ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಅನುಪಮ್​ ಖೇರ್​
Follow us
| Updated By: Lakshmi Hegde

Updated on:Apr 24, 2022 | 1:11 PM

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್​ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ರುದ್ರಾಕ್ಷಿ ಹಾರವನ್ನು ನೀಡಿದ್ದಾರೆ. ಈ ರುದ್ರಾಕ್ಷಿ  ಹಾರವನ್ನು ಅನುಪಮ್ ಖೇರ್​ ತಾಯಿ ಪ್ರಧಾನಿ ಮೋದಿಯವರಿಗಾಗಿ ಕಳಿಸಿಕೊಟ್ಟಿದ್ದಾರೆ. ಅನುಪಮ್​ ಖೇರ್​ ಶನಿವಾರ ಸಂಜೆಯ ಹೊತ್ತಿಗೆ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಟ್ವೀಟ್​ ಮಾಡಿ ಫೋಟೋ ಹಂಚಿಕೊಂಡ ಅವರು,  ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಂಬ ಸಂತೋಷವಾಯಿತು. ಈ ದೇಶಕ್ಕಾಗಿ, ದೇಶದ ಜನರಿಗಾಗಿ ನೀವು ಹಗಲಿರುಳು ಶ್ರಮಿಸುತ್ತಿದ್ದೀರಿ. ನಿಮ್ಮ ರಕ್ಷಣೆಗೆ ಇರಲಿ ಎಂದು ನನ್ನ ತಾಯಿ ಈ ರುದ್ರಾಕ್ಷಿ ಹಾರವನ್ನು ಕಳಿಸಿಕೊಟ್ಟಿದ್ದರು. ಅದನ್ನು ನೀವು ಸ್ವೀಕರಿಸಿದ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ. ಜೈ ಹೋ, ಜೈ ಹಿಂದ್​ ಎಂದು ಬರೆದಿದ್ದಾರೆ. 

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು. ಈ ದೇಶಕ್ಕೆ ನಿರಂತರವಾಗಿ ಸೇವೆ ಸಲ್ಲಿಸಲು ಶಕ್ತಿ, ಸ್ಫೂರ್ತಿ ನೀಡುತ್ತಿರುವುದೇ ಈ ದೇಶದ ಜನರು ಎಂದು ಹೇಳಿದ್ದಾರೆ.  ಇತ್ತೀಚೆಗೆ ತೆರೆಕಂಡು, ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶ್ಲಾಘಿಸಿದ್ದರು. ಅದರಲ್ಲಿ ಅನುಪಮ್​ ಖೇರ್​ ತುಂಬ ಮುಖ್ಯವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Published On - 1:04 pm, Sun, 24 April 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ