Sign In

By signing in or creating an account, you agree with Associated Broadcasting Company's Terms & Conditions and Privacy Policy.

TRP ಹಗರಣ: ದೂರುದಾರರಿಗೆ ಕಿರುಕುಳ ನೀಡಬೇಡಿ; ಮುಂಬೈ ಪೊಲೀಸ್​ಗೆ ಹೈಕೋರ್ಟ್ ಸೂಚನೆ

ಮುಂಬೈ: ಹನ್ಸ್ ಗ್ರೂಪ್ ನೌಕರರನ್ನು ಪ್ರತಿದಿನ ಕೋರ್ಟ್​ಗೆ ಕರೆದು ಕಿರುಕುಳ ನೀಡಬೇಡಿ. ಅವರು ದೂರುದಾರರು, ಅಪರಾಧಿಗಳಲ್ಲ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರಿಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿ.ಆರ್.ಪಿ) ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗದ ಪೊಲೀಸರು ರಿಪಬ್ಲಿಕ್ ಟಿವಿ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುವಂತೆ ಹನ್ಸ್ ರಿಸರ್ಚ್ ಗ್ರೂಪ್ ನೌಕರರನ್ನು ಒತ್ತಾಯಿಸಿದ್ದಾರೆ ಎಂದು ಸಂಸ್ಥೆ ಆರೋಪಿಸಿ ಬಾಂಬೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಪ್ರತಿನಿತ್ಯ ತನ್ನ ನೌಕರರನ್ನು ಕರೆದು ತಾಸುಗಟ್ಟಲೇ […]

TRP ಹಗರಣ: ದೂರುದಾರರಿಗೆ ಕಿರುಕುಳ ನೀಡಬೇಡಿ; ಮುಂಬೈ ಪೊಲೀಸ್​ಗೆ ಹೈಕೋರ್ಟ್ ಸೂಚನೆ
ಬಾಂಬೆ ಹೈಕೋರ್ಟ್​
Follow us
KUSHAL V
|

Updated on: Nov 07, 2020 | 5:50 PM

ಮುಂಬೈ: ಹನ್ಸ್ ಗ್ರೂಪ್ ನೌಕರರನ್ನು ಪ್ರತಿದಿನ ಕೋರ್ಟ್​ಗೆ ಕರೆದು ಕಿರುಕುಳ ನೀಡಬೇಡಿ. ಅವರು ದೂರುದಾರರು, ಅಪರಾಧಿಗಳಲ್ಲ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರಿಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿ.ಆರ್.ಪಿ) ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗದ ಪೊಲೀಸರು ರಿಪಬ್ಲಿಕ್ ಟಿವಿ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುವಂತೆ ಹನ್ಸ್ ರಿಸರ್ಚ್ ಗ್ರೂಪ್ ನೌಕರರನ್ನು ಒತ್ತಾಯಿಸಿದ್ದಾರೆ ಎಂದು ಸಂಸ್ಥೆ ಆರೋಪಿಸಿ ಬಾಂಬೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು.

ಪ್ರತಿನಿತ್ಯ ತನ್ನ ನೌಕರರನ್ನು ಕರೆದು ತಾಸುಗಟ್ಟಲೇ ಅಪರಾಧ ವಿಭಾಗದಲ್ಲಿ ಕಾಯಿಸಲಾಗುತ್ತಿದೆ. ತಪ್ಪು ಹೇಳಿಕೆ ನೀಡುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಬಂಧನದ ಬೆದರಿಕೆ ಸಹ ಒಡ್ಡಲಾಗುತ್ತಿದೆ ಎಂದು ಹನ್ಸ್ ಗ್ರೂಪ್ ತಾನು ಸಲ್ಲಿಸಿರುವ ಮನವಿಯಲ್ಲಿ ಹೇಳಿತ್ತು. ಸಹಾಯಕ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಮತ್ತು ಮುಖ್ಯ ತನಿಖಾಧಿಕಾರಿ ಪ್ರಶಾಂತ್ ಸಂಡ್ಭೋರ್ ಅವರನ್ನು ಹನ್ಸ್​ ಸಂಸ್ಥೆ ತನ್ನ ಅರ್ಜಿಯಲ್ಲಿ ಉತ್ತರದಾಯಿಗಳನ್ನಾಗಿಸಿತ್ತು.

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಾಂಬೆ ಹೈಕೋರ್ಟ್​ನ ನ್ಯಾಯಪೀಠ, ಮುಂಬೈ ಅಪರಾಧ ವಿಭಾಗದ ಪೋಲೀಸರಿಗೆ ನೋಟಿಸ್​ ಜಾರಿಗೊಳಿಸಿದೆ. ಜೊತೆಗೆ ಮುಂದಿನ ವಿಚಾರಣೆಯವರೆಗೂ ಹನ್ಸ್ ಗ್ರೂಪ್ ನೌಕರರನ್ನು ವಾರಕ್ಕೆ ಎರಡು ಬಾರಿ ಮಾತ್ರ ಕರೆಸಿಕೊಳ್ಳುವುದಾಗಿ ಪೊಲೀಸರಿಂದ ಹೇಳಿಕೆ ಬರೆಸಿಕೊಂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹನ್ಸ್ ಗ್ರೂಪ್ ಪರ ವಕೀಲ ಎಸ್. ವೈದ್ಯನಾಥನ್, ಹನ್ಸ್ ಗ್ರೂಪ್ ತನಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಅಪರಾಧ ವಿಭಾಗದ ತನಿಖಾಧಿಕಾರಿಗಳಿಗೆ ನೀಡಲು ಸಿದ್ಧವಿದೆ. ಆದರೆ ನೌಕರರನ್ನು ಪ್ರತಿದಿನ ವಿಚಾರಣೆಗೆ ಕರೆಸುವುದು ಸರಿಯಲ್ಲ ಎಂದು ಮನವಿ ಮಾಡಿದೆ. ಮುಂಬೈ ಪೊಲೀಸ್ ಪರವಹಿಸಿರುವ ಹಿರಿಯ ನ್ಯಾಯವಾದಿ ದೇವದತ್ ಕಾಮತ್, ನ್ಯಾಯಾಲಯವು ತನಿಖಾ ವರದಿ ಮತ್ತು ರಿಟ್ ಅರ್ಜಿಯನ್ನು ಗಮನಿಸಬೇಕು. ಹನ್ಸ್ ರಿಸರ್ಚ್ ಗ್ರೂಪ್ ವಿರುದ್ಧದ ಸಾಕ್ಷ್ಯಗಳನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ