AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಅನುಪಮ್​ ಖೇರ್​
TV9 Web
| Edited By: |

Updated on:Apr 24, 2022 | 1:11 PM

Share

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್​ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ರುದ್ರಾಕ್ಷಿ ಹಾರವನ್ನು ನೀಡಿದ್ದಾರೆ. ಈ ರುದ್ರಾಕ್ಷಿ  ಹಾರವನ್ನು ಅನುಪಮ್ ಖೇರ್​ ತಾಯಿ ಪ್ರಧಾನಿ ಮೋದಿಯವರಿಗಾಗಿ ಕಳಿಸಿಕೊಟ್ಟಿದ್ದಾರೆ. ಅನುಪಮ್​ ಖೇರ್​ ಶನಿವಾರ ಸಂಜೆಯ ಹೊತ್ತಿಗೆ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಟ್ವೀಟ್​ ಮಾಡಿ ಫೋಟೋ ಹಂಚಿಕೊಂಡ ಅವರು,  ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಂಬ ಸಂತೋಷವಾಯಿತು. ಈ ದೇಶಕ್ಕಾಗಿ, ದೇಶದ ಜನರಿಗಾಗಿ ನೀವು ಹಗಲಿರುಳು ಶ್ರಮಿಸುತ್ತಿದ್ದೀರಿ. ನಿಮ್ಮ ರಕ್ಷಣೆಗೆ ಇರಲಿ ಎಂದು ನನ್ನ ತಾಯಿ ಈ ರುದ್ರಾಕ್ಷಿ ಹಾರವನ್ನು ಕಳಿಸಿಕೊಟ್ಟಿದ್ದರು. ಅದನ್ನು ನೀವು ಸ್ವೀಕರಿಸಿದ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ. ಜೈ ಹೋ, ಜೈ ಹಿಂದ್​ ಎಂದು ಬರೆದಿದ್ದಾರೆ. 

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು. ಈ ದೇಶಕ್ಕೆ ನಿರಂತರವಾಗಿ ಸೇವೆ ಸಲ್ಲಿಸಲು ಶಕ್ತಿ, ಸ್ಫೂರ್ತಿ ನೀಡುತ್ತಿರುವುದೇ ಈ ದೇಶದ ಜನರು ಎಂದು ಹೇಳಿದ್ದಾರೆ.  ಇತ್ತೀಚೆಗೆ ತೆರೆಕಂಡು, ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶ್ಲಾಘಿಸಿದ್ದರು. ಅದರಲ್ಲಿ ಅನುಪಮ್​ ಖೇರ್​ ತುಂಬ ಮುಖ್ಯವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Published On - 1:04 pm, Sun, 24 April 22

Follow Us
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ