AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Bomb Threat: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಂಪೂರ್ಣ ಭದ್ರತಾ ತಪಾಸಣೆ ಮತ್ತು ಸಂಪೂರ್ಣ ತನಿಖೆ ನಡೆಸಲಾಯಿತು.ಆವರಣವನ್ನು ಪರಿಶೀಲಿಸಲು ಸ್ನಿಫರ್ ಶ್ವಾನಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳನ್ನು ನಿಯೋಜಿಸಲಾಗಿತ್ತು.ವಿಮಾನ ನಿಲ್ದಾಣದೊಳಗೆ ಬಾಂಬ್ ಇರಿಸಲಾಗಿದೆ ಎಂದು ಮಧುರೈ ವಿಮಾನ ನಿಲ್ದಾಣ ನಿರ್ದೇಶಕರಿಗೆ ಇಮೇಲ್ ಬಂದಿತ್ತು.

ತಮಿಳುನಾಡು: ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಏರ್​ಪೋರ್ಟ್​
ನಯನಾ ರಾಜೀವ್
|

Updated on: Oct 09, 2025 | 11:24 AM

Share

ಮಧುರೈ, ಅಕ್ಟೋಬರ್ 09: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ(Bomb Threat) ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಂಪೂರ್ಣ ಭದ್ರತಾ ತಪಾಸಣೆ ನಡೆಸಲಾಯಿತು. ಆವರಣವನ್ನು ಪರಿಶೀಲಿಸಲು ಸ್ನಿಫರ್ ಶ್ವಾನಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳನ್ನು ನಿಯೋಜಿಸಲಾಗಿತ್ತು.ವಿಮಾನ ನಿಲ್ದಾಣದೊಳಗೆ ಬಾಂಬ್ ಇರಿಸಲಾಗಿದೆ ಎಂದು ಮಧುರೈ ವಿಮಾನ ನಿಲ್ದಾಣ ನಿರ್ದೇಶಕರಿಗೆ ಇಮೇಲ್ ಬಂದಿತ್ತು.

ವಿಮಾನ ನಿಲ್ದಾಣಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಒಳಗೆ ಬಿಡುವ ಮೊದಲು ಬಾಂಬ್ ನಿಷ್ಕ್ರಿಯ ದಳವು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಿತು. ಸ್ನಿಫರ್ ನಾಯಿಗಳನ್ನು ನಿಯೋಜಿಸಲಾಗಿತ್ತು. ಇದಕ್ಕೂ ಮೊದಲು, ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (RGIA) ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಬಂದಿತ್ತು.

ಬೆಳಗ್ಗೆ 6 ಗಂಟೆ ಸುಮಾರಿಗೆ ಬಂದ ಅನಾಮಧೇಯ ಇಮೇಲ್‌ನಲ್ಲಿ, ವಿಮಾನ ನಿಲ್ದಾಣದಲ್ಲಿ ಮತ್ತು ಹೈದರಾಬಾದ್‌ನಾದ್ಯಂತ ಹಲವಾರು ಶಾಲೆಗಳಲ್ಲಿ ಸ್ಫೋಟಕಗಳನ್ನು ಇಡಲಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭದ್ರತಾ ತಂಡಗಳು ವಿಮಾನ ನಿಲ್ದಾಣದ ಆವರಣದಾದ್ಯಂತ ತಪಾಸಣೆಗಳನ್ನು ನಡೆಸಿದವು.

ಮತ್ತಷ್ಟು ಓದಿ: ನಟ, ರಾಜಕಾರಣಿ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

ಸಂಪೂರ್ಣ ಶೋಧದ ನಂತರ, ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದರು ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆದವು.

ಔಪಚಾರಿಕ ದೂರಿನ ಮೇರೆಗೆ ಕಾರ್ಯನಿರ್ವಹಿಸಿದ ಆರ್‌ಜಿಐಎ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆದರಿಕೆ ಇಮೇಲ್‌ನ ಮೂಲವನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ತನಿಖೆ ಆರಂಭಿಸಿದರು. ನಟ- ರಾಜಕಾರಣಿ ದಳಪತಿ ವಿಜಯ್ ಮನೆಗೂ ಕೂಡ ಬಾಂಬ್ ಬೆದರಿಕೆ ಕರೆ ಬಂದಿತ್ತು, ಇದೀಗ ಅವರ ಮನೆಯ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!