AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ವಿಮಾನ ನಿಲ್ದಾಣ, ಶಾಲೆಗಳು ಹಾಗೂ ಆಸ್ಪತ್ರೆಗಳಿಗೆ ಬೆದರಿಕೆ ಕರೆ ನಿರಂತರವಾಗಿ ಬರುತ್ತಿವೆ.

Bomb Threat: ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ
ಪೊಲೀಸ್​
ನಯನಾ ರಾಜೀವ್
|

Updated on: May 14, 2024 | 1:01 PM

Share

ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ(Bomb Threat)ಯ ಇ-ಮೇಲ್​ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

ಏತನ್ಮಧ್ಯೆ, ಬೆದರಿಕೆ ಮೇಲ್‌ನ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿಯ ನಾಲ್ಕು ಆಸ್ಪತ್ರೆಗಳಿಗೆ ಪೊಲೀಸ್ ತಂಡಗಳನ್ನು ರವಾನಿಸಲಾಗಿದೆ.

ಭಾನುವಾರ ದೆಹಲಿಯ 10 ಆಸ್ಪತ್ರೆಗಳು ಮತ್ತು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಪೊಲೀಸರು ಬೆದರಿಕೆಯನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಮೇ 1 ರಂದು, ದೆಹಲಿ-ಎನ್‌ಸಿಆರ್‌ನ 150 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು.

ಮತ್ತಷ್ಟು ಓದಿ: Bomb Threat: ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ರಷ್ಯಾದ ಇ-ಮೇಲ್ ಸೇವೆಯನ್ನು ಬಳಸಿಕೊಂಡು ಶಾಲೆಗಳಿಗೆ ಬೆದರಿಕೆಗಳನ್ನು ಕಳುಹಿಸಲಾಗಿದೆ. ದೆಹಲಿ ಪಬ್ಲಿಕ್ ಸ್ಕೂಲ್‌ನ (ಡಿಪಿಎಸ್) ದ್ವಾರಕಾ ಮತ್ತು ವಸಂತ್ ಕುಂಜ್ ಘಟಕಗಳು, ಪೂರ್ವ ಮಯೂರ್ ವಿಹಾರ್‌ನಲ್ಲಿರುವ ಮದರ್ ಮೇರಿಸ್ ಶಾಲೆ, ಸಂಸ್ಕೃತಿ ಶಾಲೆ, ಪುಷ್ಪ್ ವಿಹಾರ್‌ನ ಅಮಿಟಿ ಶಾಲೆ ಮತ್ತು ನೈಋತ್ಯ ದೆಹಲಿಯ ಡಿಎವಿ ಶಾಲೆ ಸೇರಿದಂತೆ 100 ಶಾಲೆಗಳಿಗೆ ಬೆದರಿಕೆ ಬಂದಿತ್ತು. ನೋಯ್ಡಾದಲ್ಲಿ, ಡಿಪಿಎಸ್ ಮತ್ತು ಅಪೆಜಾಯ್ ಸ್ಕೂಲ್‌ಗೂ ಇದೇ ರೀತಿಯ ಬೆದರಿಕೆಗಳು ಬಂದಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ