AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ರಾಜಕೀಯ ಪ್ರವೇಶ ಘೋಷಿಸಿದ ನಟ ಸೋನು ಸೂದ್, ಯಾವ ಪಕ್ಷಕ್ಕೆ ಎಂಬುದು ಶೀಘ್ರದಲ್ಲೇ ನಿರ್ಧಾರ

Actor Sonu Sood “ಮಾಳವಿಕಾ ಸಿದ್ಧವಾಗಿದ್ದಾರೆ. ಜನರ ಸೇವೆಗೆ ಅವರ ಬದ್ಧತೆ ಅಪ್ರತಿಮವಾಗಿದೆ, ”ಎಂದು ಸೂದ್ ಮೊಗಾದ ತಮ್ಮ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅವರು ಇತ್ತೀಚೆಗೆ ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರನ್ನು ಭೇಟಿಯಾಗಿದ್ದರು.

ಸಹೋದರಿಯ ರಾಜಕೀಯ ಪ್ರವೇಶ ಘೋಷಿಸಿದ ನಟ ಸೋನು ಸೂದ್, ಯಾವ ಪಕ್ಷಕ್ಕೆ ಎಂಬುದು ಶೀಘ್ರದಲ್ಲೇ ನಿರ್ಧಾರ
ಸೋನು ಸೂದ್ ಸುದ್ದಿಗೋಷ್ಠಿ
TV9 Web
| Edited By: |

Updated on:Nov 14, 2021 | 2:05 PM

Share

ಚಂಡೀಗಡ:  ಸಹೋದರಿ ಮಾಳವಿಕಾ ಸೂದ್ ಸಾಚಾರ್ (Malvika Sood Sachar)ರಾಜಕೀಯ ಪ್ರವೇಶವನ್ನು ಘೋಷಿಸಿದ ಬಾಲಿವುಡ್ ನಟ ಸೋನು ಸೂದ್ (Sonu Sood) ಅವರು ಪಂಜಾಬ್ (Punjab) ಜನರ ಸೇವೆಗೆ ಸಿದ್ಧ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಯಾವ ರಾಜಕೀಯ ಪಕ್ಷವನ್ನು ಸೇರುತ್ತಾರೆ ಎಂಬುದನ್ನು ಅವರು ಇನ್ನೂ ನಿರ್ಧರಿಸಿಲ್ಲ. ಅವರ ನಿರ್ಧಾರವನ್ನು “ಸರಿಯಾದ ಸಮಯದಲ್ಲಿ ಬಹಿರಂಗಪಡಿಸಲಾಗುವುದು” ಎಂದು ಸೋನು ಸೂದ್ ಹೇಳಿದ್ದಾರೆ. “ಮಾಳವಿಕಾ ಸಿದ್ಧವಾಗಿದ್ದಾರೆ. ಜನರ ಸೇವೆಗೆ ಅವರ ಬದ್ಧತೆ ಅಪ್ರತಿಮವಾಗಿದೆ, ”ಎಂದು ಸೂದ್ ಮೊಗಾದ ತಮ್ಮ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅವರು ಇತ್ತೀಚೆಗೆ ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರನ್ನು ಭೇಟಿಯಾಗಿದ್ದರು. ತಾವು ಎಎಪಿಯ ಅರವಿಂದ್ ಕೇಜ್ರಿವಾಲ್ ಮತ್ತು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಸೇರಿದಂತೆ ಇತರ ರಾಜಕೀಯ ನಾಯಕರನ್ನು ಭೇಟಿ ಮಾಡಲು ಸಿದ್ಧ ಎಂದು ಸೂದ್ ಹೇಳಿದ್ದಾರೆ. ” ರಾಜಕೀಯ ಪಕ್ಷವನ್ನು ಸೇರುವುದು ಜೀವನದ ಒಂದು ದೊಡ್ಡ ನಿರ್ಧಾರವಾಗಿದೆ, ಇದು ಸಿದ್ಧಾಂತಗಳ ಬಗ್ಗೆ ಆಗಿದ್ದುಹೆಚ್ಚು ಪ್ರಾಸಂಗಿಕ ಸಭೆಗಳಲ್ಲ” ಎಂದು ಅವರು ವಿವರಿಸಿದರು. “ನಾವು ಪಕ್ಷದ ಬಗ್ಗೆ ಸರಿಯಾದ ಸಮಯದಲ್ಲಿ ಬಹಿರಂಗಪಡಿಸುತ್ತೇವೆ.”ಎಂದು ಹೇಳಿದ ಸೂದ್ ಮೋಗಾ ಕ್ಷೇತ್ರದಿಂದ ಮಾಳವಿಕಾ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.

ನೀವು ಕೂಡ ರಾಜಕೀಯಕ್ಕೆ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸೂದ್, “ಮೊದಲು ಮಾಳವಿಕಾ ಅವರನ್ನು ಬೆಂಬಲಿಸುವುದು ಮುಖ್ಯ, ಅವರು ಮೊಗಾದಲ್ಲಿ ನಮ್ಮ ಬೇರುಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ನನ್ನ ಸ್ವಂತ ಯೋಜನೆಗಳನ್ನು ನಾನು ನಂತರ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಆರೋಗ್ಯ ರಕ್ಷಣೆ ಮಾಳವಿಕಾ ಅವರ ಪ್ರಮುಖ ಆದ್ಯತೆಯಾಗಿದೆ. ಚುನಾಯಿತರಾದರೆ, ಡಯಾಲಿಸಿಸ್ ಅಗತ್ಯವಿರುವ ರೋಗಿಗಳಿಗೆ ಉಚಿತವಾಗಿ ಅವುಗಳನ್ನು ಪಡೆಯುವುದನ್ನು ಅವರು ಖಚಿತಪಡಿಸುತ್ತಾರೆ ಎಂದು ಸೂದ್ ಹೇಳಿದರು. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆಯೂ ಅವರು ಮಾತನಾಡಲಿದ್ದಾರೆ. “ಪಂಜಾಬ್‌ನಲ್ಲಿ ಯುವಕರು ಕೆಲಸ ಸಿಗದಿದ್ದಾಗ, ನಿರುದ್ಯೋಗಿಗಳಾಗಿದ್ದಾಗ ಮಾತ್ರ ಡ್ರಗ್‌ಗಳ ಮೊರೆ ಹೋಗುತ್ತಾರೆ. ನಾವು ಈಗಾಗಲೇ ಅದರ ಬಗ್ಗೆ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಐಟಿ ದಾಳಿ ಬಗ್ಗೆ ಮಾತಾಡಿ ಸೋನು ಸೂದ್​ಗೆ ಕುಟುಕಿದ ಕಪಿಲ್​ ಶರ್ಮಾ; ರಿಯಲ್​ ಹೀರೋ ಪ್ರತಿಕ್ರಿಯೆ ಹೇಗಿತ್ತು?

ಇದನ್ನೂ ಓದಿ: ಹಿಂದುತ್ವ ಮತ್ತು ಹಿಂದೂಯಿಸಂ ನಡುವಿನ ವ್ಯತ್ಯಾಸ ತಿಳಿಸಿದ ರಮ್ಯಾ; ವಾಸ್ತವ ವಿವರಿಸಿ ಬೇಸರ ವ್ಯಕ್ತಪಡಿಸಿದ ನಟಿ

Published On - 1:47 pm, Sun, 14 November 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ