AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​

ದೆಹಲಿ ಹೈಕೋರ್ಟ್​​ಗೆ ಬಾಂಬ್​​ ಬೆದರಿಕೆ ಹಾಕಿದ್ದು, ಹೈಕೋರ್ಟ್​​​​​ ಮುಂದೆ ಪೊಲೀಸ್​​​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಈ ಹಿಂದೆ ದೆಹಲಿ ಶಾಲೆಯೊಂದಕ್ಕೆ ಇಂತಹ ಬಾಂಬ್​​​ ಬೆದರಿಕೆ ಹಾಕಲಾಗಿತ್ತು. ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ, ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 15, 2024 | 12:59 PM

Share

ದೆಹಲಿ, ಫೆ.15: ದೆಹಲಿ ಹೈಕೋರ್ಟ್​​ಗೆ (Delhi High Court) ಬಾಂಬ್​​​ ಬೆದರಿಕೆ (bomb threat) ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ. ದೆಹಲಿಯ ನಗರದ ಒಳಗೆ ಬರುವ ಪ್ರತಿಜ್ಞೆ ಮಾಡಿರುವ ರೈತರನ್ನು ಪೊಲೀಸರು ತಡೆದಿದ್ದು, ದೊಡ್ಡ ಭದ್ರತೆಯನ್ನು ನೀಡಲಾಗಿದೆ. ಇದರ ಜತೆಗೆ ದೆಹಲಿಯ ಸಚಿವರು ಈ ಬೆದರಿಕೆ ಮೇಲ್​​​ ಬಂದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಹೇಳಿದೆ.

ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಹೈಕೋರ್ಟ್ ಆವರಣವನ್ನು ಕೂಲಂಕುಷವಾಗಿ ಶೋಧಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಶಾಲೆಗೆ ಬಾಂಬ್​ ಬೆದರಿಕೆ ಕರೆ, ಮಕ್ಕಳ ಸ್ಥಳಾಂತರ

ದಕ್ಷಿಣ ದೆಹಲಿಯ ಶಾಲೆಯಲ್ಲಿ ಬಾಂಬ್ ಬೆದರಿಕೆ

ದೆಹಲಿಯ ಸಾಕೇತ್‌ನಲ್ಲಿರುವ ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬಾಂಬ್​​​ ಬೆದರಿಕೆ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್​​ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಫೆ.13ಕ್ಕೆ ಬಾಂಬ್​​​ ಸ್ಫೋಟಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?