AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ದೇಶ್​ಮುಖ್ ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಏಕೆ?; ಪರಮ್​ವೀರ್ ಸಿಂಗ್​ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ನೀವೊಬ್ಬ ಪೊಲೀಸ್ ಅಧಿಕಾರಿ. ನೀವು ಅಧಿಕಾರದ ಅವಧಿಯಲ್ಲಿದ್ದಾಗ ತಪ್ಪು ನಡೆಯುತ್ತಿರುವುದು ಕಂಡರೆ, ಎಫ್​ಐಆರ್ ದಾಖಲಿಸಬಹುದಿತ್ತು. ಯಾಕೆ ಆ ಕ್ರಮ ಕೈಗೊಳ್ಳಲಿಲ್ಲ? ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಎಂದಾದರೆ ನೀವು ನಿಮ್ಮ ಕರ್ತವ್ಯದಲ್ಲಿ ಸೋತಂತೆ.

ಅನಿಲ್ ದೇಶ್​ಮುಖ್ ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಏಕೆ?; ಪರಮ್​ವೀರ್ ಸಿಂಗ್​ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ
ಪರಮ್​ವೀರ್ ಸಿಂಗ್ ಹಾಗೂ ಬಾಂಬೆ ಹೈಕೋರ್ಟ್
TV9 Web
| Updated By: ganapathi bhat|

Updated on:Apr 05, 2022 | 1:00 PM

Share

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧದ ಆರೋಪಗಳ ಬಗ್ಗೆ ಅರಿವು ಇರುವಾಗಲೂ ಅವರ ವಿರುದ್ಧ ಎಫ್​ಐಆರ್ ದಾಖಲಿಸಿಲ್ಲ ಎಂಬ ಬಗ್ಗೆ ಮುಂಬೈನ ಹಿಂದಿನ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಅವರನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಎಫ್​ಐಆರ್ ಇಲ್ಲದ ಕಾರಣ ಪ್ರಕರಣದ ತನಿಖೆ ನಡೆಸಲಾಗದಿದ್ದರೂ ವಿಚಾರಣೆ ನಡೆಸಬಹುದು ಎಂದು ಪರಮ್​ವೀರ್ ಸಿಂಗ್ ಪರ ವಕೀಲರು ವಾದ ಮಂಡಿಸಿದ್ದಾರೆ.

ನೀವೊಬ್ಬ ಪೊಲೀಸ್ ಅಧಿಕಾರಿ. ನೀವು ಅಧಿಕಾರದಲ್ಲಿದ್ದಾಗ ತಪ್ಪು ನಡೆಯುತ್ತಿರುವುದು ಕಂಡರೆ ಎಫ್​ಐಆರ್ ದಾಖಲಿಸಬಹುದಿತ್ತು. ಯಾಕೆ ಆ ಕ್ರಮ ಕೈಗೊಳ್ಳಲಿಲ್ಲ? ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಎಂದಾದರೆ ನೀವು ನಿಮ್ಮ ಕರ್ತವ್ಯದಲ್ಲಿ ಸೋತಂತೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದರೆ ಸಾಲುವುದಿಲ್ಲ. ಯಾವುದೇ ನಾಗರಿಕನಿಗೆ ಅಪರಾಧ ಕಂಡುಬಂದರೆ ಎಫ್​ಐಆರ್ ದಾಖಲಿಸುವುದು ಆತನ ಕರ್ತವ್ಯ ಎಂದು ನ್ಯಾಯಪೀಠ ಹೇಳಿರುವ ಬಗ್ಗೆ ಲೈವ್ ಲಾ ವರದಿ ಮಾಡಿದೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಮಾಜಿ ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್​ವೀರ್ ಸಿಂಗ್ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು ವಿಚಾರಣೆ ನಡೆಸಿದೆ. ಅನಿಲ್ ದೇಶ್​ಮುಖ್, ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಪ್ರತಿ ತಿಂಗಳು ಬಾರ್ ಹಾಗೂ ರೆಸ್ಟೋರೆಂಟ್​ಗಳಿಂದ ₹ 100 ಕೋಟಿ ದಂಡ ಸಂಗ್ರಹಿಸಲು ತಿಳಿಸಿದ್ದರು. ಈ ಕಾರಣಕ್ಕಾಗಿ ಅನಿಲ್ ದೇಶ್​ಮುಖ್ ವಿರುದ್ಧ ಪರಮ್​ವೀರ್ ಸಿಂಗ್ ಪಿಐಎಲ್ ದಾಖಲಿಸಿದ್ದರು.

ಪರಮ್​ವೀರ್ ಸಿಂಗ್ ಬಾಂಬೆ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾರ್ಚ್ 25ರಂದು ದಾಖಲಿಸಿದ್ದರು. ಪೊಲೀಸ್ ಇಲಾಖೆಯ ಪೊಲೀಸರ ವರ್ಗಾವಣೆ ವಿಚಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಾಗಿಯೂ ಅವರು ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಮುಂಬೈನ ಹಿಂದಿನ ಪೊಲೀಸ್ ಕಮಿಷನರ್ ಪರಮ್​ವೀರ್​ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿತ್ತು. ಬಾಂಬೆ ಹೈಕೋರ್ಟ್​ನಲ್ಲಿಯೇ ಅರ್ಜಿ ಹಾಕಿಕೊಳ್ಳಿ ಎಂದು ಸೂಚಿಸಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪರಮ್​ವೀರ್​ ಸಿಂಗ್​ ಬಾಂಬೆ ಹೈಕೋರ್ಟ್​ಗೆ ಅರ್ಜಿ ಹಾಕಿದ್ದರು. ತಮ್ಮ ಅರ್ಜಿಯಲ್ಲಿ ಮಹಾರಾಷ್ಟ್ರದ ಹಾಲಿ ಗೃಹ ಸಚಿವ ಅನಿಲ್ ದೇಶ್​ಮುಖ್​ ವಿರುದ್ಧ ಗಂಭೀರ ಆರೋಪ ಮಾಡಿದ್ದ ಪರಮ್​ವೀರ್​ಸಿಂಗ್, ಗೃಹ ಸಚಿವರಾಗಿ ದೇಶ್​ಮುಖ್​ ಅವರು ಲಂಚ ಸ್ವೀಕರಿಸಿ ಪ್ರತಿ ತಿಂಗಳು ರೂ 100 ಕೋಟಿ ಕಪ್ಪ ತಂದು ಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಆಣತಿ ನೀಡಿದ್ದಾರೆ. ಇದನ್ನು ತನಿಖೆಗಾಗಿ ಕೂಡಲೇ ಸಿಬಿಐಗೆ ಒಪ್ಪಿಸಬೇಕು ಎಂದು ತಮ್ಮ ಕೇಳಿದ್ದರು.

ಇದನ್ನೂ ಓದಿ: ಪರಮ್​ವೀರ್​ ಸಿಂಗ್​ ಅರ್ಜಿ ಸುಪ್ರೀಂನಲ್ಲಿ ತಿರಸ್ಕಾರ; ಬಾಂಬೆ ಹೈಕೋರ್ಟ್​ಗೆ ಹೋಗಲು ಆದೇಶ

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 6:17 pm, Wed, 31 March 21

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ