AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​
ಸುಶಾಂತ್​ ಸಿಂಗ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 15, 2021 | 3:26 PM

Share

ಮುಂಬೈ: ದೇಶವ್ಯಾಪಿ ಸಂಚಲನ ಸೃಷ್ಟಿಸಿದ್ದ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಸಹೋದರಿ ಮೀತು ಸಿಂಗ್​ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಬಾಂಬೇ ಹೈಕೋರ್ಟ್​ ವಜಾ ಮಾಡಿದೆ. ಅವರ ಮತ್ತೋರ್ವ ಸಹೋದರಿಯಾದ ಪ್ರಿಯಾಂಕಾ ಸಿಂಗ್​ ವಿರುದ್ಧ ತನಿಖೆ ಮುಂದುವರಿಸಬಹುದು ಎಂದು ಕೋರ್ಟ್​ ಹೇಳಿದೆ.

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದರು. ಈ ಪ್ರಕರಣ ರದ್ದು ಮಾಡುವಂತೆ ಸುಶಾಂತ್​ ಸಹೋದರಿಯರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು.

 ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ನ್ಯಾಯಮೂರ್ತಿ ಎಸ್​.ಎಸ್​. ಶಿಂಧೆ ಹಾಗೂ ಎಂಎಸ್​​ ಕಾರ್ನಿಕ್​ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಿ ಜನವರಿ 7ರಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಇಂದು ನೀಡಲಾಗಿದೆ. ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಹೀಗಾಗಿ, ಅವರ ವಿರುದ್ಧದ ತನಿಖೆ ಮುಂದುವರಿಯಬೇಕು. ಇದಕ್ಕೆ ಯಾವುದೇ ಅಡೆತಡೆ  ಉಂಟಾಗಬಾರದು ಎಂದು ಪೀಠ ಹೇಳಿದೆ. ಇದೇ ವೇಳೆ, ಮೀತು ಸಿಂಗ್​ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

ಕಳೆದ ವರ್ಷ ಜೂನ್​ 14ರಂದು ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಹಿಂದೆ ಬಾಲಿವುಡ್​ ಮಂದಿಯ ಕೈವಾಡವಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ದೊಡ್ಡ ದೊಡ್ಡ ನಿರ್ಮಾಪಕರ ಹೆಸರು ಕೂಡ ಇದಕ್ಕೆ ತಳುಕು ಹಾಕಿಕೊಂಡಿತ್ತು.

ಇದನ್ನೂ ಓದಿ: ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು