AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ಎಟಿಎಸ್​​ಗೆ: ಬಾಂಬೆ ಹೈಕೋರ್ಟ್

ನಿಜವಾದ ಮಾಸ್ಟರ್‌ಮೈಂಡ್‌ಗಳನ್ನು ಪತ್ತೆ ಹಚ್ಚಲು ರಾಜ್ಯ ಎಸ್‌ಐಟಿ ಇದುವರೆಗೆ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿ ಪನ್ಸಾರೆ ಅವರ ಸಂಬಂಧಿಕರು ಪ್ರಕರಣವನ್ನು ಎಟಿಎಸ್​​ಗೆ ವರ್ಗಾವಣೆ ಮಾಡುವಂತೆ ಕೋರಿದ್ದರು.

ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ಎಟಿಎಸ್​​ಗೆ: ಬಾಂಬೆ ಹೈಕೋರ್ಟ್
ಗೋವಿಂದ್ ಪನ್ಸಾರೆ
TV9 Web
| Edited By: |

Updated on:Aug 03, 2022 | 1:29 PM

Share

ಕಮ್ಯುನಿಸ್ಟ್ ನಾಯಕ ಗೋವಿಂದ ಪನ್ಸಾರೆ(Govind Pansare) ಅವರ ನಿಧನದ 7 ವರ್ಷಗಳ ನಂತರ ಅವರ ಹತ್ಯೆಯ ತನಿಖೆಯನ್ನು ರಾಜ್ಯ ಎಸ್‌ಐಟಿಯಿಂದ ಭಯೋತ್ಪಾದನಾ ನಿಗ್ರಹ ದಳಕ್ಕೆ ವರ್ಗಾಯಿಸುವಂತೆ ಬಾಂಬೆ ಹೈಕೋರ್ಟ್(Bombay High Court)ನಿರ್ದೇಶಿಸಿದೆ. ನಿಜವಾದ ಮಾಸ್ಟರ್‌ಮೈಂಡ್‌ಗಳನ್ನು ಪತ್ತೆ ಹಚ್ಚಲು ರಾಜ್ಯ ಎಸ್‌ಐಟಿ ಇದುವರೆಗೆ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿ ಪನ್ಸಾರೆ ಅವರ ಸಂಬಂಧಿಕರು ಪ್ರಕರಣವನ್ನು ಎಟಿಎಸ್​​ಗೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಮಹಾರಾಷ್ಟ್ರದ ಅಪರಾಧ ತನಿಖಾ ಇಲಾಖೆಯ (CID) ವಿಶೇಷ ತನಿಖಾ ತಂಡ (ಎಸ್‌ಐಟಿ) ಇದುವರೆಗೆ ಪ್ರಕರಣದ ತನಿಖೆ ನಡೆಸುತ್ತಿತ್ತು. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಪನ್ಸಾರೆ ಅವರ ಕುಟುಂಬ ಸದಸ್ಯರು ಸಲ್ಲಿಸಿದ ಅರ್ಜಿಯನ್ನು ಅನುಮತಿಸುವುದಾಗಿ ಮತ್ತು ತನಿಖೆಯನ್ನು ಎಟಿಎಸ್‌ಗೆ ವರ್ಗಾಯಿಸುವುದಾಗಿ ಹೇಳಿದೆ. ತನಿಖೆಗೆ ವಿಶೇಷ ತಂಡವನ್ನು ಕೋರಿ ಪನ್ಸಾರೆ ಅವರ ಕುಟುಂಬ ಸದಸ್ಯರು ಸಲ್ಲಿಸಿದ ಮನವಿಯ ಮೇರೆಗೆ ಬಾಂಬೆ ಹೈಕೋರ್ಟ್ ಆದೇಶದ ನಂತರ 2015 ರಲ್ಲಿ ಎಸ್‌ಐಟಿಯನ್ನು ರಚಿಸಲಾಗಿತ್ತು.

ಫೆಬ್ರವರಿ 16, 2015 ರಂದು ಕೊಲ್ಲಾಪುರದಲ್ಲಿ ಪನ್ಸಾರೆ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಫೆಬ್ರವರಿ 20 ರಂದು ನಿಧನರಾದರು. ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಕೆಲವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಲು ಎಸ್‌ಐಟಿಗೆ ಸಾಧ್ಯವಾಗಿಲ್ಲ ಎಂದು ಪನ್ಸಾರೆ ಕುಟುಂಬ ಸದಸ್ಯರು ಕಳೆದ ತಿಂಗಳು ತನಿಖೆಯನ್ನು ಎಟಿಎಸ್‌ಗೆ ವರ್ಗಾಯಿಸಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಸ್‌ಐಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ ಮುಂಡರಗಿ, ತನಿಖೆಯನ್ನು ಎಟಿಎಸ್‌ಗೆ ವರ್ಗಾಯಿಸಿದರೆ ಯಾವುದೇ ಅಭ್ಯಂತರವಿಲ್ಲ, ಅದೂ ಕೂಡ ರಾಜ್ಯ ಸರ್ಕಾರದ ಸಂಸ್ಥೆಯಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅದನ್ನು ನಾವು ಒಪ್ಪುತ್ತೇವೆ. ಎಟಿಎಸ್ ಅನ್ನು ನೇಮಿಸಬಹುದು. ಎಸ್‌ಐಟಿಯ ಕೆಲವು ಅಧಿಕಾರಿಗಳು ಎಟಿಎಸ್‌ಗೆ ಸಹಾಯ ಮಾಡುತ್ತಾರೆ ಎಂದು ಮುಂಡರಗಿ ಹೇಳಿದರು. ಯಾವ ಹಿರಿಯ ಅಧಿಕಾರಿ ತನಿಖೆಯ ನೇತೃತ್ವ ವಹಿಸುತ್ತಾರೆ ಎಂದು ನ್ಯಾಯಾಲಯವು ಪ್ರಶ್ನಿಸಿದಾಗ, ಹೆಚ್ಚುವರಿ ಮಹಾನಿರ್ದೇಶಕರು (ಎಡಿಜಿ) ಎಟಿಎಸ್‌ನ ಹಿರಿಯ ಅಧಿಕಾರಿಯಾಗಿದ್ದು, ಅವರು ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಮುಂಡರಗಿ ಉತ್ತರಿಸಿದ್ದಾರೆ.

ಹತ್ಯೆಯ ಹಿಂದಿನ ಮಾಸ್ಟರ್‌ಮೈಂಡ್‌ಗಳು ಮತ್ತು ಶೂಟರ್‌ಗಳು ಇನ್ನೂ ಪತ್ತೆಯಾಗಿಲ್ಲ. ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪನ್ಸಾರೆ ಕುಟುಂಬದ ಪರವಾಗಿ ವಕೀಲ ಅಭಯ್ ನೇವಗಿ ನ್ಯಾಯಾಲಯಕ್ಕೆ ತಿಳಿಸಿದರು.

ಎಸ್‌ಐಟಿ ಪ್ರಕಾರ, ಪನ್ಸಾರೆ ಹತ್ಯೆಯ ಹಿಟ್‌ಲಿಸ್ಟ್‌ನಲ್ಲಿ ಸುಮಾರು 40 ಜನರಿದ್ದಾರೆ. ಇದರಲ್ಲಿ ಅವರ ಕುಟುಂಬ ಸದಸ್ಯರು, ಹತ್ಯೆಯಾದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಮತ್ತು ಮೇಧಾ ಪಾಟ್ಕರ್ ಅವರ ಕುಟುಂಬವೂ ಸೇರಿದೆ. ಮಾಸ್ಟರ್‌ಮೈಂಡ್‌ಗಳನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ ಎಂದಿದ್ದಾರೆ ನೇವಗಿ.

ದಾಭೋಲ್ಕರ್ ಮತ್ತು ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಈ ಹಂತದಲ್ಲಿ ತನಿಖೆಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸುವುದನ್ನು ವಿರೋಧಿಸಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲು ನ್ಯಾಯಾಲಯ ಬುಧವಾರ ನಿರಾಕರಿಸಿದೆ.

Published On - 12:01 pm, Wed, 3 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ