AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್ ಶಾಲೆಗಳಿಗೆ ಬೆಂಬ್ ಬೆದರಿಕೆ

ದೆಹಲಿಯ ಹಲವು ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವಕೀಲರು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸಿ ಪೊಲೀಸರು ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿದರು. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ.

ದೆಹಲಿಯ ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್ ಶಾಲೆಗಳಿಗೆ ಬೆಂಬ್ ಬೆದರಿಕೆ
ನ್ಯಾಯಾಲಯ
ನಯನಾ ರಾಜೀವ್
|

Updated on:Nov 18, 2025 | 12:25 PM

Share

ನವದೆಹಲಿ, ನವೆಂಬರ್ 18: ದೆಹಲಿಯ ಹಲವು ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್​ ಬೆದರಿಕೆ(Bomb Threat) ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವಕೀಲರು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸಿ ಪೊಲೀಸರು ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿದರು. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ.

ಬಾಂಬ್ ನಿಷ್ಕ್ರಿಯ ದಳದ ವ್ಯಾನ್‌ಗಳು, ಶ್ವಾನ ದಳಗಳು ಮತ್ತು ವಿಧ್ವಂಸಕ ವಿರೋಧಿ ಘಟಕಗಳು ಸ್ಥಳಗಳಿಗೆ ತಲುಪುತ್ತಿದ್ದಂತೆ ಪೊಲೀಸರು ಜನರನ್ನು ಸ್ಥಳಾಂತರಿಸುವ ಕಾರ್ಯ ಆರಂಭಿಸಿದರು. ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಿಬ್ಬಂದಿಯನ್ನು ಹೆಚ್ಚಿನ ಎಚ್ಚರಿಕೆಯಲ್ಲಿ ಇರಿಸಲಾಗಿದೆ.

ನಗರದ ಎರಡು ಸಿಆರ್‌ಪಿಎಫ್ ಶಾಲೆಗಳಿಗೂ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ದ್ವಾರಕಾದ ಸಿಆರ್‌ಪಿಎಫ್ ಶಾಲೆ ಮತ್ತು ಪ್ರಶಾಂತ್ ವಿಹಾರ್‌ನಲ್ಲಿರುವ ಮತ್ತೊಂದು ಸಿಆರ್‌ಪಿಎಫ್ ಶಾಲೆಗೆ ಎಚ್ಚರಿಕೆ ನೀಡಲಾಗಿದ್ದು, ಪೊಲೀಸ್ ತಂಡಗಳು ತ್ವರಿತ ಕ್ರಮ ಕೈಗೊಂಡು ಕ್ಯಾಂಪಸ್‌ನಲ್ಲಿ ಪರಿಶೀಲನೆ ನಡೆಸಿವೆ.

ಮತ್ತಷ್ಟು ಓದಿ: ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ

ನ್ಯಾಯಾಲಯಗಳು ಮತ್ತು ಶಾಲೆಗಳ ಹೊರಗೆ ಹೆಚ್ಚುವರಿ ಪೊಲೀಸ್ ನಿಯೋಜನೆಯನ್ನು ಮಾಡಲಾಗಿದೆ. ಕರೆಗಳು ಒಂದೇ ಮೂಲದಿಂದ ಬಂದಿವೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಿಖೆಯನ್ನು ಮುಂದುವರೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಫೋಟದಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ಮತ್ತೊಬ್ಬ ಪ್ರಮುಖ ಸಹಚರನನ್ನು ಬಂಧಿಸಿದೆ.

ನವೆಂಬರ್ 10ರಂದು ದೆಹಲಿಯಲ್ಲಿ ಕಾರು ಸ್ಫೋಟ ನಡೆದಿತ್ತು. ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದರು. ಬಾಂಬ್ ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲು ಮಾಡಲು ಎನ್ಐಎ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಹಲವಾರು ತಂಡಗಳು ಹಲವಾರು ಸುಳಿವುಗಳನ್ನು ಅನುಸರಿಸುತ್ತಿವೆ. ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಗುರುತಿಸಲು ದೇಶಾದ್ಯಂತ ಶೋಧ ನಡೆಸುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Tue, 18 November 25

Follow Us
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ
ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ
‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ
‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ