Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​

ದೆಹಲಿ ಹೈಕೋರ್ಟ್​​ಗೆ ಬಾಂಬ್​​ ಬೆದರಿಕೆ ಹಾಕಿದ್ದು, ಹೈಕೋರ್ಟ್​​​​​ ಮುಂದೆ ಪೊಲೀಸ್​​​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಈ ಹಿಂದೆ ದೆಹಲಿ ಶಾಲೆಯೊಂದಕ್ಕೆ ಇಂತಹ ಬಾಂಬ್​​​ ಬೆದರಿಕೆ ಹಾಕಲಾಗಿತ್ತು. ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​
ಸಾಂದರ್ಭಿಕ ಚಿತ್ರ
Follow us
|

Updated on: Feb 15, 2024 | 12:59 PM

ದೆಹಲಿ, ಫೆ.15: ದೆಹಲಿ ಹೈಕೋರ್ಟ್​​ಗೆ (Delhi High Court) ಬಾಂಬ್​​​ ಬೆದರಿಕೆ (bomb threat) ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ. ದೆಹಲಿಯ ನಗರದ ಒಳಗೆ ಬರುವ ಪ್ರತಿಜ್ಞೆ ಮಾಡಿರುವ ರೈತರನ್ನು ಪೊಲೀಸರು ತಡೆದಿದ್ದು, ದೊಡ್ಡ ಭದ್ರತೆಯನ್ನು ನೀಡಲಾಗಿದೆ. ಇದರ ಜತೆಗೆ ದೆಹಲಿಯ ಸಚಿವರು ಈ ಬೆದರಿಕೆ ಮೇಲ್​​​ ಬಂದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಹೇಳಿದೆ.

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಹೈಕೋರ್ಟ್ ಆವರಣವನ್ನು ಕೂಲಂಕುಷವಾಗಿ ಶೋಧಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಶಾಲೆಗೆ ಬಾಂಬ್​ ಬೆದರಿಕೆ ಕರೆ, ಮಕ್ಕಳ ಸ್ಥಳಾಂತರ

ದಕ್ಷಿಣ ದೆಹಲಿಯ ಶಾಲೆಯಲ್ಲಿ ಬಾಂಬ್ ಬೆದರಿಕೆ

ದೆಹಲಿಯ ಸಾಕೇತ್‌ನಲ್ಲಿರುವ ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬಾಂಬ್​​​ ಬೆದರಿಕೆ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್​​ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಫೆ.13ಕ್ಕೆ ಬಾಂಬ್​​​ ಸ್ಫೋಟಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ