AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: 6 ಕಡೆಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಬೆದರಿಕೆ ಕರೆ

ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಅಪರಿಚಿತರು ಬೆದರಿಕೆ ಹಾಕಿದ್ದಾರೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಗರದ 6 ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಅದು ತಲುಪಿತು.

ಮುಂಬೈ: 6 ಕಡೆಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಬೆದರಿಕೆ ಕರೆ
ಟ್ರಾಫಿಕ್ ಪೊಲೀಸ್​
ನಯನಾ ರಾಜೀವ್
|

Updated on: Feb 02, 2024 | 9:23 AM

Share

ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಅಪರಿಚಿತರು ಬೆದರಿಕೆ ಹಾಕಿದ್ದಾರೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಗರದ 6 ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ತಲುಪಿತ್ತು.

ಈ ಮಾಹಿತಿಯನ್ನು ತಕ್ಷಣವೇ ಮುಂಬೈ ಪೊಲೀಸರಿಗೆ ನೀಡಲಾಯಿತು. ಮಾಹಿತಿ ಪಡೆದ ಮುಂಬೈ ಪೊಲೀಸರು ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚಲು ಆರಂಭಿಸಿದ್ದಾರೆ.

ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿವೆ. ಆದರೆ ಯಾವುದನ್ನೂ ನೆಗ್ಲೆಕ್ಟ್​ ಮಾಡುವಂತಿಲ್ಲ.

ಮತ್ತಷ್ಟು ಓದಿ:Bomb Threat: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!

ಕಳೆದ ವರ್ಷದ ಘಟನೆ ಮುಂಬೈ: ಆರ್‌ಬಿಐ, ವಿವಿಧ ಬ್ಯಾಂಕ್‌ಗಳ ಕೇಂದ್ರ ಕಚೇರಿಗಳಿಗೆ ಹುಸಿ ಬಾಂಬ್‌ ಬೆದರಿಕೆ ನಗರದ ಆರ್‌ಬಿಐ ಕೇಂದ್ರ ಕಚೇರಿ ಸೇರಿದಂತೆ ಹನ್ನೊಂದು ಕಡೆಗಳಲ್ಲಿ ಮಧ್ಯಾಹ್ನ 1.30 ಗಂಟೆಗೆ ಬಾಂಬ್‌ ಸ್ಫೋಟವಾಗುತ್ತದೆ. ಎಲ್ಲೆಡೆ ಶಕ್ತಿಶಾಲಿ ಬಾಂಬ್‌ಗಳನ್ನು ಅಳವಡಿಸಲಾಗಿದೆ ಎಂಬ ಬೆದರಿಕೆ ಸಂದೇಶದ ಇ-ಮೇಲ್‌ ಮಂಗಳವಾರ ಪೊಲೀಸರನ್ನು ತಲ್ಲಣಗೊಳಿಸಿತ್ತು.

ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಎಲ್ಲೆಡೆ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು. ಪೊಲೀಸರ ಜತೆ ಬಾಂಬ್‌ ಪತ್ತೆ ದಳ ಕೂಡ ಜತೆಗೂಡಿತ್ತು. ಆದರೆ ಯಾವುದೇ ಶಂಕಿತ ವಸ್ತುಗಳೂ ಪತ್ತೆಯಾಗಲಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದರು.

ಬಾಂಬ್‌ ಬೆದರಿಕೆ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ರಾಜೀನಾಮೆ ನೀಡಬೇಕು ಎಂದು ಇ-ಮೇಲ್‌ನಲ್ಲಿ ಒತ್ತಾಯಿಸಲಾಗಿತ್ತು. ಅಲ್ಲದೆ ಬ್ಯಾಂಕಿಂಗ್‌ ಹಗರಣವನ್ನು ಬಹಿರಂಗಪಡಿಸುವ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ಬಿಡುಗಡೆ ಮಾಡಬೇಕು ಎಂದು ಇ – ಮೇಲ್‌ನಲ್ಲಿ ಒತ್ತಾಯಿಸಲಾಗಿತ್ತು.

ಬೆದರಿಕೆ ಸಂದೇಶದವನ್ನು ಕಳುಹಿಸಿದ ಇ-ಮೇಲ್‌ನಲ್ಲಿ ಕಿಲಾಫತ್‌ ಇಂಡಿಯಾ ಎಂಬ ಯೂಸರ್‌ನೇಮ್‌ ಇತ್ತು. ಈ ಸಂಬಂಧ ಮುಂಬಯಿನ ಎಂಆರ್‌ಎ ಮಾರ್ಗ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ