AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalassery Bomb Blast: ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಒಬ್ಬರಿಗೆ ಗಂಭೀರ ಗಾಯ

ಕೇರಳದ ಕಣ್ಣೂರಿನ ತಲಶ್ಶೇರಿಯ ಮನೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಬಾಂಬ್ ಸ್ಫೋಟದಲ್ಲಿ ಒಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Thalassery Bomb Blast: ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಒಬ್ಬರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 13, 2023 | 1:29 PM

Share

ಕಣ್ಣೂರು:  ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ (Thalassery) ಯುವಕನೊಬ್ಬ ಒಂಟಿಯಾಗಿ ವಾಸಿಸುತ್ತಿದ್ದ ಮನೆಯೊಳಗೆ ಬಾಂಬ್ ಸ್ಫೋಟಗೊಂಡಿದೆ (Bomb Blast). ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ತಲಶ್ಶೇರಿ ರೈಲ್ವೆ ನಿಲ್ದಾಣದ ರಸ್ತೆಯ ಲೋಟಸ್ ಆಡಿಟೋರಿಯಂ ಬಳಿಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಭಾರೀ ಸ್ಫೋಟದ ರಭಸಕ್ಕೆ ಯುವಕನ ತಲೆಗೆ ಗಾಯಗಳಾಗಿವೆ. ನಡಮ್ಮಲ್ ಮನೆಯಲ್ಲಿ ನಡೆದ ಸ್ಫೋಟದಲ್ಲಿ ಜಿತಿನ್ (25) ಗಾಯಗೊಂಡಿದ್ದಾರೆ. ಪೊಲೀಸರು ಜಿತಿನ್​​​ನ್ನು  ತಲಶ್ಶೇರಿ ಜನರಲ್ ಆಸ್ಪತ್ರೆಗೆ ಕರೆತಂದಿದ್ದಾರೆ. ನಂತರ ತಜ್ಞರ ಚಿಕಿತ್ಸೆಗಾಗಿ ಪರಿಯಾರಂ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಜಿತಿನ್ ಅವರ ಕೈ, ಬೆನ್ನು ಮತ್ತು ಕಾಲಿಗೆ ಗಾಯವಾಗಿದೆ. ಸ್ಫೋಟದಲ್ಲಿ ಮನೆಯ ಕೋಣೆಗೆ ಹಾನಿಯಾಗಿದೆ. ಕಿಟಕಿ ಗಾಜುಗಳು ಮತ್ತು ಫ್ಯಾನ್ ಒಡೆದು ಹೋಗಿವೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅದೊಂದು ಸ್ಟೀಲ್ ಬಾಂಬ್ ಎಂದು ಪೊಲೀಸರು ತಿಳಿಸಿದ್ದಾರೆ ಎಂಧು ಮಾಧ್ಯಮಮ್ ಪತ್ರಿಕೆ ವರದಿ ಮಾಡಿದೆ.

ಹೆಚ್ಚಿನ ಬಾಂಬ್ ಗಳಿದ್ದರೆ ಪರಿಶೀಲಿಸುವುದಾಗಿ ಸ್ಥಳಕ್ಕೆ ಭೇಟಿ ನೀಡಿದ ಕಣ್ಣೂರು ನಗರ ಪೊಲೀಸ್ ಮುಖ್ಯಸ್ಥ ಕೆ. ಅಜಿತ್ ಕುಮಾರ್ ಹೇಳಿದರು. ಬಾಂಬ್-ಶ್ವಾನದಳವು ಸ್ಫೋಟ ಸಂಭವಿಸಿದ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವರವಾದ ಶೋಧವನ್ನು ನಡೆಸಿತು. ಯುವಕನ ಗಾಯ ಗಂಭೀರವಾಗಿಲ್ಲ. ಮನೆಯಲ್ಲಿ ಬಾಂಬ್ ಇಟ್ಟುಕೊಂಡಿರುವ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Fri, 13 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್