AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ, ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ಕರೆ ಮಾಡಿದ ವ್ಯಕ್ತಿ ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದ್ದು, ಮುಂಬೈ ಬಿಕೆಸಿ ಕಚೇರಿಗೆ ಈ ಕರೆ ಬಂದಿತ್ತು. ಮುಂಬೈ ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ ಪುಣೆಯ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದಾನೆ.

ಪುಣೆ ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ, ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್
ಗೂಗಲ್ ಕಚೇರಿ
ರಶ್ಮಿ ಕಲ್ಲಕಟ್ಟ
|

Updated on: Feb 13, 2023 | 12:37 PM

Share

ಪುಣೆ: ಪುಣೆಯ ಗೂಗಲ್(Google) ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಕರೆ (Bomb threat) ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು(Mumbai Police) ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದ್ದು, ಮುಂಬೈ ಬಿಕೆಸಿ ಕಚೇರಿಗೆ ಈ ಕರೆ ಬಂದಿತ್ತು. ಮುಂಬೈ ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ ಪುಣೆಯ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಪನಯಂ ಶಿವಾನಂದ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಪುಣೆಯ ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11 ನೇ ಮಹಡಿಯಲ್ಲಿರುವ ಕಚೇರಿಗೆ ಭಾನುವಾರ ತಡರಾತ್ರಿ ಕಚೇರಿ ಆವರಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಬಂದಿದೆ ಎಂದು ಉಪ ಪೊಲೀಸ್ ಆಯುಕ್ತ (Zone V) ವಿಕ್ರಾಂತ್ ದೇಶಮುಖ್ ಹೇಳಿದ್ದಾರೆ.

ಬೆದರಿಕೆ ಕರೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್‌ನೊಂದಿಗೆ ಗೂಗಲ್‌ನ ಪುಣೆ ಕಚೇರಿಯನ್ನು ತಲುಪಿ ವ್ಯಾಪಕ ಶೋಧ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: Oommen Chandy: ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಅನಾರೋಗ್ಯ; ಬೆಂಗಳೂರಿನ ಆಸ್ಪತ್ರೆಗೆ ರವಾನೆ

“ಕರೆ ನಂತರ ಸುಳ್ಳು ಎಂದು ತಿಳಿದುಬಂದಿದೆ. ಕರೆ ಮಾಡಿದವರನ್ನು ಹೈದರಾಬಾದ್‌ನಿಂದ ಪತ್ತೆಹಚ್ಚಲಾಗಿದೆ ಮತ್ತು ಬಂಧಿಸಲಾಗಿದೆ. ಅವರು ಮದ್ಯದ ಅಮಲಿನಲ್ಲಿ ಈ ಕರೆ ಮಾಡಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಪನಯಂ ಶಿವಾನಂದ್  ಬೆದರಿಕೆ ಕರೆ ಮಾಡಲು ಪ್ರೇರೇಪಣೆ ಏನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ