AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Scare: ವಿಮಾನದಲ್ಲಿ ಬಾಂಬ್ ಇದೆ ಎಂದು ಕೂಗಿದ ಪ್ರಯಾಣಿಕ, ಕೋಲ್ಕತ್ತಾದಿಂದ ದೋಹಾಗೆ ಹೊರಡಬೇಕಿದ್ದ ವಿಮಾನ ವಿಳಂಬ

ವಿಮಾನದಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಕಿರುಚಾಡಿದ ಪರಿಣಾಮ ಕೋಲ್ಕತ್ತಾದಿಂದ ದೋಹಾಗೆ ಹೊರಬೇಕಿದ್ದ ಕತಾರ್​ ಏರ್​ವೇಸ್​ ತಡವಾಗಿದೆ.

Bomb Scare: ವಿಮಾನದಲ್ಲಿ ಬಾಂಬ್ ಇದೆ ಎಂದು ಕೂಗಿದ ಪ್ರಯಾಣಿಕ, ಕೋಲ್ಕತ್ತಾದಿಂದ ದೋಹಾಗೆ ಹೊರಡಬೇಕಿದ್ದ ವಿಮಾನ ವಿಳಂಬ
ಕತಾರ್ ವಿಮಾನ
ನಯನಾ ರಾಜೀವ್
|

Updated on: Jun 06, 2023 | 9:48 AM

Share

ವಿಮಾನದಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಕಿರುಚಾಡಿದ ಪರಿಣಾಮ ಕೋಲ್ಕತ್ತಾದಿಂದ ದೋಹಾಗೆ ಹೊರಬೇಕಿದ್ದ ಕತಾರ್​ ಏರ್​ವೇಸ್​ ತಡವಾಗಿದೆ. ಇದಾದ ನಂತರ ಸಿಬ್ಬಂದಿ ತಕ್ಷಣವೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್‌ಎಫ್) ಮಾಹಿತಿ ನೀಡಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ವಿಮಾನವು ಇನ್ನೂ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿದ್ದು, ಸ್ನೈಫರ್ ಶ್ವಾನಗಳಿಂದ ವಿಮಾನವನ್ನು ಶೋಧಿಸಲಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ತನ್ನ ವಿಚಾರಣೆಯ ಸಮಯದಲ್ಲಿ, ವಿಮಾನದೊಳಗೆ ಬಾಂಬ್ ಇರುವ ಬಗ್ಗೆ ಯಾರೋ ಹೇಳಿದ್ದರು ಎಂದು ವ್ಯಕ್ತಿ ಹೇಳಿದ್ದಾನೆ. ವ್ಯಕ್ತಿಯ ತಂದೆ ತನ್ನ ಮಗನ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ CISF ಅಧಿಕಾರಿಗಳಿಗೆ ತಿಳಿಸಿದರು ಮತ್ತು ಪೂರಕ ದಾಖಲೆಗಳನ್ನು ಒದಗಿಸಿದರು.

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಮಧ್ಯಾಹ್ನ 3:29 ಕ್ಕೆ ಟೇಕ್-ಆಫ್ ಆಗುವ ಮೊದಲು, ಪ್ರಯಾಣಿಕರೊಬ್ಬರು ವಿಮಾನದಲ್ಲಿ ಬಾಂಬ್ ಇದೆ ಎಂದು ಕೂಗಲು ಪ್ರಾರಂಭಿಸಿದರು. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಪೊಲೀಸ್ ನಾಯಿಗಳೊಂದಿಗೆ ಹುಡುಕಾಟ ಪ್ರಾರಂಭವಾಯಿತು.

ಮತ್ತಷ್ಟು ಓದಿ: ತಾಂತ್ರಿಕ ಕಾರಣದಿಂದ 2 ಗಂಟೆಗೆ ಟೇಕ್ ಆಫ್​ ಆಗಬೇಕಿದ್ದ ವಿಮಾನ ವಿಳಂಬ; ಏರ್ ಇಂಡಿಯಾ ವಿರುದ್ಧ ಪ್ರಯಾಣಿಕರ ಪ್ರತಿಭಟನೆ

ಕತಾರ್ ಏರ್‌ಲೈನ್ಸ್ ವಿಮಾನವು 541 ಪ್ರಯಾಣಿಕರೊಂದಿಗೆ ಕಳೆದ ರಾತ್ರಿ ಕೋಲ್ಕತ್ತಾದಿಂದ ದೋಹಾ ಮೂಲಕ ಲಂಡನ್‌ಗೆ ಹಾರಬೇಕಿತ್ತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಪ್ರಯಾಣಿಕನ ಕುಟುಂಬದವರು ಮಾನಸಿಕ ಅಸ್ವಸ್ಥ ಎಂದು ಹೇಳಿದ್ದಾರೆ.

ಸಿಐಎಸ್ಎಫ್ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.ಆರೋಪಿ ಯುವಕನ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಇಡೀ ಘಟನೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಕೊನೆಗೂ ವಿಮಾನದಲ್ಲಿ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್