AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಮಿಲ್​ ಗ್ಯಾಂಗ್​ ರೇಪ್​​ ಪ್ರಕರಣ: ಆರೋಪಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್​

ಮುಂಬೈನ ನಿಷ್ಕ್ರಿಯ ಶಕ್ತಿ ಮಿಲ್​​ ಫೋಟೋ ತೆಗೆದು ವರದಿ ಮಾಡುವುದಕ್ಕೋಸ್ಕರ 22ವರ್ಷದ ಮಹಿಳಾ ಫೋಟೋ ಜರ್ನಲಿಸ್ಟ್​ವೊಬ್ಬರು ತನ್ನ ಪುರುಷ ಸಹೋದ್ಯೋಗಿಯೊಟ್ಟಿಗೆ ಅಲ್ಲಿಗೆ ತೆರಳಿದ್ದರು. ಆಗ ಅವರ ಮೇಲೆ ಐವರು ಅತ್ಯಾಚಾರ ಮಾಡಿದ್ದರು.

ಶಕ್ತಿ ಮಿಲ್​ ಗ್ಯಾಂಗ್​ ರೇಪ್​​ ಪ್ರಕರಣ: ಆರೋಪಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್​
ಬಾಂಬೆ ಹೈಕೋರ್ಟ್​
TV9 Web
| Edited By: |

Updated on: Nov 25, 2021 | 2:29 PM

Share

ಮುಂಬೈನ ಶಕ್ತಿ ಮಿಲ್​ ಗ್ಯಾಂಗ್​ರೇಪ್​ ಆರೋಪಿಗಳಿಗೆ ಈ ಹಿಂದೆ ವಿಧಿಸಲಾಗಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್​ ರದ್ದುಗೊಳಿಸಿ, ಅದನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದೆ. ಅಲ್ಲದೆ, ಯಾವುದೇ ನ್ಯಾಯಾಲಯಗಳು ತೀರ್ಪ ನೀಡಲು ಸಾರ್ವಜನಿಕ ಪ್ರತಿಭಟನೆಗಳು, ಆಕ್ರೋಶಗಳು ಮಾರ್ಗದರ್ಶನ ನೀಡುವಂತಾಗಬಾರದು ಎಂದು ತಿಳಿಸಿದೆ.  ಶಕ್ತಿ ಮಿಲ್ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ಸಮಾಜದ ಆತ್ಮಸಾಕ್ಷಿಯನ್ನೇ ನಡುಗಿಸಿದೆ. ಅಂದು ರೇಪ್​ಗೆ ಒಳಗಾದ ಯುವತಿ ಕೇವಲ ದೈಹಿಕವಾಗಿಯಲ್ಲದೆ, ಮಾನಸಿಕವಾಗಿಯೂ ತುಂಬ ಸಫರ್​ ಆಗಿದ್ದಾಳೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಅದೆಷ್ಟೋ ಜನರು ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಂದ ಮಾತ್ರಕ್ಕೆ ಸಾರ್ವಜನಿಕರ ಆಕ್ರೋಶ ಆಧರಿಸಿ ನ್ಯಾಯಾಲಯಗಳು ತೀರ್ಪು ನೀಡಬಾರದು ಎಂದು ಹೈಕೋರ್ಟ್ ಹೇಳಿದೆ. 

ಕೋರ್ಟ್​ನ ಈಗಿನ ತೀರ್ಪೇನು? ಶಕ್ತಿ ಮಿಲ್​ ಗ್ಯಾಂಗ್​ರೇಪ್​​ನ ಆರೋಪಿಗಳಿಗೆ ಮರಣದಂಡನೆಯನ್ನು ರದ್ದುಗೊಳಿಸಿದ ನ್ಯಾಯಾಲಯ ಇದೀಗ ಜೀವಾವಧಿ ಶಿಕ್ಷೆ ವಿಧಿಸಿದೆ. ಜೀವನ ಪರ್ಯಂತ ಅವರು ಜೈಲಿನಲ್ಲಿಯೇ ಕಳೆಯಬೇಕು ಎಂದು ಹೇಳಿದೆ. ಹಾಗೇ, ಪೆರೋಲ್​ ಅಥವಾ ಇನ್ಯಾವುದೇ ಕಾನೂನು ನಿಯಮಾನುಸಾರವೂ ಅವರು ಒಮ್ಮೆಯೂ ಹೊರಗೆ ಬರುವಂತಿಲ್ಲ. ಜಾಮೀನಿಗೆ ಅವಕಾಶವಿಲ್ಲ. ಯಾವ ಕಾರಣಕ್ಕೂ ಅವರು ಈ ಸಮಾಜದೊಟ್ಟಿಗೆ ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಏನಿದು ಶಕ್ತಿ ಮಿಲ್​ ಗ್ಯಾಂಗ್​ ರೇಪ್​ 2013ರಲ್ಲಿ ನಡೆದ ಗ್ಯಾಂಗ್​ ರೇಪ್ ಇದು. ಮುಂಬೈನ ನಿಷ್ಕ್ರಿಯ ಶಕ್ತಿ ಮಿಲ್​​ ಫೋಟೋ ತೆಗೆದು ವರದಿ ಮಾಡುವುದಕ್ಕೋಸ್ಕರ 22ವರ್ಷದ ಮಹಿಳಾ ಫೋಟೋ ಜರ್ನಲಿಸ್ಟ್​ವೊಬ್ಬರು ತನ್ನ ಪುರುಷ ಸಹೋದ್ಯೋಗಿಯೊಟ್ಟಿಗೆ ಅಲ್ಲಿಗೆ ತೆರಳಿದ್ದರು. ಆದರೆ ಅಲ್ಲಿ ಐದು ಮಂದಿ ಪುರುಷ ಉದ್ಯೋಗಿಯನ್ನು ಕಟ್ಟಿ ಹಾಕಿ ಯುವತಿಯನ್ನು ರೇಪ್​ ಮಾಡಿದ್ದರು. ಈ ಐವರು ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತನೂ ಆಗಿದ್ದ. ಆಗ ಆತನನ್ನು ರಿಮ್ಯಾಂಡ್ ಹೋಂಗೆ ಕಳಿಸಿ ಕೆಲವೇ ವರ್ಷಗಳ ನಂತರ ಬಿಡುಗಡೆ ಮಾಡಲಾಗಿತ್ತು.  ಇನ್ನು 2014ರಲ್ಲಿ ಈ ಆರೋಪಿಗಳಿಗೆ ಟ್ರಯಲ್​ ಕೋರ್ಟ್​ ಮರಣದಂಡನೆ ವಿಧಿಸಿತ್ತು. ಅದನ್ನೀಗ ಹೈಕೋರ್ಟ್​ ರದ್ದು ಮಾಡಿದೆ.

ಇದನ್ನೂ ಓದಿ: 200MP Smartphone: ಮೋಟೋ ಕಂಪನಿಯಿಂದ ಹೊಸ ಪ್ರಯೋಗ: ಬರುತ್ತಿದೆ 200MP ಕ್ಯಾಮೆರಾದ ಸ್ಮಾರ್ಟ್​ಫೋನ್

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು