AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಹಬ್ಬದ ದಿನವೇ ದೆಹಲಿಯ ಹೂವಿನ ಮಾರ್ಕೆಟ್​ನಲ್ಲಿ ಬಾಂಬ್ ಪತ್ತೆ; ತಪ್ಪಿದ ಭಾರೀ ಅನಾಹುತ

ಇಂದು ಮಕರ ಸಂಕ್ರಾಂತಿಯಾದ್ದರಿಂದ ದೆಹಲಿ ಮಾರ್ಕೆಟ್​ನಲ್ಲಿ ಸಾಕಷ್ಟು ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದರು. ಈ ವೇಳೆ ಬಾಂಬ್ ಇರಿಸಲಾಗಿದ್ದ ಬ್ಯಾಗ್ ಪತ್ತೆಯಾಗಿ ಆತಂಕ ಸೃಷ್ಟಿಯಾಯಿತು.

ಸಂಕ್ರಾಂತಿ ಹಬ್ಬದ ದಿನವೇ ದೆಹಲಿಯ ಹೂವಿನ ಮಾರ್ಕೆಟ್​ನಲ್ಲಿ ಬಾಂಬ್ ಪತ್ತೆ; ತಪ್ಪಿದ ಭಾರೀ ಅನಾಹುತ
ದೆಹಲಿ ಮಾರ್ಕೆಟ್​ನಲ್ಲಿ ಪತ್ತೆಯಾದ ಬಾಂಬ್
TV9 Web
| Updated By: ಸುಷ್ಮಾ ಚಕ್ರೆ|

Updated on:Jan 14, 2022 | 2:24 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್​ನಲ್ಲಿ ಇಂದು ಅನುಮಾನಾಸ್ಪದವಾದ ಚೀಲವೊಂದು ಪತ್ತೆಯಾಗಿದ್ದು, ಆ ಚೀಲದಲ್ಲಿ ಬಾಂಬ್ ಇರಿಸಲಾಗಿತ್ತು. ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಇರಿಸಲಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಐಇಡಿ ಇರಿಸಲಾಗಿದ್ದ ಬ್ಯಾಗನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಮಕರ ಸಂಕ್ರಾಂತಿಯಾದ್ದರಿಂದ ದೆಹಲಿ ಮಾರ್ಕೆಟ್​ನಲ್ಲಿ ಸಾಕಷ್ಟು ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದರು. ಈ ವೇಳೆ ಬಾಂಬ್ ಇರಿಸಲಾಗಿರುವ ಮಾಹಿತಿ ಸಿಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ಜೊತೆಗೆ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಬಾಂಬ್ ಸ್ಫೋಟಿಸುವಲ್ಲಿ ಯಶಸ್ವಿಯಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಆಸ್ತಾನಾ ತಿಳಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ದಳವೂ ಸ್ಥಳಕ್ಕೆ ತಲುಪಿದೆ. ಘಾಜಿಪುರ ಮಂಡಿಯಲ್ಲಿ ಪತ್ತೆಯಾದ ಬಾಂಬ್ ಸುಧಾರಿತ ಸ್ಫೋಟಕ ಸಾಧನ (ಐಇಡಿ)ವಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಖಚಿತಪಡಿಸಿದ್ದಾರೆ.

ಗಾಜಿಪುರ ಸಬ್ಜಿ ಮಂಡಿಯಲ್ಲಿ ಪತ್ತೆಯಾದ ಚೀಲವನ್ನು ನೆಲದಲ್ಲಿ ಗುಂಡಿ ತೋಡಿ, 8 ಅಡಿಗಳಷ್ಟು ಆಳದಲ್ಲಿ ಹೂತು ಹಾಕಲಾಯಿತು. ಬಾಂಬ್ ಪತ್ತೆಯಾದ ಪ್ರದೇಶವನ್ನು ಎನ್‌ಎಸ್‌ಜಿ ತಂಡವು ಸಂಪೂರ್ಣವಾಗಿ ಸುತ್ತುವರಿದಿದೆ. ಮೂಲಗಳ ಪ್ರಕಾರ, ಐಇಡಿಯನ್ನು ತೆರೆದ ಮೈದಾನದಲ್ಲಿ ಸ್ಫೋಟಿಸಲಾಗಿದೆ. ಆ ಚೀಲವನ್ನು ಮಾತ್ರ ಹೂತು ಹಾಕಲಾಗಿದೆ. ದೆಹಲಿ ಪೊಲೀಸರಿಂದ ಈ ಕುರಿತು ಅಧಿಕೃತ ಹೇಳಿಕೆಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Shah Rukh Khan: ಶಾರುಖ್ ನಿವಾಸ ‘ಮನ್ನತ್​’ಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದವ ಈಗ ಪೊಲೀಸರ ಅತಿಥಿ

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

Published On - 2:22 pm, Fri, 14 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ