AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ

ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ
ಅಮಿತಾಭ್​ ಬಚ್ಚನ್​
guruganesh bhat
| Edited By: |

Updated on: Apr 02, 2021 | 12:08 PM

Share

ಮುಂಬೈ: ಬಾಲಿವುಡ್ ಮೆಗಾಸ್ಟಾರ್  ಅಮಿತಾಬ್ ಬಚ್ಚನ್ ಕೊರೊನಾ ಲಸಿಕೆ ಪಡೆದಿದ್ದಾರೆ. ಅವರಷ್ಟೇ ಅಲ್ಲದೇ ಅವರ ಕುಟುಂಬದಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ಹೊರತುಪಡಿಸಿ ಮಿಕ್ಕೆಲ್ಲರೂ ಕೊರೊನಾ ಲಸಿಕೆ ಪಡೆದಿದ್ದಾರೆ. ಮಗ ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ  2020ರ ಜುಲೈ 11ರಂದು ಕೊರೊನಾ ಸೋಂಕು ತಗುಲಿತ್ತು. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಬಿಗ್‌ ಬಿ ಚಿಕಿತ್ಸೆ ಪಡೆದಿದ್ದರು.  ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು.

ಇಷ್ಟೇ ಅಲ್ಲದೇ  ಹಿಂದಿನ ವರ್ಷ ಬಿಗ್‌ ಬಿ ಪುತ್ರ ಅಭಿಷೇಕ್‌ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಪುಟಾಣಿ ಆರಾಧ್ಯಾಳಿಗೂ ‌ಕೂಡಾ ಕೊರೊನಾ ಸೋಂಕು ತಗುಲಿತ್ತು.  ನಾನು ಮತ್ತು ನಮ್ಮ ತಂದೆ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬಿಎಂಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದರು. ಈ ಅಭಿಷೇಕ್ ಬಚ್ಚನ್ ಹೊರತುಪಡಿಸಿ ಮಿಕ್ಕವರೆಲ್ಲರೂ ಕೊರೊನಾ ಲಸಿಕೆ ಪಡೆದಂತಾಗಿದೆ.

ಇದನ್ನೂ ಓದಿ: ಸರ್ಕಾರಿ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ

(Bollywood Big B Amitabh Bachchan get Corona vaccine along with family)

Follow Us
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು