AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಕೊಠಡಿಯಲ್ಲಿ ವಕೀಲರು ಮಾಸ್ಕ್ ತೆಗೆದಿದ್ದಕ್ಕೆ ಅಹವಾಲು ಆಲಿಸಲ್ಲ ಎಂದ ಬಾಂಬೆ ಹೈಕೋರ್ಟ್

ಕೋರ್ಟ್ ಕೊಠಡಿಯಲ್ಲಿ ಅಹವಾಲು ಆಲಿಸುವಾಗ ವಕೀಲರು ಮಾಸ್ಕ್ ತೆಗೆದುಹಾಕಿದ್ದರಿಂದ ಬಾಂಬೆ ಹೈಕೋರ್ಟ್​ನಲ್ಲಿ ಆ ಪ್ರಕರಣದ ಅಹವಾಲನ್ನು ಆಲಿಸಲು ನಿರಾಕರಿಸಿರುವ ಬಗ್ಗೆ ವರದಿ ಆಗಿದೆ.

ಕೋರ್ಟ್ ಕೊಠಡಿಯಲ್ಲಿ ವಕೀಲರು ಮಾಸ್ಕ್ ತೆಗೆದಿದ್ದಕ್ಕೆ ಅಹವಾಲು ಆಲಿಸಲ್ಲ ಎಂದ ಬಾಂಬೆ ಹೈಕೋರ್ಟ್
ಬಾಂಬೆ ಹೈಕೋರ್ಟ್
Srinivas Mata
| Edited By: |

Updated on: Feb 27, 2021 | 7:47 PM

Share

ಮುಂಬೈ: ಕಕ್ಷಿದಾರರನ್ನು ಪ್ರತಿನಿಧಿಸುವ ವೇಳೆ ವಕೀಲರೊಬ್ಬರು ನ್ಯಾಯಾಲಯ ಕೊಠಡಿಯಲ್ಲಿ ಮುಖಕ್ಕೆ ಧರಿಸಿದ್ದ ಮಾಸ್ಕ್ ತೆಗೆದುಹಾಕಿದ್ದಕ್ಕೆ ಪ್ರಕರಣದ ಅಹವಾಲು ಆಲಿಸುವುದನ್ನು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಫೆಬ್ರವರಿ 22ನೇ ತಾರೀಕಿನಂದು ನಡೆದ ಘಟನೆಯ ಈ ಆದೇಶವು ಶನಿವಾರದಂದು ಲಭ್ಯವಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಒಬ್ಬರೇ ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠದ ನ್ಯಾ. ಪೃಥ್ವಿರಾಜ್ ಚವ್ಹಾಣ್ ಫೆಬ್ರವರಿ 22ರಂದು ಅಹವಾಲು ಆಲಿಸುತ್ತಿದ್ದರು. ಆ ವೇಳೆ ಕಕ್ಷಿದಾರರ ಪರ ವಕೀಲರು ಮಾರ್ಗದರ್ಶಿ ಸೂತ್ರಗಳಿಗೆ ವಿರುದ್ಧವಾಗಿ ನ್ಯಾಯಾಲಯದ ಕೊಠಡಿಯಲ್ಲಿ ಮಾಸ್ಕ್ ತೆಗೆದುಹಾಕಿದ್ದರು.

ವ್ಯಕ್ತಿಗಳ ಉಪಸ್ಥಿತಿಯಲ್ಲೇ ಪ್ರಕರಣದ ಅಹವಾಲು ಕೇಳುವ ವೇಳೆಯಲ್ಲಿ ಪಾಲಿಸಲೇಬೇಕೆಂದು ಹೈಕೋರ್ಟ್ ರೂಪಿಸಿರುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ (SOPs) ಬಗ್ಗೆ ನ್ಯಾಯಮೂರ್ತಿ ಚವ್ಹಾಣ್ ಮಾತನಾಡಿ, ಎಲ್ಲ ಸಮಯದಲ್ಲಿ ಮಾಸ್ಕ್ ಧರಿಸಿರುವುದು ಕಡ್ಡಾಯ ಎಂದಿದ್ದರು. ಆ ನಂತರ ಇದೇ ಪ್ರಕರಣದ ವಿಚಾರಣೆ ಬಂದಾಗ ಅದರ ಅಹವಾಲು ಆಲಿಸುವುದಕ್ಕೆ ನ್ಯಾಯಮೂರ್ತಿ ಚವ್ಹಾಣ್ ನಿರಾಕರಿಸಿದ್ದಾರೆ. “ಬೋರ್ಡ್​ನಿಂದ ಈ ವಿಷಯ ತೆಗೆಯಬೇಕು,” ಎಂದು ಆದೇಶ ಹೇಳಿದೆ.

ಸರದಿ ಬರುವ ತನಕ ಇತರರು ಕಾಯುತ್ತಿರಬೇಕು: ನ್ಯಾ. ಚವ್ಹಾಣ್ ಅವರು ಪ್ರಕರಣಗಳಿಗೆ ಸಂಬಂಧಿಸಿದ ವಕೀಲರಿಗೆ ಮಾತ್ರ ನ್ಯಾಯಾಲಯ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುತ್ತಿದ್ದಾರೆ. ಆ ಸಂದರ್ಭದಲ್ಲಿ ಇತರ ವಕೀಲರು ಮತ್ತು ಅವರ ಕಕ್ಷಿದಾರರು ತಮ್ಮ ಸರದಿಯ ಸಂಖ್ಯೆ ಬರುವ ತನಕ ಮತ್ತೊಂದು ಕೊಠಡಿಯಲ್ಲಿ ಕಾಯಬೇಕಾಗುತ್ತದೆ. ಪುಣೆ ಹೊರತುಪಡಿಸಿ ಮಹಾರಾಷ್ಟ್ರದಲ್ಲಿ ಹೈಕೋರ್ಟ್ ಮತ್ತು ಇತರ ಎಲ್ಲ ಸಹವರ್ತಿ ಕೋರ್ಟ್​​ಗಳಲ್ಲಿ ಎಂಟು ತಿಂಗಳ ನಂತರ ವ್ಯಕ್ತಿಯ ಸಮ್ಮುಖದಲ್ಲೇ ಅಹವಾಲು ಆಲಿಸುವುದಕ್ಕೆ ಆರಂಭಿಸಲಾಗಿದೆ.

ಕೊರೊನಾ ಆರಂಭವಾದಾಗಿನಿಂದ ಕೋರ್ಟ್​ಗಳು ಆನ್​ಲೈನ್​ನಲ್ಲಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಅಹವಾಲು ಆಲಿಸುತ್ತಿದ್ದವು. ಫೆಬ್ರವರಿ ಮಧ್ಯಭಾಗದಿಂದ ಮಹಾರಾಷ್ಟ್ರ ಮತ್ತು ಮುಂಬೈನಲ್ಲಿ ಹೊಸದಾಗಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಪೆಬ್ರವರಿ 26ಕ್ಕೆ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು 21,38,154 ದಾಖಲಾಗಿದ್ದವು. ಆ ಪೈಕಿ ಮುಂಬೈನಲ್ಲೇ 3,23,879 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ:ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ಒಂದೇ ಶಾಲೆಯ 229 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?