Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ

ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ
ಅಮಿತಾಭ್​ ಬಚ್ಚನ್​
Follow us
guruganesh bhat
| Updated By: shruti hegde

Updated on: Apr 02, 2021 | 12:08 PM

ಮುಂಬೈ: ಬಾಲಿವುಡ್ ಮೆಗಾಸ್ಟಾರ್  ಅಮಿತಾಬ್ ಬಚ್ಚನ್ ಕೊರೊನಾ ಲಸಿಕೆ ಪಡೆದಿದ್ದಾರೆ. ಅವರಷ್ಟೇ ಅಲ್ಲದೇ ಅವರ ಕುಟುಂಬದಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ಹೊರತುಪಡಿಸಿ ಮಿಕ್ಕೆಲ್ಲರೂ ಕೊರೊನಾ ಲಸಿಕೆ ಪಡೆದಿದ್ದಾರೆ. ಮಗ ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ  2020ರ ಜುಲೈ 11ರಂದು ಕೊರೊನಾ ಸೋಂಕು ತಗುಲಿತ್ತು. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಬಿಗ್‌ ಬಿ ಚಿಕಿತ್ಸೆ ಪಡೆದಿದ್ದರು.  ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು.

ಇಷ್ಟೇ ಅಲ್ಲದೇ  ಹಿಂದಿನ ವರ್ಷ ಬಿಗ್‌ ಬಿ ಪುತ್ರ ಅಭಿಷೇಕ್‌ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಪುಟಾಣಿ ಆರಾಧ್ಯಾಳಿಗೂ ‌ಕೂಡಾ ಕೊರೊನಾ ಸೋಂಕು ತಗುಲಿತ್ತು.  ನಾನು ಮತ್ತು ನಮ್ಮ ತಂದೆ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬಿಎಂಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದರು. ಈ ಅಭಿಷೇಕ್ ಬಚ್ಚನ್ ಹೊರತುಪಡಿಸಿ ಮಿಕ್ಕವರೆಲ್ಲರೂ ಕೊರೊನಾ ಲಸಿಕೆ ಪಡೆದಂತಾಗಿದೆ.

ಇದನ್ನೂ ಓದಿ: ಸರ್ಕಾರಿ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ

(Bollywood Big B Amitabh Bachchan get Corona vaccine along with family)

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು