಲು ಶಕ್ತಿ, ಸ್ಫೂರ್ತಿ ನೀಡುತ್ತಿರುವುದೇ ಈ ದೇಶದ ಜನರು ಎಂದು ಹೇಳಿದ್ದಾರೆ.  ಇತ್ತೀಚೆಗೆ ತೆರೆಕಂಡು, ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶ್ಲಾಘಿಸಿದ್ದರು. ಅದರಲ್ಲಿ ಅನುಪಮ್​ ಖೇರ್​ ತುಂಬ ಮುಖ್ಯವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Published On - 1:04 pm, Sun, 24 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ