AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​

ದೆಹಲಿ ಹೈಕೋರ್ಟ್​​ಗೆ ಬಾಂಬ್​​ ಬೆದರಿಕೆ ಹಾಕಿದ್ದು, ಹೈಕೋರ್ಟ್​​​​​ ಮುಂದೆ ಪೊಲೀಸ್​​​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಈ ಹಿಂದೆ ದೆಹಲಿ ಶಾಲೆಯೊಂದಕ್ಕೆ ಇಂತಹ ಬಾಂಬ್​​​ ಬೆದರಿಕೆ ಹಾಕಲಾಗಿತ್ತು. ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 15, 2024 | 12:59 PM

Share

ದೆಹಲಿ, ಫೆ.15: ದೆಹಲಿ ಹೈಕೋರ್ಟ್​​ಗೆ (Delhi High Court) ಬಾಂಬ್​​​ ಬೆದರಿಕೆ (bomb threat) ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ. ದೆಹಲಿಯ ನಗರದ ಒಳಗೆ ಬರುವ ಪ್ರತಿಜ್ಞೆ ಮಾಡಿರುವ ರೈತರನ್ನು ಪೊಲೀಸರು ತಡೆದಿದ್ದು, ದೊಡ್ಡ ಭದ್ರತೆಯನ್ನು ನೀಡಲಾಗಿದೆ. ಇದರ ಜತೆಗೆ ದೆಹಲಿಯ ಸಚಿವರು ಈ ಬೆದರಿಕೆ ಮೇಲ್​​​ ಬಂದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಹೇಳಿದೆ.

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಹೈಕೋರ್ಟ್ ಆವರಣವನ್ನು ಕೂಲಂಕುಷವಾಗಿ ಶೋಧಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಶಾಲೆಗೆ ಬಾಂಬ್​ ಬೆದರಿಕೆ ಕರೆ, ಮಕ್ಕಳ ಸ್ಥಳಾಂತರ

ದಕ್ಷಿಣ ದೆಹಲಿಯ ಶಾಲೆಯಲ್ಲಿ ಬಾಂಬ್ ಬೆದರಿಕೆ

ದೆಹಲಿಯ ಸಾಕೇತ್‌ನಲ್ಲಿರುವ ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬಾಂಬ್​​​ ಬೆದರಿಕೆ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್​​ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಫೆ.13ಕ್ಕೆ ಬಾಂಬ್​​​ ಸ್ಫೋಟಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ