AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ; ಹಳಿ ತಪ್ಪಿದ ಡೀಸೆಲ್ ಇಂಜಿನ್

ಇಂದು ಮುಂಜಾನೆ ನಡೆದ ಸ್ಫೋಟದಿಂದ ಡೀಸೆಲ್ ಇಂಜಿನ್​ನ ರೈಲು ಹಳಿ ತಪ್ಪಿದೆ. ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾಕಾನಾ ವಿಭಾಗದ ನಡುವೆ "ಬಾಂಬ್ ಸ್ಫೋಟ"ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ.

ಜಾರ್ಖಂಡ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ; ಹಳಿ ತಪ್ಪಿದ ಡೀಸೆಲ್ ಇಂಜಿನ್
ರೈಲ್ವೆ ಹಳಿ ಮೇಲೆ ಸ್ಫೋಟ
TV9 Web
| Edited By: |

Updated on:Nov 20, 2021 | 11:34 AM

Share

ನವದೆಹಲಿ: ಜಾರ್ಖಂಡ್‌ನ ಧನ್‌ಬಾದ್ ವಲಯದಲ್ಲಿ ರೈಲ್ವೆ ಹಳಿ ಮೇಲೆ ಬಾಂಬ್ ಸ್ಫೋಟವಾಗಿದ್ದು, ರೈಲ್ವೆ ಹಳಿಯ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಇಂದು ಮುಂಜಾನೆ ನಡೆದ ಸ್ಫೋಟದಿಂದ ಡೀಸೆಲ್ ಇಂಜಿನ್​ನ ರೈಲು ಹಳಿ ತಪ್ಪಿದೆ. ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾಕಾನಾ ವಿಭಾಗದ ನಡುವೆ “ಬಾಂಬ್ ಸ್ಫೋಟ”ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ.

ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಬಾಂಬ್ ಸ್ಫೋಟ ಮಾಡಿದ್ದು, ಇದರಿಂದ ಧನ್‌ಬಾದ್‌ಗೆ ಹೋಗುತ್ತಿದ್ದ ರೈಲು ಹಳಿತಪ್ಪಿದೆ. ಇದು ನಕ್ಸಲ್ ಸಂಬಂಧಿತ ಘಟನೆ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯದಲ್ಲೇ ಸಂಚಾರ ಮರುಸ್ಥಾಪಿಸುವ ಬಗ್ಗೆ ಘೋಷಿಸಲಾಗುವುದು.

ರೈಲ್ವೆ ಹಳಿ ಮೇಲೆ ನಡೆದ ಸ್ಫೋಟದಿಂದ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು. ಮೂಲಗಳ ಪ್ರಕಾರ ನಕ್ಸಲರ ಕೈವಾಡದಿಂದ ಸ್ಫೋಟ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಉಗಾಂಡಾದಲ್ಲಿ ಭಾರತೀಯ ಪ್ಯಾರಾ ಬ್ಯಾಡ್ಮಿಂಟನ್​ ತಂಡ ಉಳಿದುಕೊಂಡಿರುವ ಹೊಟೆಲ್​ ಬಳಿ ಅವಳಿ ಬಾಂಬ್​ ಸ್ಫೋಟ; ಆಟಗಾರರು ಸುರಕ್ಷಿತ

‘ನಾನು ಹೈಡ್ರೋಜನ್​ ಬಾಂಬ್ ಸ್ಫೋಟಿಸುತ್ತೇನೆ‘-ಫಡ್ನವೀಸ್​ಗೆ ನವಾಬ್​ ಮಲ್ಲಿಕ್​ ತಿರುಗೇಟು !

Published On - 11:32 am, Sat, 20 November 21

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ