AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TRP Scam | ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್​ಗುಪ್ತಾಗೆ ಜಾಮೀನು ಮಂಜೂರು

TRP Scam: ಬಾರ್ಕ್​ ಸಂಸ್ಥೆಯ ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಅರ್ನಬ್​ ಗೋಸ್ವಾಮಿ ಬೇರೆ ಬೇರೆ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಹಣ ಸಂದಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಾವು ಕೋರ್ಟ್​ಗೆ ಸಲ್ಲಿಸಿರುವ Remand Report ನಲ್ಲಿ ಉಲ್ಲೇಖಿಸಿದ್ದರು.

TRP Scam | ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್​ಗುಪ್ತಾಗೆ ಜಾಮೀನು ಮಂಜೂರು
ಮುಂಬೈಯ ಸೆಶನ್ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾರ್ಥೋ ದಾಸ್​ಗುಪ್ತಾ ಬಾಂಬೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
guruganesh bhat
|

Updated on:Mar 02, 2021 | 12:53 PM

Share

ಮುಂಬೈ: ಟಿಆರ್‌ಪಿ ತಿರುಚಿದ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಅವರಿಗೆ ಬಾಂಬೇ ಹೈಕೋರ್ಟ್ ಜಾಮೀನು ನೀಡಿದೆ. ರೂ.2 ಲಕ್ಷ ವೈಯಕ್ತಿಕ ಭದ್ರತೆ ಬಾಂಡ್ ಮತ್ತು ಅದೇ ಮೊತ್ತದ ಎರಡು ಭದ್ರತಾ ಠೇವಣಿ ನೀಡಿ ಜಾಮೀನು ಪಡೆಯಲು ಸೂಚಿಸಿದೆ. ಜತೆಗೆ, ಆರು ತಿಂಗಳವರೆಗೆ ಪ್ರತಿ ತಿಂಗಳ ಮೊದಲ ಶನಿವಾರದಂದು ಮುಂಬೈ ಕ್ರೈಂ ಬ್ರಾಂಚ್​ಗೆ ಹಾಜರಾಗುವಂತೆ ಕೋರ್ಟ್ ಷರತ್ತು ವಿಧಿಸಿದೆ.

ಸೆಕ್ಷನ್ 439ರ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್​ ಆಧರಿಸಿ​ ಆರೋಗ್ಯಕ್ಕೆ ಸಂಬಂಧಿಸಿ ಪಾರ್ಥೋ ದಾಸ್​ಗುಪ್ತಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡು ವಾರಗಳ ಹಿಂದೆ ವಿಚಾರಣೆ ನಡೆಸಿದ್ದ ಮುಂಬೈ ಹೈಕೋರ್ಟ್ ಇಂದು ಆದೇಶ ನೀಡುವುದಾಗಿ ತಿಳಿಸಿತ್ತು. ಮುಂಬೈಯ ಸೆಶನ್ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾರ್ಥೋ ದಾಸ್​ಗುಪ್ತಾ ಬಾಂಬೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆಯಲ್ಲಿ ಹಿರಿಯ ವಕೀಲರುಗಳಾದ ಆಬಾದ್ ಪೋಂಡಾ ಮತ್ತು ಶಾರ್ದೂಲ್ ಸಿಂಗ್ ಅವರು ಪಾರ್ಥೋ ದಾಸ್​ಗುಪ್ತಾ ಅವರ ಪರ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆಯೇನು? ರಿಪಬ್ಲಿಕ್​ ಟಿವಿ ಮತ್ತು ರಿಪಬ್ಲಿಕ್​ ಭಾರತ್​ ವಾಹಿನಿಗಳ ಟಿಆರ್​ಪಿಯನ್ನು ಅಕ್ರಮವಾಗಿ ಹೆಚ್ಚಿಸುವ ಸಲುವಾಗಿ ಬಾರ್ಕ್​ ಸಂಸ್ಥೆಯ ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಅರ್ನಬ್​ ಗೋಸ್ವಾಮಿ ಬೇರೆ ಬೇರೆ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಹಣ ಸಂದಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಾವು ಕೋರ್ಟ್​ಗೆ ಸಲ್ಲಿಸಿರುವ Remand Report ನಲ್ಲಿ ಉಲ್ಲೇಖಿಸಿದ್ದರು. ಈ ಮೂಲಕ ಟಿಆರ್​ಪಿ ಅಕ್ರಮ ಪ್ರಕರಣದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಮುಂಬೈ ಪೊಲೀಸರು ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸಿದ್ದರು.

ಪಾರ್ಥೋ ದಾಸ್​ಗುಪ್ತಾ ಅವರು ಬಾರ್ಕ್​ ಸಂಸ್ಥೆಯ ಸಿಇಓ ಆಗಿದ್ದಾಗ ಅವರೊಂದಿಗೆ ಅಂದಿನ ಇತರೆ ಸಿಬ್ಬಂದಿ ಕೂಡಾ ಅಕ್ರಮದಲ್ಲಿ ಶಾಮೀಲಾಗಿರಬಹುದು ಎಂದು Remand Report ವರದಿಯಲ್ಲಿ ಅನುಮಾನಿಸಲಾಗಿದೆ. ಟೈಮ್ಸ್ ನೌ ವಾಹಿನಿಯಲ್ಲಿ ಜೊತೆಯಾಗಿ ಕೆಲಸ ಮಾಡಿದ್ದ ಅರ್ನಬ್​ ಮತ್ತು ದಾಸ್​ಗುಪ್ತಾ ಇಬ್ಬರೂ ರಿಪಬ್ಲಿಕ್ ಟಿವಿಯ ಟಿಆರ್​ಪಿ ಹೆಚ್ಚಳದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು.

ಮುಂಬೈನ ಹೊಟೇಲುಗಳಲ್ಲಿ ಡಾಲರ್​ ರೂಪದಲ್ಲಿ ಹಣ ನೀಡಿದ್ದಾರೆ? ಟಿಆರ್​ಪಿ ಹೆಚ್ಚಿಸುವುದಕ್ಕಾಗಿ ಅವರಿಬ್ಬರೂ ಕನಿಷ್ಠ 3 ಬಾರಿ ಮುಂಬೈನ ಬೇರೆ ಬೇರೆ ಹೊಟೇಲುಗಳಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ದಾಸ್​ಗುಪ್ತಾ ಅವರಿಗೆ ಅರ್ನಬ್​ ದೊಡ್ಡ ಮೊತ್ತದ ನಗದನ್ನು ನೀಡಿದ್ದಾರೆ ಮತ್ತು ಒಂದು ಬಾರಿ ಯುಎಸ್​ ಡಾಲರ್​ನಲ್ಲಿ ಅವರಿಗೆ ಹಣ ಸಂದಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

TRP ಹಗರಣದಲ್ಲಿ ಅರ್ನಬ್​ ಗೋಸ್ವಾಮಿ ಶಾಮೀಲು.. ಮೊಟ್ಟಮೊದಲ ಬಾರಿಗೆ ಅರ್ನಬ್​ ಹೆಸರು ಪ್ರಸ್ತಾಪಿಸಿದ ಮುಂಬೈ ಪೊಲೀಸರು

Published On - 12:27 pm, Tue, 2 March 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ