AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ, ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ಕರೆ ಮಾಡಿದ ವ್ಯಕ್ತಿ ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದ್ದು, ಮುಂಬೈ ಬಿಕೆಸಿ ಕಚೇರಿಗೆ ಈ ಕರೆ ಬಂದಿತ್ತು. ಮುಂಬೈ ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ ಪುಣೆಯ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದಾನೆ.

ಪುಣೆ ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ, ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್
ಗೂಗಲ್ ಕಚೇರಿ
ರಶ್ಮಿ ಕಲ್ಲಕಟ್ಟ
|

Updated on: Feb 13, 2023 | 12:37 PM

Share

ಪುಣೆ: ಪುಣೆಯ ಗೂಗಲ್(Google) ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಕರೆ (Bomb threat) ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು(Mumbai Police) ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದ್ದು, ಮುಂಬೈ ಬಿಕೆಸಿ ಕಚೇರಿಗೆ ಈ ಕರೆ ಬಂದಿತ್ತು. ಮುಂಬೈ ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ ಪುಣೆಯ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಪನಯಂ ಶಿವಾನಂದ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಪುಣೆಯ ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11 ನೇ ಮಹಡಿಯಲ್ಲಿರುವ ಕಚೇರಿಗೆ ಭಾನುವಾರ ತಡರಾತ್ರಿ ಕಚೇರಿ ಆವರಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಬಂದಿದೆ ಎಂದು ಉಪ ಪೊಲೀಸ್ ಆಯುಕ್ತ (Zone V) ವಿಕ್ರಾಂತ್ ದೇಶಮುಖ್ ಹೇಳಿದ್ದಾರೆ.

ಬೆದರಿಕೆ ಕರೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್‌ನೊಂದಿಗೆ ಗೂಗಲ್‌ನ ಪುಣೆ ಕಚೇರಿಯನ್ನು ತಲುಪಿ ವ್ಯಾಪಕ ಶೋಧ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: Oommen Chandy: ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಅನಾರೋಗ್ಯ; ಬೆಂಗಳೂರಿನ ಆಸ್ಪತ್ರೆಗೆ ರವಾನೆ

“ಕರೆ ನಂತರ ಸುಳ್ಳು ಎಂದು ತಿಳಿದುಬಂದಿದೆ. ಕರೆ ಮಾಡಿದವರನ್ನು ಹೈದರಾಬಾದ್‌ನಿಂದ ಪತ್ತೆಹಚ್ಚಲಾಗಿದೆ ಮತ್ತು ಬಂಧಿಸಲಾಗಿದೆ. ಅವರು ಮದ್ಯದ ಅಮಲಿನಲ್ಲಿ ಈ ಕರೆ ಮಾಡಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಪನಯಂ ಶಿವಾನಂದ್  ಬೆದರಿಕೆ ಕರೆ ಮಾಡಲು ಪ್ರೇರೇಪಣೆ ಏನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ