AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಕೊಂದು ಆಕೆಯ ಅಂಗಾಂಗಗಳನ್ನು ಬೇಯಿಸಿದ್ದ ವ್ಯಕ್ತಿ, ಮರಣದಂಡನೆ ಶಿಕ್ಷೆಯೇ ಸರಿ ಎಂದ ಬಾಂಬೆ ಹೈಕೋರ್ಟ್​

ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಭಾಗಗಳನ್ನು ಬೇಯಿಸಿದ್ದ ಮಗನಿಗೆ ಸುಧಾರಣೆಗೆ ಅವಕಾಶವೇ ಇಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್​ ಮರಣದಂಡನೆ ತೀರ್ಪು ಎತ್ತಿಹಿಡಿದಿದೆ. 2017ರಲ್ಲಿ ಕೊಲ್ಹಾಪುರದ ವ್ಯಕ್ತಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದ ಇಷ್ಟೇ ಅಲ್ಲದೆ ಆಕೆಯ ದೇಹದ ಭಾಗಗಳನ್ನು ಬೇಯಿಸಿದ್ದ.

ತಾಯಿ ಕೊಂದು ಆಕೆಯ ಅಂಗಾಂಗಗಳನ್ನು ಬೇಯಿಸಿದ್ದ ವ್ಯಕ್ತಿ, ಮರಣದಂಡನೆ ಶಿಕ್ಷೆಯೇ ಸರಿ ಎಂದ ಬಾಂಬೆ ಹೈಕೋರ್ಟ್​
ನ್ಯಾಯಾಲಯ
ನಯನಾ ರಾಜೀವ್
|

Updated on: Oct 02, 2024 | 8:43 AM

Share

ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಭಾಗಗಳನ್ನು ಬೇಯಿಸಿದ್ದ ಮಗನಿಗೆ ಸುಧಾರಣೆಗೆ ಅವಕಾಶವೇ ಇಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್​ ಮರಣದಂಡನೆ ತೀರ್ಪು ಎತ್ತಿಹಿಡಿದಿದೆ. 2017ರಲ್ಲಿ ಕೊಲ್ಹಾಪುರದ ವ್ಯಕ್ತಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದ ಇಷ್ಟೇ ಅಲ್ಲದೆ ಆಕೆಯ ದೇಹದ ಭಾಗಗಳನ್ನು ಬೇಯಿಸಿದ್ದ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು ಆತನನ್ನು ನರಭಕ್ಷನಿಗೆ ಹೋಲಿಸಿದ್ದು, ಸುಧಾರಣೆಗೆ ಯಾವುದೇ ಅವಕಾಶವಿಲ್ಲ ಮರಣದಂಡನೆ ಶಿಕ್ಷೆಯೇ ಸರಿ ಎಂದು ಹೈಕೋರ್ಟ್​ ಹೇಳಿದೆ.

2021 ರಲ್ಲಿ ಕೊಲ್ಹಾಪುರ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾದ ಕುಚ್ಕೊರವಿ, ನ್ಯಾಯಾಲಯವು ತೀರ್ಪನ್ನು ದೃಢಪಡಿಸಿದ್ದರಿಂದ ಯರವಾಡ ಜೈಲಿನಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ನ್ಯಾಯಮೂರ್ತಿ ಚವಾಣ್ ಮಾತನಾಡಿ, ಇದು ಅಪರೂಪದ ಪ್ರಕರಣವಾಗಿದೆ, ಏಕೆಂದರೆ ಆತ ಸ್ವಂತ ತಾಯಿಯನ್ನು ಕೊಲೆ ಮಾಡಿ, ದೇಹವನ್ನು ಕತ್ತರಿಸಿ, ಹೃದಯ ತೆಗೆದು ಅದನ್ನು ಕೂಡ ಬೇಯಿಸಿದ್ದ ಎಂದಿದ್ದಾರೆ.

ಈತನಿಗೆ ಮರಣದಂಡನೆ ವಿಧಿಸಿದರಷ್ಟೇ ಬೇರೆಯವರಿಗೆ ಈ ರೀತಿ ತಪ್ಪು ಮಾಡುವ ಧೈರ್ಯ ಬರದು. ಕುಚ್ಕೊರವಿ ತನ್ನ 63 ವರ್ಷದ ತಾಯಿ ಯಲ್ಲಮ್ಮ ರಾಮಾ ಕುಚ್ಕೊರವಿಯನ್ನು ಕೊಂದರು ಮತ್ತು ಆಕೆಯ ದೇಹವನ್ನು ವಿರೂಪಗೊಳಿಸಿದರು ಮತ್ತು ಅವರ ಕೆಲವು ಅಂಗಗಳನ್ನು ಬೇಯಿಸಲು ಪ್ರಯತ್ನಿಸಿದ್ದ.

ಮತ್ತಷ್ಟು ಓದಿ: ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು

2021ರಲ್ಲಿ ಕೊಲ್ಲಾಪುರ ನ್ಯಾಯಾಲಯ ಸುನೀಲ್ ಕುಚ್ಕೋರ್ವಿಗೆ ಮರಣದಂಡನೆ ವಿಧಿಸಿತ್ತು. ಅವರನ್ನು ಪುಣೆಯ ಯರವಾಡ ಜೈಲಿನಲ್ಲಿ ಇರಿಸಲಾಗಿದೆ. ಈ ಪ್ರಕರಣ ಅಪರೂಪದ ಪ್ರಕರಣವಾಗಿದ್ದು, ಈ ಹೇಯ ಹತ್ಯೆ ಸಮಾಜದ ಸಾಮಾಜಿಕ ಪ್ರಜ್ಞೆಯನ್ನು ಬುಡಮೇಲು ಮಾಡಿದೆ ಎಂದು ಸೆಷನ್ಸ್ ನ್ಯಾಯಾಲಯ ಅಂದು ಹೇಳಿತ್ತು. ಅಪರಾಧಿ ತನ್ನ ಅಪರಾಧ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ