AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ದೇಶ್​ಮುಖ್ ಮಾಡಿರುವ ವರ್ಗಾವಣೆ ಮತ್ತು ನಿಯೋಜನೆಗಳ ಬಗ್ಗೆಯೂ ಸಿಬಿಐ ತನಿಖೆ ನಡೆಸಬಹುದು: ಬಾಂಬೆ ಹೈಕೋರ್ಟ್

ಸಿಬಿಐ ಸಲ್ಲಿಸಿದ್ದ ಎಫ್​ಐಆರ್​ ಪ್ರಶ್ನಿಸಿದ್ದ ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನು ಬಾಂಬೆ ಹೈಕೋರ್ಟ್​ ವಜಾ ಮಾಡಿದೆ.

ಅನಿಲ್ ದೇಶ್​ಮುಖ್ ಮಾಡಿರುವ ವರ್ಗಾವಣೆ ಮತ್ತು ನಿಯೋಜನೆಗಳ ಬಗ್ಗೆಯೂ ಸಿಬಿಐ ತನಿಖೆ ನಡೆಸಬಹುದು: ಬಾಂಬೆ ಹೈಕೋರ್ಟ್
ಬಾಂಬೆ ಹೈಕೋರ್ಟ್​
TV9 Web
| Edited By: |

Updated on: Jul 22, 2021 | 4:48 PM

Share

ಮುಂಬೈ: ಮುಂಬೈನ ಹಿಂದಿನ ಪೊಲೀಸ್ ಆಯುಕ್ತ ಪರಮ್​ಬೀರ್ ಸಿಂಗ್​ ಲಂಚದ ಆರೋಪ ಮಾಡಿದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಾರಾಷ್ಟ್ರ ಸರ್ಕಾರದ ಹಿಂದಿನ ಗೃಹ ಸಚಿವ ಅನಿಲ್ ದೇಶ್​ಮುಖ್ ಮಾಡಿರುವ ವರ್ಗಾವಣೆಗಳು ಮತ್ತು ನಿಯೋಜನೆಗಳ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಬಿಐಗೆ ಇದೆ ಎಂದು ಬಾಂಬೆ ಹೈಕೋರ್ಟ್​ ಗುರುವಾರ ಸ್ಪಷ್ಟಪಡಿಸಿದೆ. ಸಿಬಿಐ ಸಲ್ಲಿಸಿದ್ದ ಎಫ್​ಐಆರ್​ ಪ್ರಶ್ನಿಸಿದ್ದ ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನು ಬಾಂಬೆ ಹೈಕೋರ್ಟ್​ ವಜಾ ಮಾಡಿದೆ.

ಅನಿಲ್​ ದೇಶ್​ಮುಖ್ ವಿರುದ್ಧ ಸಲ್ಲಿಕೆಯಾಗಿರುವ ಎಫ್​ಐಆರ್​ನಲ್ಲಿ ಎರಡು ಪ್ಯಾರಾಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ಸರ್ಕಾರ ಕೋರಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್​.ಎಸ್​.ಶಿಂದೆ ಮತ್ತು ಎನ್​.ಜೆ.ಜಮಾದಾರ್ ಅವರಿದ್ದ ಪೀಠವು ತೀರ್ಪು ನೀಡಿತು. ಅನಿಲ್​ ದೇಶಮುಖ್ ಮತ್ತು ಅವರ ಸಹವರ್ತಿಗಳು ಮಾಡಿರುವ ಯಾವುದೇ ವರ್ಗಾವಣೆ ಅಥವಾ ನಿಯೋಜನೆಗಳ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಬಿಐಗೆ ಇದೆ ಎಂದು ನ್ಯಾಯಾಲಯ ಹೇಳಿತು.

ಈ ಪ್ರಕರಣದಲ್ಲಿ ಈಗಾಗಲೇ ನಡೆಯುತ್ತಿರುವ ಹಲವು ತನಿಖೆಗಳಲ್ಲಿ ಸಿಬಿಐ ಹಸ್ತಕ್ಷೇಪಕ್ಕೆ ಇದು ಅವಕಾಶ ಮಾಡಿಕೊಡುತ್ತದೆ ಎಂಬ ಕಾರಣ ಮುಂದಿಟ್ಟು ಈ ತೀರ್ಪನ್ನು ಹಿಂಪಡೆಯಬೇಕು ಎಂದು ಮಹಾರಾಷ್ಟ್ರ ಸರ್ಕಾರ ಕೋರಿತು. ಈ ಮನವಿಯನ್ನೂ ಹೈಕೋರ್ಟ್​ ತಿಳ್ಳಿ ಹಾಕಿತು.

‘ಅನಿಲ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ನಿಲ್ಲಿಸಿದ್ದ ಆರೋಪಿ ವಾಜೆಯನ್ನು 15 ವರ್ಷಗಳ ನಂತರ ಮತ್ತೆ ಪೊಲೀಸ್ ಸೇವೆಗೆ ನಿಯೋಜನೆ ಮಾಡಿದ್ದೂ ಸೇರಿದಂತೆ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾಗ ತೆಗೆದುಕೊಂಡ ಯಾವುದೇ ನಿಯೋಜನೆ ಮತ್ತು ವರ್ಗಾವಣೆ ನಿರ್ಧಾರಗಳ ಬಗ್ಗೆ ಸಿಬಿಐ ತನಿಖೆ ನಡೆಸಬಹುದಾಗಿದೆ’ ಎಂದು ಹೈಕೋರ್ಟ್ ಹೇಳಿತು.

‘ನಮ್ಮ ತೀರ್ಪನ್ನು ತಪ್ಪಾಗಿ ಅರ್ಥೈಸಬೇಡಿ. ಅನಿಲ್ ದೇಶ್​ಮುಖ್ ನಿರ್ಧಾರಗಳನ್ನು ಸಿಬಿಐ ತನಿಖೆ ನಡೆಸಬಹುದು ಎಂದು ನಾವು ಹೇಳಿದಾಕ್ಷಣ ನೇರವಾಗಿ ಈ ಪ್ರಕರಣದ ಪರಿಮಿತಿಯಲ್ಲಿ ಇಲ್ಲದ ಪೊಲೀಸ್​ ಇಲಾಖೆಯ ವ್ಯವಹಾರಗಳಲ್ಲಿ ಸಿಬಿಐ ಹಸ್ತಕ್ಷೇಪ ನಡೆಸಬಹುದು ಎಂದು ಅಲ್ಲ’ ಎಂದು ನ್ಯಾಯಪೀಠವು ವಿವರಣೆ ನೀಡಿತು.

(Bombay High Court gives Authority to CBI to Investigate Transfers and Postings By Anil Deshmukh)

ಇದನ್ನೂ ಓದಿ: ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ: ದಾವೂದ್ ಸಹಚರ ಅಬ್ದುಲ್ ರೌಫ್ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಇದನ್ನೂ ಓದಿ: ‘ಸೂಪರ್ ಕಾಪ್‘ ಆಗಲು ನಾನೇ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇಟ್ಟಿದ್ದೆ; ತಪ್ಪೊಪ್ಪಿಗೆ ಹೇಳಿಕೆ ನೀಡಿದ ಸಚಿನ್ ವಾಜೆ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ