AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​
ಸುಶಾಂತ್​ ಸಿಂಗ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 15, 2021 | 3:26 PM

Share

ಮುಂಬೈ: ದೇಶವ್ಯಾಪಿ ಸಂಚಲನ ಸೃಷ್ಟಿಸಿದ್ದ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಸಹೋದರಿ ಮೀತು ಸಿಂಗ್​ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಬಾಂಬೇ ಹೈಕೋರ್ಟ್​ ವಜಾ ಮಾಡಿದೆ. ಅವರ ಮತ್ತೋರ್ವ ಸಹೋದರಿಯಾದ ಪ್ರಿಯಾಂಕಾ ಸಿಂಗ್​ ವಿರುದ್ಧ ತನಿಖೆ ಮುಂದುವರಿಸಬಹುದು ಎಂದು ಕೋರ್ಟ್​ ಹೇಳಿದೆ.

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದರು. ಈ ಪ್ರಕರಣ ರದ್ದು ಮಾಡುವಂತೆ ಸುಶಾಂತ್​ ಸಹೋದರಿಯರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು.

 ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ನ್ಯಾಯಮೂರ್ತಿ ಎಸ್​.ಎಸ್​. ಶಿಂಧೆ ಹಾಗೂ ಎಂಎಸ್​​ ಕಾರ್ನಿಕ್​ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಿ ಜನವರಿ 7ರಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಇಂದು ನೀಡಲಾಗಿದೆ. ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಹೀಗಾಗಿ, ಅವರ ವಿರುದ್ಧದ ತನಿಖೆ ಮುಂದುವರಿಯಬೇಕು. ಇದಕ್ಕೆ ಯಾವುದೇ ಅಡೆತಡೆ  ಉಂಟಾಗಬಾರದು ಎಂದು ಪೀಠ ಹೇಳಿದೆ. ಇದೇ ವೇಳೆ, ಮೀತು ಸಿಂಗ್​ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

ಕಳೆದ ವರ್ಷ ಜೂನ್​ 14ರಂದು ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಹಿಂದೆ ಬಾಲಿವುಡ್​ ಮಂದಿಯ ಕೈವಾಡವಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ದೊಡ್ಡ ದೊಡ್ಡ ನಿರ್ಮಾಪಕರ ಹೆಸರು ಕೂಡ ಇದಕ್ಕೆ ತಳುಕು ಹಾಕಿಕೊಂಡಿತ್ತು.

ಇದನ್ನೂ ಓದಿ: ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ