AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸರ್ಕಾರದ ಸಚಿವಾಲಯಕ್ಕೆ ಬಾಂಬ್​​​ ಬೆದರಿಕೆ

ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ.

ಕೇರಳ ಸರ್ಕಾರದ ಸಚಿವಾಲಯಕ್ಕೆ ಬಾಂಬ್​​​ ಬೆದರಿಕೆ
ಅಕ್ಷಯ್​ ಪಲ್ಲಮಜಲು​​
|

Updated on:Nov 09, 2023 | 2:49 PM

Share

ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ಹೇಳಿದ್ದಾರೆ. ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಾಂಬ್​​​ ಬೆದರಿಕೆ ಬಂದ ಕೂಡಲೇ ಎಲೆಕ್ಟ್ರಾನಿಕ್ ಡಿಟೆಕ್ಟರ್‌ಗಳು ಮತ್ತು ಸ್ನಿಫರ್ ಡಾಗ್‌ಗಳಿಂದ ಸಚಿವಾಲಯದ ಕಟ್ಟಡವನ್ನು ಪರಿಶೀಲನೆ ಮಾಡಲಾಗಿದೆ. ಸಚಿವಾಲಯದ ಹೊರಗೆ ನಿಲ್ಲಿಸಿರುವ ವಾಹನಗಳನ್ನು ಕೂಡ ಪರಿಶೀಲನೆ ಮಾಡಲಾಗಿದೆ.

ಇನ್ನು ಭದ್ರತಾ ಸಿಬ್ಬಂದಿಗಳು ಸಚಿವಾಲಯದ ಸುತ್ತ ಬಿಗಿ ಭದ್ರತೆಯನ್ನು ನೀಡಿದ್ದಾರೆ. ಇನ್ನು ಸಾರ್ವಜನಿಕರಿಗೂ ನಿರ್ಬಂಧವನ್ನು ಹೇರಳಲಾಗಿದೆ. ಇದರ ಜತೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆಳಿಗ್ಗೆ 11.10ರ ವೇಳೆ ಪೊಲೀಸ್ ನಿಯಂತ್ರಣ ಕೊಠಡಿ ಬೆದರಿಕೆ ಕರೆ ಬಂದಿದೆ. ಪೊಲೀಸರು ತಿಳಿಸಿರುವಂತೆ ಪ್ರಾಥಮಿಕವಾಗಿ ಇದನ್ನು ನಂಬಲು ಸಾಧ್ಯವಿಲ್ಲ. ಇಂತಹ ಅನೇಕ ಕಾಲ್ ಬರುತ್ತದೆ. ಅದರೂ ಸಚಿವಾಲಯಕ್ಕೆ ಬಾಂಬ್​​ ಬೆದರಿಕೆ ಬಂದಾಗ ಅದನ್ನು ನಿಭಾಯಿಸುವುದು ಅಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಕಳಮಶ್ಶೇರಿ ಬಾಂಬ್ ಸ್ಫೋಟದ ಆರೋಪಿ ಅಸಾಧಾರಣ ಬುದ್ಧಿವಂತ: ಪೊಲೀಸ್

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಹತ್ಯೆ ಮಾಡುವುದಾಗಿ ಕರೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರ್ನಾಕುಲಂನಲ್ಲಿ 7 ನೇ ತರಗತಿ ವಿದ್ಯಾರ್ಥಿಯಿಂದ ಈ ಕರೆ ಬಂದಿದೆ. ಇದನ್ನು ವಿದ್ಯಾರ್ಥಿಯ ಕುಟುಂಬದವರು ಚೇಷ್ಠೆಗಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಮ್ಯೂಸಿಯಂ ಪೊಲೀಸರು ಕೇರಳ ಪೊಲೀಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:28 pm, Thu, 9 November 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್