AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ; ಹಳಿ ತಪ್ಪಿದ ಡೀಸೆಲ್ ಇಂಜಿನ್

ಇಂದು ಮುಂಜಾನೆ ನಡೆದ ಸ್ಫೋಟದಿಂದ ಡೀಸೆಲ್ ಇಂಜಿನ್​ನ ರೈಲು ಹಳಿ ತಪ್ಪಿದೆ. ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾಕಾನಾ ವಿಭಾಗದ ನಡುವೆ "ಬಾಂಬ್ ಸ್ಫೋಟ"ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ.

ಜಾರ್ಖಂಡ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ; ಹಳಿ ತಪ್ಪಿದ ಡೀಸೆಲ್ ಇಂಜಿನ್
ರೈಲ್ವೆ ಹಳಿ ಮೇಲೆ ಸ್ಫೋಟ
TV9 Web
| Edited By: |

Updated on:Nov 20, 2021 | 11:34 AM

Share

ನವದೆಹಲಿ: ಜಾರ್ಖಂಡ್‌ನ ಧನ್‌ಬಾದ್ ವಲಯದಲ್ಲಿ ರೈಲ್ವೆ ಹಳಿ ಮೇಲೆ ಬಾಂಬ್ ಸ್ಫೋಟವಾಗಿದ್ದು, ರೈಲ್ವೆ ಹಳಿಯ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಇಂದು ಮುಂಜಾನೆ ನಡೆದ ಸ್ಫೋಟದಿಂದ ಡೀಸೆಲ್ ಇಂಜಿನ್​ನ ರೈಲು ಹಳಿ ತಪ್ಪಿದೆ. ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾಕಾನಾ ವಿಭಾಗದ ನಡುವೆ “ಬಾಂಬ್ ಸ್ಫೋಟ”ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ.

ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಬಾಂಬ್ ಸ್ಫೋಟ ಮಾಡಿದ್ದು, ಇದರಿಂದ ಧನ್‌ಬಾದ್‌ಗೆ ಹೋಗುತ್ತಿದ್ದ ರೈಲು ಹಳಿತಪ್ಪಿದೆ. ಇದು ನಕ್ಸಲ್ ಸಂಬಂಧಿತ ಘಟನೆ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯದಲ್ಲೇ ಸಂಚಾರ ಮರುಸ್ಥಾಪಿಸುವ ಬಗ್ಗೆ ಘೋಷಿಸಲಾಗುವುದು.

ರೈಲ್ವೆ ಹಳಿ ಮೇಲೆ ನಡೆದ ಸ್ಫೋಟದಿಂದ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು. ಮೂಲಗಳ ಪ್ರಕಾರ ನಕ್ಸಲರ ಕೈವಾಡದಿಂದ ಸ್ಫೋಟ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಉಗಾಂಡಾದಲ್ಲಿ ಭಾರತೀಯ ಪ್ಯಾರಾ ಬ್ಯಾಡ್ಮಿಂಟನ್​ ತಂಡ ಉಳಿದುಕೊಂಡಿರುವ ಹೊಟೆಲ್​ ಬಳಿ ಅವಳಿ ಬಾಂಬ್​ ಸ್ಫೋಟ; ಆಟಗಾರರು ಸುರಕ್ಷಿತ

‘ನಾನು ಹೈಡ್ರೋಜನ್​ ಬಾಂಬ್ ಸ್ಫೋಟಿಸುತ್ತೇನೆ‘-ಫಡ್ನವೀಸ್​ಗೆ ನವಾಬ್​ ಮಲ್ಲಿಕ್​ ತಿರುಗೇಟು !

Published On - 11:32 am, Sat, 20 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ