AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ ಹಾಕಿರುವ ಘಟನೆಗಳು ಹೆಚ್ಚಾಗುತ್ತಿವೆ. ಬಾಂಬ್​ ಇಟ್ಟಿರುವುದಾಗಿ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇ-ಮೇಲ್​ ಬಂದಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Bomb Threat: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ
ದೆಹಲಿ ಏರ್​ಪೋರ್ಟ್​
ನಯನಾ ರಾಜೀವ್
|

Updated on: Jun 18, 2024 | 9:48 AM

Share

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್​ ಇರಿಸಲಾಗಿದೆ ಎಂದು ಬೆಳಗ್ಗೆ ಇ-ಮೇಲ್ ಬಂದಿದೆ.

ಮಾಹಿತಿ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ನೀಡಲಾಗಿದೆ. ಭದ್ರತಾ ಸಂಸ್ಥೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಶೋಧಿಸಿದೆ. ಶೋಧ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೇಲ್ ಕಳುಹಿಸಿದವರನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ.

 ದೆಹಲಿ-ಟೊರೊಂಟೊ ಏರ್​ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ  ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.

ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಫ್ರಾನ್ಸ್ ರಾಜಧಾನಿ ಪ್ಯಾರಿಸ್(Paris)ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು.

ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ