AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​

ದೆಹಲಿ ಹೈಕೋರ್ಟ್​​ಗೆ ಬಾಂಬ್​​ ಬೆದರಿಕೆ ಹಾಕಿದ್ದು, ಹೈಕೋರ್ಟ್​​​​​ ಮುಂದೆ ಪೊಲೀಸ್​​​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಈ ಹಿಂದೆ ದೆಹಲಿ ಶಾಲೆಯೊಂದಕ್ಕೆ ಇಂತಹ ಬಾಂಬ್​​​ ಬೆದರಿಕೆ ಹಾಕಲಾಗಿತ್ತು. ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 15, 2024 | 12:59 PM

Share

ದೆಹಲಿ, ಫೆ.15: ದೆಹಲಿ ಹೈಕೋರ್ಟ್​​ಗೆ (Delhi High Court) ಬಾಂಬ್​​​ ಬೆದರಿಕೆ (bomb threat) ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ. ದೆಹಲಿಯ ನಗರದ ಒಳಗೆ ಬರುವ ಪ್ರತಿಜ್ಞೆ ಮಾಡಿರುವ ರೈತರನ್ನು ಪೊಲೀಸರು ತಡೆದಿದ್ದು, ದೊಡ್ಡ ಭದ್ರತೆಯನ್ನು ನೀಡಲಾಗಿದೆ. ಇದರ ಜತೆಗೆ ದೆಹಲಿಯ ಸಚಿವರು ಈ ಬೆದರಿಕೆ ಮೇಲ್​​​ ಬಂದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಹೇಳಿದೆ.

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಹೈಕೋರ್ಟ್ ಆವರಣವನ್ನು ಕೂಲಂಕುಷವಾಗಿ ಶೋಧಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಶಾಲೆಗೆ ಬಾಂಬ್​ ಬೆದರಿಕೆ ಕರೆ, ಮಕ್ಕಳ ಸ್ಥಳಾಂತರ

ದಕ್ಷಿಣ ದೆಹಲಿಯ ಶಾಲೆಯಲ್ಲಿ ಬಾಂಬ್ ಬೆದರಿಕೆ

ದೆಹಲಿಯ ಸಾಕೇತ್‌ನಲ್ಲಿರುವ ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬಾಂಬ್​​​ ಬೆದರಿಕೆ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್​​ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಫೆ.13ಕ್ಕೆ ಬಾಂಬ್​​​ ಸ್ಫೋಟಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ