AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ರಾಮ್​ಲಾಲ್​ ಆನಂದ್ ಕಾಲೇಜಿಗೆ ಬಾಂಬ್ ಬೆದರಿಕೆ

ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿಗೆ ಮಾರ್ಚ್ 7 ರಂದು ಬಾಂಬ್ ಬೆದರಿಕೆ ಕರೆ ಬಂದಿದೆ. ನೈಋತ್ಯ ಡಿಸಿಪಿ ರೋಹಿತ್ ಮೀನಾ ಅವರ ಪ್ರಕಾರ, ಸುಮಾರು 9:34 ಗಂಟೆಗೆ ಬೆದರಿಕೆ ಕರೆ ಬಂದಿದೆ. ಹುಡುಕಾಟ ಮತ್ತು ತಪಾಸಣೆ ನಡೆಸಲಾಗುತ್ತಿದೆ, ಆದಾಗ್ಯೂ, ಎಎನ್‌ಐ ವರದಿ ಮಾಡಿದಂತೆ ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಅವರು ಹೇಳಿದರು.

Bomb Threat: ದೆಹಲಿಯ ರಾಮ್​ಲಾಲ್​ ಆನಂದ್ ಕಾಲೇಜಿಗೆ ಬಾಂಬ್ ಬೆದರಿಕೆ
ಕಾಲೇಜುImage Credit source: India TV
ನಯನಾ ರಾಜೀವ್
|

Updated on: Mar 07, 2024 | 1:50 PM

Share

ದೆಹಲಿ ವಿಶ್ವವಿದ್ಯಾಲಯದ ರಾಮ್​ಲಾಲ್ ಆನಂದ್​ ಕಾಲೇಜಿಗೆ ಬಾಂಬ್ ಬೆದರಿಕೆ(Bomb Threat) ಕರೆ ಬಂದಿದೆ. ಬೆದರಿಕೆ ಕರೆ ಬಂದ ತಕ್ಷಣ ಈ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿ ಇಡೀ ಕಾಲೇಜಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ದಕ್ಷಿಣ ದೆಹಲಿಯ ರಾಮ್ ಲಾಲ್ ಆನಂದ್ ಕಾಲೇಜಿನ ಉದ್ಯೋಗಿಯೊಬ್ಬರಿಂದ ಬೆಳಗ್ಗೆ 9.34 ರ ಸುಮಾರಿಗೆ ವಾಟ್ಸಾಪ್‌ನಲ್ಲಿ ಕರೆ ಬಂದಿದ್ದು, ಅದರಲ್ಲಿ ಕಾಲೇಜಿಗೆ ಬಾಂಬ್ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

ಬೆದರಿಕೆ ಬಂದ ನಂತರ ಕಾಲೇಜಿನಲ್ಲಿ ಕೋಲಾಹಲ ಉಂಟಾಯಿತು. ಈ ಬಗ್ಗೆ ಪ್ರಾಂಶುಪಾಲರು ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಬಳಿಕ ವಿದ್ಯಾರ್ಥಿಗಳನ್ನು ತರಾತುರಿಯಲ್ಲಿ ಮನೆಗೆ ಕಳುಹಿಸಿ ಇಡೀ ಕಾಲೇಜು ಆವರಣವನ್ನು ತೆರವು ಮಾಡಲಾಗಿದೆ. ಇದೇ ವೇಳೆ ಪೊಲೀಸರಿಗೂ ವಿಷಯ ತಿಳಿಸಿದ್ದು, ಬಳಿಕ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಕಾಲೇಜಿಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

Bomb Threat: ತಮಿಳುನಾಡಿನ 2 ಶಾಲೆಗಳಿಗೆ ಬಾಂಬ್ ಬೆದರಿಕೆ ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat) ಬಂದಿದ್ದು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಪೋಷಕರಲ್ಲಿ ಭೀತಿ ಮೂಡಿಸಿದೆ. ಶಾಲೆಗಳನ್ನು ಕೊಯಮತ್ತೂರಿನ PSBB ಮಿಲೇನಿಯಮ್ ಶಾಲೆ ಮತ್ತು ಕಾಂಚೀಪುರಂ ಜಿಲ್ಲೆಯ ಖಾಸಗಿ ಶಾಲೆ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಬಾಂಬ್ ಬೆದರಿಕೆ ಕರೆಗಳು ಬಂದರೆ ಭಯ ಪಡಬೇಡಿ, ಈ ಕೆಲಸವನ್ನು ಮೊದಲು ಮಾಡಿ

ಪಿಎಸ್‌ಬಿಬಿ ಮಿಲೇನಿಯಂ ಶಾಲೆಗೆ ಭಾನುವಾರ ರಾತ್ರಿ ಇಮೇಲ್ ಬಂದಿದ್ದರೆ, ಸೋಮವಾರ ಬೆಳಗ್ಗೆ ಶಾಲೆಗೆ ಕರೆ ಮಾಡಲಾಗಿದೆ. ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ನಂತರ ಸ್ಥಳದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲದ ಕಾರಣ ಶಿಕ್ಷಕರು, ಪೋಷಕರು, ಮಕ್ಕಳು ನಿಟ್ಟುಸಿರುಬಿಟ್ಟಿದ್ದಾರೆ.

ಮತ್ತೊಂದು ಘಟನೆ ಚೆನ್ನೈನ 5 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಶಿಕ್ಷಕರು ಚೆನ್ನೈನ 5 ಖ್ಯಾತ ಖಾಸಗಿ ಶಾಲೆ(Private School)ಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ(Bomb Threat)ಯ ಸಂದೇಶ ರವಾನಿಸಿದ್ದು ಆತಂಕ ಸೃಷ್ಟಿಸಿದೆ. ಗೋಪಾಲಪುರಂ, ಜೆಜೆ ನಗರ, ಆರ್‌ಎ ಪುರಂ, ಅಣ್ಣಾನಗರ, ಪರಿಮಳ ಶಾಲೆಗಳಿಗೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸ್ನಿಫರ್ ಡಾಗ್‌ಗಳ ಸಹಾಯದಿಂದ ಪರೀಕ್ಷೆ ನಡೆಸುತ್ತಿದೆ.

ಶಾಲಾ ಆಡಳಿತ ಮಂಡಳಿಯು ಸಂದೇಶ ಕಳುಹಿಸಿದ ನಂತರ ಪೋಷಕರು ಬಂದು ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಈ ನಡುವೆ ಯಾರೂ ಭಯಪಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಕಳುಹಿಸಿದವರ ಪತ್ತೆಗೆ ಕಾರ್ಯಾಚರಣೆ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!