AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಲೇಡಿ ಶ್ರೀರಾಮ್, ವೆಂಕಟೇಶ್ವರ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ

ಬುಧವಾರ ಕೇಂದ್ರ ಗೃಹ ಸಚಿವಾಲಯದ ಕಚೇರಿಗೆ ಹುಸಿ ಬೆದರಿಕೆ ಬಂದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಈ ಹಿಂದೆ, ದೆಹಲಿ-ಎನ್‌ಸಿಆರ್ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು. ಮೊನ್ನೆ ಗುರುವಾರ, ಕರ್ನಾಟಕದ ಬೆಂಗಳೂರಿನ ಪಂಚತಾರಾ ಹೋಟೆಲ್ ಸೇರಿದಂತೆ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿತ್ತು

ದೆಹಲಿಯ ಲೇಡಿ ಶ್ರೀರಾಮ್, ವೆಂಕಟೇಶ್ವರ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ
ದೆಹಲಿಯ ಲೇಡಿ ಶ್ರೀರಾಮ್ ಕಾಲೇಜು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 23, 2024 | 7:14 PM

Share

ದೆಹಲಿ ಮೇ 23: ಕಳೆದ ಕೆಲವು ದಿನಗಳಿಂದ ಬಾಂಬ್ ಬೆದರಿಕೆ ಕರೆ (Bomb threat calls) ಪ್ರಕರಣಗಳು ವರದಿ ಆಗುತ್ತಿವೆ. ಇದೀಗ ದೆಹಲಿಯ ಲೇಡಿ ಶ್ರೀ ರಾಮ್ ಕಾಲೇಜು (Lady Shri Ram College) ಮತ್ತು ದೆಹಲಿ ವಿಶ್ವವಿದ್ಯಾಲಯದ ಶ್ರೀ ವೆಂಕಟೇಶ್ವರ ಕಾಲೇಜ್‌ಗೆ(Sri Venkateswara College) ಗುರುವಾರ ಬಾಂಬ್ ಬೆದರಿಕೆಯ ಕುರಿತು ಕರೆಗಳು ಬಂದಿದ್ದು, ಅಗ್ನಿಶಾಮಕ ಟೆಂಡರ್‌ಗಳು ಮತ್ತು ದೆಹಲಿ ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಬುಧವಾರ ಕೇಂದ್ರ ಗೃಹ ಸಚಿವಾಲಯದ ಕಚೇರಿಗೆ ಹುಸಿ ಬೆದರಿಕೆ ಬಂದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಈ ಹಿಂದೆ, ದೆಹಲಿ-ಎನ್‌ಸಿಆರ್ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು.

ಮೊನ್ನೆ ಗುರುವಾರ, ಕರ್ನಾಟಕದ ಬೆಂಗಳೂರಿನ ಪಂಚತಾರಾ ಹೋಟೆಲ್ ಸೇರಿದಂತೆ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿತ್ತು

ಎಪ್ರಿಲ್ 30 ರಂದು ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬೆದರಿಕೆ ಬಂದ ನಂತರ ಮೇ 1 ರಂದು 150 ಶಾಲೆಗಳಿಗೆ ರಷ್ಯಾ ಮೂಲದ ಮೇಲಿಂಗ್ ಸೇವಾ ಕಂಪನಿಯಿಂದ ಶಾಲೆಗಳಿಗೆ ಬೆದರಿಕೆಗಳನ್ನು ನೀಡಲಾಯಿತು. ಇಪ್ಪತ್ತು ಆಸ್ಪತ್ರೆಗಳು, IGI ವಿಮಾನ ನಿಲ್ದಾಣ ಮತ್ತು ದೆಹಲಿಯ ಉತ್ತರ ರೈಲ್ವೆಯ CPRO ಕಚೇರಿಗೆ ಮೇ 12 ರಂದು ಸೈಪ್ರಸ್ ಮೂಲದ ಮೇಲಿಂಗ್ ಸೇವಾ ಕಂಪನಿಯಿಂದ ಇಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದವು.

ಮೇ 14 ರಂದು ಅದೇ ಸೈಪ್ರಸ್ ಮೂಲದ ಮೇಲಿಂಗ್ ಸೇವಾ ಕಂಪನಿಯಿಂದ ದೆಹಲಿಯ ಏಳು ಆಸ್ಪತ್ರೆಗಳು ಮತ್ತು ತಿಹಾರ್ ಜೈಲಿಗೆ ಬಾಂಬ್ ಬೆದರಿಕೆಗಳು ಬಂದವು. ಗೃಹ ಸಚಿವಾಲಯದ ಕಚೇರಿಯ ಹಿರಿಯ ಅಧಿಕಾರಿಯೊಬ್ಬರಿಗೆ ಬೆದರಿಕೆ ಇಮೇಲ್ ಬಂದಿದ್ದು “ಬಾಂಬ್ ಹಾಕಿ ಕಟ್ಟಡವನ್ನು ಸ್ಫೋಟಿಸಲಾಗುವುದು ಎಂದು ಅದರಲ್ಲಿ ಬರೆದಿತ್ತು.

ಈ ತಿಂಗಳ ಆರಂಭದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಸುಮಾರು 150 ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ನಿಂದ ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಮೇ 21 ರಂದು ಹೇಳಿದ್ದರು.

ದೆಹಲಿ-ಎನ್‌ಸಿಆರ್‌ನಾದ್ಯಂತ ಭೀತಿಗೆ ಕಾರಣವಾದ ಬಾಂಬ್ ಬೆದರಿಕೆ ಕರೆಯ ಹಿಂದಿನ ಪಿತೂರಿ ಮತ್ತು ಉದ್ದೇಶವನ್ನು ಬಿಚ್ಚಿಡಲು ಪೊಲೀಸರು ಇಮೇಲ್‌ಗಳನ್ನು ಕಳುಹಿಸಲು ಬಳಸಿದ ಐಪಿ ವಿಳಾಸ, ಮೇಲ್ ಕಳುಹಿಸುವವರು ಮತ್ತು ಮೇಲ್‌ನ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.. ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ಭಯೋತ್ಪಾದಕ ಗುಂಪು ರೂಪಿಸಿದ “ಪಿತೂರಿ” ಎಂಬ ಶಂಕೆಯನ್ನು  ಪ್ರಾಥಮಿಕ ತನಿಖೆ ನಡೆಸಿದ ಅಧಿಕಾರಿಗಳು ಹೇಳಿದ್ದು, ಬೆದರಿಕೆ ಮೇಲ್ ಅನ್ನು ಐಸಿಸ್ ಮಾಡ್ಯೂಲ್ ಕಳುಹಿಸಿರಬಹುದು ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿನಾರ್ತ್ ಬ್ಲಾಕ್‌ನಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್

ಏಪ್ರಿಲ್‌ನಲ್ಲಿ, ಖಾಸಗಿ ಶಾಲೆಗಳಲ್ಲಿನ  ಬಾಂಬ್ ಬೆದರಿಕೆ ಕರೆ ಘಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರದಿಂದ ವಿವರವಾದ ಸ್ಥಿತಿ ವರದಿಯನ್ನು ಹೈಕೋರ್ಟ್ ಕೋರಿತ್ತು.

ಮೇ 17 ರಂದು, ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್‌ಗೆ ಇತ್ತೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ನಕಲಿ ಬಾಂಬ್ ಬೆದರಿಕೆಗಳ ಬಗ್ಗೆ ಸ್ಥಿತಿ ವರದಿಯನ್ನು ಸಲ್ಲಿಸಿದರು. ಐದು ಬಾಂಬ್ ನಿಷ್ಕ್ರಿಯ ದಳಗಳನ್ನು ನಿಯೋಜಿಸಲು ಮತ್ತು ಪ್ರತಿ ಜಿಲ್ಲೆ, ಐಜಿಐ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಮೆಟ್ರೋ ಪ್ರದೇಶಗಳಲ್ಲಿ 18 ಬಾಂಬ್ ಪತ್ತೆ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Thu, 23 May 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ