AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ

ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ಮಾತನಾಡಿದ ಅನಾಮಿಕ ವ್ಯಕ್ತಿ ಈ ರೀತಿಯ ಬೆದರಿಕೆಯೊಡ್ಡಿದ್ದು, ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್ ಮನೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕುಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಸ್ಫೋಟಕ ಇರಿಸಿರುವುದಾಗಿ ಹೇಳಿದ್ದಾನೆ.

ಅಮಿತಾಭ್​ ಬಚ್ಚನ್​ ಮನೆ ಹಾಗೂ ಮುಂಬೈನ 3 ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇರಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿದ ಅನಾಮಿಕ
ಅಮಿತಾಭ್ ಬಚ್ಚನ್
TV9 Web
| Edited By: |

Updated on:Aug 07, 2021 | 10:54 AM

Share

ಮುಂಬೈ: ಮುಂಬೈ ಪೊಲೀಸರಿಗೆ ನಿನ್ನೆ (ಆಗಸ್ಟ್ 06, ಶುಕ್ರವಾರ) ರಾತ್ರಿ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಆಗಂತುಕರು ತಿಳಿಸಿದ್ದಾರೆ. ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ಮಾತನಾಡಿದ ಅನಾಮಿಕ ವ್ಯಕ್ತಿ ಈ ರೀತಿಯ ಬೆದರಿಕೆಯೊಡ್ಡಿದ್ದು, ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್ ಮನೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕುಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಸ್ಫೋಟಕ ಇರಿಸಿರುವುದಾಗಿ ಹೇಳಿದ್ದಾನೆ.

ತಕ್ಷಣ ಎಚ್ಚೆತ್ತ ಮುಂಬೈ ಪೊಲೀಸರು ಕರೆಯನ್ನಾಧರಿಸಿ ಹುಡುಕಾಟ ನಡೆಸಿದರಾದರೂ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಮಟ್ಟದ ಅಧಿಕಾರಿಯೊಬ್ಬರು, ಬೆದರಿಕೆ ಕರೆ ಬಂದ ತಕ್ಷಣವೇ ರೈಲ್ವೇ ಪೊಲೀಸ್, ರೈಲ್ವೇ ರಕ್ಷಣಾ ಸಿಬ್ಬಂದಿ ಹಾಗೂ ಬಾಂಬ್​ ಪತ್ತೆ ಮತ್ತು ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಿದೆವು. ಶ್ವಾನದಳ ಹಾಗೂ ಸ್ಥಳೀಯ ಪೊಲೀಸರು ಕೂಡಾ ತಕ್ಷಣವೇ ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರು ಎಂದು ಹೇಳಿದ್ದಾರೆ.

ಯಾವ ಸ್ಥಳಗಳಲ್ಲೂ ಅನುಮಾನಸ್ಪದ ವಸ್ತು ಅಥವಾ ಸ್ಫೋಟಕ ಇಟ್ಟ ಕುರುಹು ಕಂಡುಬಂದಿಲ್ಲವಾದರೂ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

(Bomb threat call causes scare at 3 Mumbai railway stations and Amitabh Bachchan bungalow)

ಇದನ್ನೂ ಓದಿ: ಬಿಜೆಡಿ ಶಾಸಕಿಯ ಎರಡು ಮನೆಗಳ ಮೇಲೆ ಕಚ್ಚಾ ಬಾಂಬ್​ ದಾಳಿ; ನಾಲ್ವರಿಗೆ ಗಾಯ 

Naxals Attack: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಎಸ್​ಯುವಿ ಕಾರು ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

Published On - 9:39 am, Sat, 7 August 21

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ