AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ ಹಾಕಿರುವ ಘಟನೆಗಳು ಹೆಚ್ಚಾಗುತ್ತಿವೆ. ಬಾಂಬ್​ ಇಟ್ಟಿರುವುದಾಗಿ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇ-ಮೇಲ್​ ಬಂದಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Bomb Threat: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ
ದೆಹಲಿ ಏರ್​ಪೋರ್ಟ್​
ನಯನಾ ರಾಜೀವ್
|

Updated on: Jun 18, 2024 | 9:48 AM

Share

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ.

ಮಾಹಿತಿ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ನೀಡಲಾಗಿದೆ. ಭದ್ರತಾ ಸಂಸ್ಥೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧಿಸಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೇಲ್ ಕಳುಹಿಸಿದವರನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ.

 ದೆಹಲಿ-ಟೊರೊಂಟೊ ಏರ್​ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ  ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.

ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಫ್ರಾನ್ಸ್ ರಾಜಧಾನಿ ಪ್ಯಾರಿಸ್(Paris)ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು.

ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ