AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​
ಸುಶಾಂತ್​ ಸಿಂಗ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 15, 2021 | 3:26 PM

Share

ಮುಂಬೈ: ದೇಶವ್ಯಾಪಿ ಸಂಚಲನ ಸೃಷ್ಟಿಸಿದ್ದ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಸಹೋದರಿ ಮೀತು ಸಿಂಗ್​ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಬಾಂಬೇ ಹೈಕೋರ್ಟ್​ ವಜಾ ಮಾಡಿದೆ. ಅವರ ಮತ್ತೋರ್ವ ಸಹೋದರಿಯಾದ ಪ್ರಿಯಾಂಕಾ ಸಿಂಗ್​ ವಿರುದ್ಧ ತನಿಖೆ ಮುಂದುವರಿಸಬಹುದು ಎಂದು ಕೋರ್ಟ್​ ಹೇಳಿದೆ.

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದರು. ಈ ಪ್ರಕರಣ ರದ್ದು ಮಾಡುವಂತೆ ಸುಶಾಂತ್​ ಸಹೋದರಿಯರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು.

 ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ನ್ಯಾಯಮೂರ್ತಿ ಎಸ್​.ಎಸ್​. ಶಿಂಧೆ ಹಾಗೂ ಎಂಎಸ್​​ ಕಾರ್ನಿಕ್​ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಿ ಜನವರಿ 7ರಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಇಂದು ನೀಡಲಾಗಿದೆ. ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಹೀಗಾಗಿ, ಅವರ ವಿರುದ್ಧದ ತನಿಖೆ ಮುಂದುವರಿಯಬೇಕು. ಇದಕ್ಕೆ ಯಾವುದೇ ಅಡೆತಡೆ  ಉಂಟಾಗಬಾರದು ಎಂದು ಪೀಠ ಹೇಳಿದೆ. ಇದೇ ವೇಳೆ, ಮೀತು ಸಿಂಗ್​ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

ಕಳೆದ ವರ್ಷ ಜೂನ್​ 14ರಂದು ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಹಿಂದೆ ಬಾಲಿವುಡ್​ ಮಂದಿಯ ಕೈವಾಡವಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ದೊಡ್ಡ ದೊಡ್ಡ ನಿರ್ಮಾಪಕರ ಹೆಸರು ಕೂಡ ಇದಕ್ಕೆ ತಳುಕು ಹಾಕಿಕೊಂಡಿತ್ತು.

ಇದನ್ನೂ ಓದಿ: ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್