AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ

ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ಲಸಿಕೆ ಪಡೆದ ಅಮಿತಾಬ್ ಬಚ್ಚನ್ ಮತ್ತು ಕುಟುಂಬ
ಅಮಿತಾಭ್​ ಬಚ್ಚನ್​
guruganesh bhat
| Edited By: |

Updated on: Apr 02, 2021 | 12:08 PM

Share

ಮುಂಬೈ: ಬಾಲಿವುಡ್ ಮೆಗಾಸ್ಟಾರ್  ಅಮಿತಾಬ್ ಬಚ್ಚನ್ ಕೊರೊನಾ ಲಸಿಕೆ ಪಡೆದಿದ್ದಾರೆ. ಅವರಷ್ಟೇ ಅಲ್ಲದೇ ಅವರ ಕುಟುಂಬದಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ಹೊರತುಪಡಿಸಿ ಮಿಕ್ಕೆಲ್ಲರೂ ಕೊರೊನಾ ಲಸಿಕೆ ಪಡೆದಿದ್ದಾರೆ. ಮಗ ಅಭಿಷೇಕ್ ಬಚ್ಚನ್ ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದು, ಅವರನ್ನು ಬಿಟ್ಟು ಕುಟುಂಬದ ಎಲ್ಲರೂ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ್ದೇವೆ ಎಂದು ಅಮಿತಾಬ್ ಬಚ್ಚನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ  2020ರ ಜುಲೈ 11ರಂದು ಕೊರೊನಾ ಸೋಂಕು ತಗುಲಿತ್ತು. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಬಿಗ್‌ ಬಿ ಚಿಕಿತ್ಸೆ ಪಡೆದಿದ್ದರು.  ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು.

ಇಷ್ಟೇ ಅಲ್ಲದೇ  ಹಿಂದಿನ ವರ್ಷ ಬಿಗ್‌ ಬಿ ಪುತ್ರ ಅಭಿಷೇಕ್‌ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಪುಟಾಣಿ ಆರಾಧ್ಯಾಳಿಗೂ ‌ಕೂಡಾ ಕೊರೊನಾ ಸೋಂಕು ತಗುಲಿತ್ತು.  ನಾನು ಮತ್ತು ನಮ್ಮ ತಂದೆ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬಿಎಂಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದರು. ಈ ಅಭಿಷೇಕ್ ಬಚ್ಚನ್ ಹೊರತುಪಡಿಸಿ ಮಿಕ್ಕವರೆಲ್ಲರೂ ಕೊರೊನಾ ಲಸಿಕೆ ಪಡೆದಂತಾಗಿದೆ.

ಇದನ್ನೂ ಓದಿ: ಸರ್ಕಾರಿ ರಜಾ ದಿನಗಳಲ್ಲೂ ಕೊರೊನಾ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ

(Bollywood Big B Amitabh Bachchan get Corona vaccine along with family)

Follow Us
guruganesh bhat
guruganesh bhat
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ